
ಮಂಗಳೂರು, ಏಪ್ರಿಲ್ 25: ಜಮ್ಮು-ಕಾಶ್ಮೀರದ (Jammu and Kashmir) ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು (Pahalgam Terror Attack) ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 192 ಮತ್ತು 353(1)(,b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಬುಕ್ ಪೇಜ್ನ ಡಿಪಿಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ನಿಚ್ಚು ಮಂಗಳೂರು ಎಂಬ ಫೇಸ್ಬುಕ್ ಪೇಜ್ನಲ್ಲಿ, “2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್ ಹಾಕಲಾಗಿದೆ. ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ಬುಕ್ ಪೇಜ್ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದರು. ನಮ್ಮ ಸರ್ಕಾರ ಬಂದರೆ, ಹಿಂದೂ ಮನೆಗಳಲ್ಲಿ ಒಬ್ಬನೂ ಉಳಿಯುವುದಿಲ್ಲ ಎಂದು ಮೊಯಿನ್ ಸಿದ್ದಿಕಿ ಅಲಿಯಾಸ್ ಚೋಟಿ ಕಟ್ವಾ ಹೇಳಿದ್ದರು.
ಇದನ್ನೂ ಓದಿ: ಗಂಡನ ಕಳೆದುಕೊಂಡ ದುಃಖದಲ್ಲಿದ್ದರೆ, ಹತ್ಯೆಗೆ ಸಂಚು ರೂಪಿಸಿದ್ದೇ ಪತ್ನಿ ಎಂದವ ಅರೆಸ್ಟ್
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಕೃತ್ಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು ಸಮರ್ಥಿಸಿಕೊಂಡಿದ್ದ ಎಐಯುಡಿಎಫ್ ಶಾಸಕ ಅಮಿನಲ್ ಇಸ್ಲಾಂ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದರು.
ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ದಾಳಿಗೆ ಕಾರಣ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಇದು ವಿವಾದಕ್ಕೀಡಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಕ್ಷಮೆಯಾವಿಸಿದ್ದಾರೆ.
Published On - 9:39 am, Fri, 25 April 25