AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರತ್ಕಲ್​ನಲ್ಲಿ ಫಾಜಿಲ್ ಹತ್ಯೆ: ನೈಟ್ ಕರ್ಫ್ಯೂ ಜಾರಿ, ಮಂಗಳೂರು ಸಂಪೂರ್ಣ ಸ್ತಬ್ಧ

ಮಂಗಳೂರಿನ ಸುರತ್ಕಲ್ನಲ್ಲಿ ಫಾಜೀಲ್ ಹತ್ಯೆ ಹಿನ್ನೆಲೆ ಸಂಜೆ 6 ರಿಂದ ಬೆಳಗ್ಗೆ 6 ವರಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಸುರತ್ಕಲ್​ನಲ್ಲಿ ಫಾಜಿಲ್ ಹತ್ಯೆ: ನೈಟ್ ಕರ್ಫ್ಯೂ ಜಾರಿ, ಮಂಗಳೂರು ಸಂಪೂರ್ಣ ಸ್ತಬ್ಧ
ಮಂಗಳೂರಿನಲ್ಲಿ ಹೈ ಅಲರ್ಟ್​
TV9 Web
| Edited By: ಆಯೇಷಾ ಬಾನು|

Updated on:Jul 29, 2022 | 9:26 PM

Share

ಮಂಗಳೂರು: ಮಂಗಳೂರಿನ ಸುರತ್ಕಲ್ನಲ್ಲಿ ಫಾಜೀಲ್ ಹತ್ಯೆ ಹಿನ್ನೆಲೆ ಸಂಜೆ 6 ರಿಂದ ಬೆಳಗ್ಗೆ 6 ವರಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಬಂದ್ ಆಗಿರಲಿದೆ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಜಿಲ್ಲಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿಗಳು ಬಂದ್ ಮಾಡಲು ಆದೇಶ ಹೊರಡಿಸಿದ್ದರು. ಈಗ ನೈಟ್ ಕರ್ಫ್ಯೂ ಜಾರಿಯಿಂದಾಗಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧವಾದಂತಾಗಿದೆ.

ಮಂಗಳೂರಿನಲ್ಲಿ ಎಲ್ಲವೂ ಬಂದ್

ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿಗಳು ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇಂದಿನಿಂದ(ಜುಲೈ 29) ಆಗಸ್ಟ್ 1ರ ಬೆಳಗ್ಗೆ 6ರವರೆಗೆ ಆದೇಶ ಅನ್ವಯವಾಗಲಿದೆ. ತುರ್ತು ಸೇವೆಗಳನ್ನ ಹೊರತು ಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಮಾಡಲು ತಿಳಿಸಲಾಗಿದೆ. ಹಾಗೂ ಎಲ್ಲಾ ಗ್ರಾ.ಪಂ. ಮತ್ತು ಸ್ಥಳೀಯ ಸಂಸ್ಥೆಗಳಿಗೂ ಈ ಆದೇಶ ಅನ್ವಯವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧ

ಇಡೀ ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಈಗಾಗಲೇ ಬಜ್ಪೆ, ಪಣಂಬೂರು, ಮುಲ್ಕಿ ಸುರತ್ಕಲ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದು ಜಿಲ್ಲೆಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಕರಾವಳಿಯಲ್ಲಿ ಸರಣಿ ಕೊಲೆ.. ಸಿಟಿಯಲ್ಲಿ ಹೈಅಲರ್ಟ್

ಕರಾವಳಿಯ ಹತ್ಯಾಕಾಂಡದಿಂದ ಬೆಚ್ಚಿರುವ ಸರ್ಕಾರ, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿದೆ. ಇವತ್ತು, ಪೊಲೀಸ್ ಮಹಾನಿರ್ದೇಶಕರನ್ನ ಕರೆಸಿಕೊಂಡು ಸಿಎಂ ಚರ್ಚೆ ನಡೆಸಿದ್ರು. ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸೂಚಿಸಿದ್ರು. ಹಾಗೇ, ಫಾಜಿಲ್​​ ಹತ್ಯೆಗೈದಿರುವ ಹಂತಕರ ಪತ್ತೆಗೆ ತಂಡ ರಚಿಸಿದ್ದೇವೆ ಅಂತಂದ್ರು.

ಇನ್ನು, ಬೆಂಗಳೂರು ಡಿಸಿಪಿಗಳ ಜತೆ ಪೊಲೀಸ್ ಕಮಿಷನರ್ ಸಭೆ ನಡೆಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಬಂದೋಬಸ್ತ್​ ಹೆಚ್ಚು ಮಾಡಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಕೆಲವೊಂದು ನಿರ್ದಿಷ್ಟ ಪ್ರದೇಶಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ನಗರಕ್ಕೆ ಬರುವ ಹೋಗುವವರ ಮೇಲೆ ನಿಗಾವಹಿಸಿದ್ದಾರೆ.

Published On - 9:10 pm, Fri, 29 July 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!