AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ

ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ ಮಾಡಿದೆ.

ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ
ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ
TV9 Web
| Edited By: |

Updated on:Jan 05, 2023 | 3:20 PM

Share

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ (Cooker Blast) ಪ್ರಕರಣದ ತನಿಖೆಯನ್ನು ಎನ್​ಐಎ ಚುರುಕುಗೊಳಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಇಂದು(ಜನವರಿ 05) ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್  (Mangaluru PA Engineering College)ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನಿಂದ ಬಂದಿರುವ 7 NIA ಅಧಿಕಾರಿಗಳು ಕಾಲೇಜಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಬಂಧಿತ ಶಂಕಿತ ಉಗ್ರ ಮಾಝ್ ಮುನೀರ್ ಪಿ ಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದಾರೆ. ಹಾಗೂ ಶಂಕಿತ ಉಗ್ರ ಶಾರಿಕ್​ ವಿಚಾರಣೆ ನಡೆಸಿದ ಬಳಿಕ ಆತನಿಂದ ಕೆಲ ಮಾಹಿತಿಗಳ ಆಧಾರದ ಮೇಲೆ NIA ಅಧಿಕಾರಿಗಳು ಪಿ.ಎ.ಇಂಜಿನಿಯರಿಂಗ್​ ಕಾಲೇಜಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಟ್ರಾಯಲ್ ಬ್ಲಾಸ್ಟ್ ನಲ್ಲಿ ಶಿವಮೊಗ್ಗ ಪೊಲೀಸರು ಮಾಝ್ ಮುನೀರ್ ಬಂಧಿಸಿದ್ದರು. ಸದ್ಯ ಈ ಪ್ರಕರಣದ ತನಿಖೆಯನ್ನು ಎನ್.ಐ.ಎ ನಡೆಸುತ್ತಿದೆ. ಇನ್ನು ಮಾಝ್ ಮುನೀರ್​ ಜೊತೆ ಕುಕ್ಕರ್ ಬ್ಲಾಸ್ಟ್ ರೂವಾರಿ ಶಾರೀಕ್ ಇದ್ದ. ಈ ಹಿನ್ನೆಲೆಯಲ್ಲಿ ಮಂಗಳೂರಿನ ‌ಕುಕ್ಕರ್ ಬಾಂಬ್ ಸ್ಪೋಟಕ್ಕೂ ನಂಟು‌ ಸಾಧ್ಯತೆ ಇದ್ಯಾ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.

Published On - 3:12 pm, Thu, 5 January 23

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!