AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Controversy: ಟಿಸಿ ಹಿಂಪಡೆದ 145 ಮುಸ್ಲಿಂ ವಿದ್ಯಾರ್ಥಿನಿಯರು; ಬಿಸಿ ನಾಗೇಶ್​ ಯೋಚಿಸಬೇಕಿತ್ತು ಎಂದ ಗೌಸಿಯಾ

ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ.

Hijab Controversy: ಟಿಸಿ ಹಿಂಪಡೆದ 145 ಮುಸ್ಲಿಂ ವಿದ್ಯಾರ್ಥಿನಿಯರು; ಬಿಸಿ ನಾಗೇಶ್​ ಯೋಚಿಸಬೇಕಿತ್ತು ಎಂದ ಗೌಸಿಯಾ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Aug 22, 2022 | 12:17 PM

Share

ಮಂಗಳೂರು: ಕಾಲೇಜಿನಲ್ಲಿ ಹಿಜಾಬ್ (Hijab) ಧರಿಸಲು ಅವಕಾಶ ನೀಡದ ಹಿನ್ನೆಲೆ 145 ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನಿಂದ ಟಿಸಿ ಪಡೆದಿರುವಂತಹ ಘಟನೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ದ.ಕ‌ ಜಿಲ್ಲೆ, ಉಡುಪಿ ಜಿಲ್ಲೆಯಾದ್ಯಾಂತ 16% ಮುಸ್ಲಿಂ ವಿದ್ಯಾರ್ಥಿನಿಯರಿಂದ ಟಿಸಿ ಹಿಂಪಡೆಯಲಾಗಿದೆ. ಟಿಸಿ ಪಡೆಯಬಹುದು ಅಂತಾ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಹೇಳಿದ್ದರು. ಈ ಹಿನ್ನಲೆಯಲ್ಲಿ ದ.ಕನ್ನಡ, ಉಡುಪಿ ಜಿಲ್ಲೆಯ 900 ವಿದ್ಯಾರ್ಥಿನಿಯರ ಪೈಕಿ 145 ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಪಡೆದಿದ್ದಾರೆ. ಸರ್ಕಾರಿ ಕಾಲೇಜಿನಿಂದ 34%, ಅನುದಾನಿತ ಕಾಲೇಜಿನಿಂದ 13% ವಿದ್ಯಾರ್ಥಿನಿಯರಿಂದ ಟಿಸಿ ಹಿಂಪಡೆಯಲಾಗಿದೆ. ಈ ಕುರಿತಾಗಿ ಆರ್​ಟಿಐ ಪ್ರಶ್ನೆಗೆ ಶಿಕ್ಷಣ ಇಲಾಖೆ ಉತ್ತರ ನೀಡಿದೆ.

ಇದನ್ನೂ ಓದಿ: Gurulingaswamy Holimath: ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನ

ಟಿಸಿ ಪಡೆಯಲು ಸಚಿವ ಬಿ.ಸಿ ನಾಗೇಶ್ ಕಾರಣ: ವಿದ್ಯಾರ್ಥಿನಿ ಗೌಸಿಯಾ

ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ ಕಾಲೇಜಿನಿಂದ ಗೌಸಿಯಾ ಟಿಸಿ ಪಡೆದಿದ್ದಾಳೆ. ಈ ಎಲ್ಲಾ ಘಟನೆಗಳಿಗೆ ಸಚಿವ ಬಿ.ಸಿ ನಾಗೇಶ್ ಕಾರಣ. ಸಂವಿಧಾನ ನೀಡಿರುವ ಹಕ್ಕಿನ ಪ್ರಕಾರ ಶಿಕ್ಷಣ ಪಡೆಯಲು ನಾಗೇಶ್ ಬಿಡಲಿಲ್ಲ.

ಇದನ್ನೂ ಓದಿ: ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಬಸವರಾಜ ಹೂಗಾರ

ತುಂಡು ಬಟ್ಟೆಯನ್ನೇ ದೊಡ್ಡ ವಿವಾದವನ್ನಾಗಿ ನಾಗೇಶ್ ಮಾಡಿದ್ದಾರೆ. ಇದರಿಂದ ಸರ್ಕಾರಕ್ಕೇ ನಷ್ಟವಾಗಲಿದೆ. ಹಲವು ಸರ್ಕಾರಿ ಕಾಲೇಜುಗಳು ಮುಚ್ಚಲಿದೆ. ಇಡೀ ರಾಜ್ಯಾದ್ಯಂತ 30% ಅಧಿಕ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ. ರಾಜ್ಯಕ್ಕೆ ಇದು ಜಲ್ವಂತ ಸಮಸ್ಯೆಯಾಗಲಿದೆ ಎಂದು ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿ ಗೌಸಿಯಾ ಹೇಳಿಕೆ ನೀಡಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:47 am, Mon, 22 August 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ