AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Controversy: ಟಿಸಿ ಹಿಂಪಡೆದ 145 ಮುಸ್ಲಿಂ ವಿದ್ಯಾರ್ಥಿನಿಯರು; ಬಿಸಿ ನಾಗೇಶ್​ ಯೋಚಿಸಬೇಕಿತ್ತು ಎಂದ ಗೌಸಿಯಾ

ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ.

Hijab Controversy: ಟಿಸಿ ಹಿಂಪಡೆದ 145 ಮುಸ್ಲಿಂ ವಿದ್ಯಾರ್ಥಿನಿಯರು; ಬಿಸಿ ನಾಗೇಶ್​ ಯೋಚಿಸಬೇಕಿತ್ತು ಎಂದ ಗೌಸಿಯಾ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Aug 22, 2022 | 12:17 PM

Share

ಮಂಗಳೂರು: ಕಾಲೇಜಿನಲ್ಲಿ ಹಿಜಾಬ್ (Hijab) ಧರಿಸಲು ಅವಕಾಶ ನೀಡದ ಹಿನ್ನೆಲೆ 145 ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನಿಂದ ಟಿಸಿ ಪಡೆದಿರುವಂತಹ ಘಟನೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ದ.ಕ‌ ಜಿಲ್ಲೆ, ಉಡುಪಿ ಜಿಲ್ಲೆಯಾದ್ಯಾಂತ 16% ಮುಸ್ಲಿಂ ವಿದ್ಯಾರ್ಥಿನಿಯರಿಂದ ಟಿಸಿ ಹಿಂಪಡೆಯಲಾಗಿದೆ. ಟಿಸಿ ಪಡೆಯಬಹುದು ಅಂತಾ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಹೇಳಿದ್ದರು. ಈ ಹಿನ್ನಲೆಯಲ್ಲಿ ದ.ಕನ್ನಡ, ಉಡುಪಿ ಜಿಲ್ಲೆಯ 900 ವಿದ್ಯಾರ್ಥಿನಿಯರ ಪೈಕಿ 145 ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಪಡೆದಿದ್ದಾರೆ. ಸರ್ಕಾರಿ ಕಾಲೇಜಿನಿಂದ 34%, ಅನುದಾನಿತ ಕಾಲೇಜಿನಿಂದ 13% ವಿದ್ಯಾರ್ಥಿನಿಯರಿಂದ ಟಿಸಿ ಹಿಂಪಡೆಯಲಾಗಿದೆ. ಈ ಕುರಿತಾಗಿ ಆರ್​ಟಿಐ ಪ್ರಶ್ನೆಗೆ ಶಿಕ್ಷಣ ಇಲಾಖೆ ಉತ್ತರ ನೀಡಿದೆ.

ಇದನ್ನೂ ಓದಿ: Gurulingaswamy Holimath: ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನ

ಟಿಸಿ ಪಡೆಯಲು ಸಚಿವ ಬಿ.ಸಿ ನಾಗೇಶ್ ಕಾರಣ: ವಿದ್ಯಾರ್ಥಿನಿ ಗೌಸಿಯಾ

ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ ಕಾಲೇಜಿನಿಂದ ಗೌಸಿಯಾ ಟಿಸಿ ಪಡೆದಿದ್ದಾಳೆ. ಈ ಎಲ್ಲಾ ಘಟನೆಗಳಿಗೆ ಸಚಿವ ಬಿ.ಸಿ ನಾಗೇಶ್ ಕಾರಣ. ಸಂವಿಧಾನ ನೀಡಿರುವ ಹಕ್ಕಿನ ಪ್ರಕಾರ ಶಿಕ್ಷಣ ಪಡೆಯಲು ನಾಗೇಶ್ ಬಿಡಲಿಲ್ಲ.

ಇದನ್ನೂ ಓದಿ: ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಬಸವರಾಜ ಹೂಗಾರ

ತುಂಡು ಬಟ್ಟೆಯನ್ನೇ ದೊಡ್ಡ ವಿವಾದವನ್ನಾಗಿ ನಾಗೇಶ್ ಮಾಡಿದ್ದಾರೆ. ಇದರಿಂದ ಸರ್ಕಾರಕ್ಕೇ ನಷ್ಟವಾಗಲಿದೆ. ಹಲವು ಸರ್ಕಾರಿ ಕಾಲೇಜುಗಳು ಮುಚ್ಚಲಿದೆ. ಇಡೀ ರಾಜ್ಯಾದ್ಯಂತ 30% ಅಧಿಕ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ. ರಾಜ್ಯಕ್ಕೆ ಇದು ಜಲ್ವಂತ ಸಮಸ್ಯೆಯಾಗಲಿದೆ ಎಂದು ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿ ಗೌಸಿಯಾ ಹೇಳಿಕೆ ನೀಡಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:47 am, Mon, 22 August 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ