AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Controversy: ಟಿಸಿ ಹಿಂಪಡೆದ 145 ಮುಸ್ಲಿಂ ವಿದ್ಯಾರ್ಥಿನಿಯರು; ಬಿಸಿ ನಾಗೇಶ್​ ಯೋಚಿಸಬೇಕಿತ್ತು ಎಂದ ಗೌಸಿಯಾ

ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ.

Hijab Controversy: ಟಿಸಿ ಹಿಂಪಡೆದ 145 ಮುಸ್ಲಿಂ ವಿದ್ಯಾರ್ಥಿನಿಯರು; ಬಿಸಿ ನಾಗೇಶ್​ ಯೋಚಿಸಬೇಕಿತ್ತು ಎಂದ ಗೌಸಿಯಾ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Aug 22, 2022 | 12:17 PM

Share

ಮಂಗಳೂರು: ಕಾಲೇಜಿನಲ್ಲಿ ಹಿಜಾಬ್ (Hijab) ಧರಿಸಲು ಅವಕಾಶ ನೀಡದ ಹಿನ್ನೆಲೆ 145 ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನಿಂದ ಟಿಸಿ ಪಡೆದಿರುವಂತಹ ಘಟನೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ದ.ಕ‌ ಜಿಲ್ಲೆ, ಉಡುಪಿ ಜಿಲ್ಲೆಯಾದ್ಯಾಂತ 16% ಮುಸ್ಲಿಂ ವಿದ್ಯಾರ್ಥಿನಿಯರಿಂದ ಟಿಸಿ ಹಿಂಪಡೆಯಲಾಗಿದೆ. ಟಿಸಿ ಪಡೆಯಬಹುದು ಅಂತಾ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಹೇಳಿದ್ದರು. ಈ ಹಿನ್ನಲೆಯಲ್ಲಿ ದ.ಕನ್ನಡ, ಉಡುಪಿ ಜಿಲ್ಲೆಯ 900 ವಿದ್ಯಾರ್ಥಿನಿಯರ ಪೈಕಿ 145 ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಪಡೆದಿದ್ದಾರೆ. ಸರ್ಕಾರಿ ಕಾಲೇಜಿನಿಂದ 34%, ಅನುದಾನಿತ ಕಾಲೇಜಿನಿಂದ 13% ವಿದ್ಯಾರ್ಥಿನಿಯರಿಂದ ಟಿಸಿ ಹಿಂಪಡೆಯಲಾಗಿದೆ. ಈ ಕುರಿತಾಗಿ ಆರ್​ಟಿಐ ಪ್ರಶ್ನೆಗೆ ಶಿಕ್ಷಣ ಇಲಾಖೆ ಉತ್ತರ ನೀಡಿದೆ.

ಇದನ್ನೂ ಓದಿ: Gurulingaswamy Holimath: ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನ

ಟಿಸಿ ಪಡೆಯಲು ಸಚಿವ ಬಿ.ಸಿ ನಾಗೇಶ್ ಕಾರಣ: ವಿದ್ಯಾರ್ಥಿನಿ ಗೌಸಿಯಾ

ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ ಕಾಲೇಜಿನಿಂದ ಗೌಸಿಯಾ ಟಿಸಿ ಪಡೆದಿದ್ದಾಳೆ. ಈ ಎಲ್ಲಾ ಘಟನೆಗಳಿಗೆ ಸಚಿವ ಬಿ.ಸಿ ನಾಗೇಶ್ ಕಾರಣ. ಸಂವಿಧಾನ ನೀಡಿರುವ ಹಕ್ಕಿನ ಪ್ರಕಾರ ಶಿಕ್ಷಣ ಪಡೆಯಲು ನಾಗೇಶ್ ಬಿಡಲಿಲ್ಲ.

ಇದನ್ನೂ ಓದಿ: ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಬಸವರಾಜ ಹೂಗಾರ

ತುಂಡು ಬಟ್ಟೆಯನ್ನೇ ದೊಡ್ಡ ವಿವಾದವನ್ನಾಗಿ ನಾಗೇಶ್ ಮಾಡಿದ್ದಾರೆ. ಇದರಿಂದ ಸರ್ಕಾರಕ್ಕೇ ನಷ್ಟವಾಗಲಿದೆ. ಹಲವು ಸರ್ಕಾರಿ ಕಾಲೇಜುಗಳು ಮುಚ್ಚಲಿದೆ. ಇಡೀ ರಾಜ್ಯಾದ್ಯಂತ 30% ಅಧಿಕ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ. ರಾಜ್ಯಕ್ಕೆ ಇದು ಜಲ್ವಂತ ಸಮಸ್ಯೆಯಾಗಲಿದೆ ಎಂದು ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿ ಗೌಸಿಯಾ ಹೇಳಿಕೆ ನೀಡಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:47 am, Mon, 22 August 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್