AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​ನ ಬರ್ಬರ ಹತ್ಯೆ

ಮಂಗಳೂರಿನ ಕುಖ್ಯಾತ ರೌಡಿಶೀಟರ್​​ ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಫರಂಗಿಪೇಟೆ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ರೌಡಿಶೀಟರ್​​ನನ್ನು ದುಷ್ಕರ್ಮಿಗಳು ಕೊಚ್ಚಿ ಕೊಂದಿದ್ದಾರೆ. ಸದ್ಯ ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​ನ ಬರ್ಬರ ಹತ್ಯೆ
ರೌಡಿಶೀಟರ್ ಟೋಪಿ ನೌಫಾಲ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Nov 01, 2025 | 8:30 PM

Share

ಮಂಗಳೂರು, ನವೆಂಬರ್​ 01: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​​ನ (Rowdysheeter) ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿ ನಡೆದಿದೆ. ರೌಡಿಶೀಟರ್ ಟೋಪಿ ನೌಫಾಲ್​​ ಅನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (murder) ಮಾಡಿದ್ದಾರೆ. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಯಾರೀತ ನೌಫಾಲ್?

ಮಂಗಳೂರಿನ ಫೈಸಲ್​ನಗರದ ನಿವಾಸಿಯಾಗಿರುವ ರೌಡಿಶೀಟರ್ ಟೋಪಿ ನೌಫಾಲ್, ಮಂಗಳೂರಿನ ನಟೋರಿಯಸ್ ರೌಡಿಯೊಂದಿಗೆ ಸೇರಿ ಡ್ರಗ್ಸ್​ ಸೇವನೆ ಮತ್ತು ವಹಿವಾಟು ಮಾಡುತ್ತಿದ್ದ. 2017ರಲ್ಲಿ ಮಂಗಳೂರಿನ ಫರಂಗಿಪೇಟೆಯಲ್ಲಿ ನಡೆದಿದ್ದ ಜೋಡಿ ಕೊಲೆ ಕೇಸ್​ನ ಪ್ರಮುಖ ಆರೋಪಿ.

ಇದನ್ನೂ ಓದಿ: ವರದಕ್ಷಿಣ ಕಿರುಕುಳಕ್ಕೆ ಯುವತಿ ಬಲಿ?: ಮೃತಳ ಪೋಷಕರಿಂದ ಗಂಭೀರ ಆರೋಪ

ನೌಫಾಲ್​​ ಮಾರಿಪಳ್ಳ ಜಬ್ಬಾರ್​, ತಲ್ಲತ್​ ಗ್ಯಾಂಗ್​​ ಜೊತೆಗೂ ಗುರುತಿಸಿಕೊಂಡಿದ್ದ. ಬಳಿಕ ತನ್ನದೇ ತಂಡವೊಂದನ್ನು ಕಟ್ಟಿಕೊಂಡು ಡ್ರಗ್ಸ್​​, ವಸೂಲಿ, ಅಕ್ರಮ ಚಿನ್ನ ವಹಿವಾಟು ಮತ್ತು ಕೊಲೆಯತ್ನ ಮಾಡುತ್ತಿದ್ದ. ನೌಫಾಲ್ ವಿರುದ್ಧ ಮಂಗಳೂರಿನಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಡಂಬಲ್ಸ್​ನಿಂದ ತಲೆಗೆ ಹೊಡೆದು ಸಹ ಕೆಲಸಗಾರ ಕೊಲೆ

ಕ್ಲುಲ್ಲಕ‌ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ 1:30ಕ್ಕೆ ನಡೆದಿದೆ. ಸೋಮಲಾ ವಂಶಿ (24) ಮೃತ ವ್ಯಕ್ತಿ. ಡಂಬಲ್ಸ್​ನಿಂದ ತಲೆಗೆ ಹೊಡೆದು ಭೀಮೇಶ್ ಬಾಬು ಎಂಬುವವರಿಂದ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ದೇವನಹಳ್ಳಿ: ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನ; ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಡಾಟಾ ಡಿಜಿಟಲ್ ಬ್ಯಾಂಕ್ ಹಾಗೂ ಸಿನಿಮಾಗಳಿಗೆ ಚಿತ್ರೀಕರಣ ಮಾಡುವ ಕಂಪನಿಯಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಪ್ರತಿನಿತ್ಯ ಕಂಪನಿಯಲ್ಲಿಯೇ ಮಲಗುತ್ತಿದ್ದರು. ಹೀಗಾಗಿ ಲೈಟ್ ಆನ್ ಮಾಡುವ ವಿಚಾರಕ್ಕೆ  ಗಲಾಟೆ ನಡೆದಿದ್ದು, ಬಳಿಕ ಕೊಲೆಯಲ್ಲಿ ಅಂತ್ಯವಾಗಿದೆ. ಹತ್ಯೆ ಬಳಿಕ ಪೊಲೀಸ್ ಠಾಣೆಗೆ ಬಂದು ಆರೋಪಿ ಶರಣಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:29 pm, Sat, 1 November 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ