AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​ನ ಬರ್ಬರ ಹತ್ಯೆ

ಮಂಗಳೂರಿನ ಕುಖ್ಯಾತ ರೌಡಿಶೀಟರ್​​ ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಫರಂಗಿಪೇಟೆ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ರೌಡಿಶೀಟರ್​​ನನ್ನು ದುಷ್ಕರ್ಮಿಗಳು ಕೊಚ್ಚಿ ಕೊಂದಿದ್ದಾರೆ. ಸದ್ಯ ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​ನ ಬರ್ಬರ ಹತ್ಯೆ
ರೌಡಿಶೀಟರ್ ಟೋಪಿ ನೌಫಾಲ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Nov 01, 2025 | 8:30 PM

Share

ಮಂಗಳೂರು, ನವೆಂಬರ್​ 01: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​​ನ (Rowdysheeter) ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿ ನಡೆದಿದೆ. ರೌಡಿಶೀಟರ್ ಟೋಪಿ ನೌಫಾಲ್​​ ಅನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (murder) ಮಾಡಿದ್ದಾರೆ. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಯಾರೀತ ನೌಫಾಲ್?

ಮಂಗಳೂರಿನ ಫೈಸಲ್​ನಗರದ ನಿವಾಸಿಯಾಗಿರುವ ರೌಡಿಶೀಟರ್ ಟೋಪಿ ನೌಫಾಲ್, ಮಂಗಳೂರಿನ ನಟೋರಿಯಸ್ ರೌಡಿಯೊಂದಿಗೆ ಸೇರಿ ಡ್ರಗ್ಸ್​ ಸೇವನೆ ಮತ್ತು ವಹಿವಾಟು ಮಾಡುತ್ತಿದ್ದ. 2017ರಲ್ಲಿ ಮಂಗಳೂರಿನ ಫರಂಗಿಪೇಟೆಯಲ್ಲಿ ನಡೆದಿದ್ದ ಜೋಡಿ ಕೊಲೆ ಕೇಸ್​ನ ಪ್ರಮುಖ ಆರೋಪಿ.

ಇದನ್ನೂ ಓದಿ: ವರದಕ್ಷಿಣ ಕಿರುಕುಳಕ್ಕೆ ಯುವತಿ ಬಲಿ?: ಮೃತಳ ಪೋಷಕರಿಂದ ಗಂಭೀರ ಆರೋಪ

ನೌಫಾಲ್​​ ಮಾರಿಪಳ್ಳ ಜಬ್ಬಾರ್​, ತಲ್ಲತ್​ ಗ್ಯಾಂಗ್​​ ಜೊತೆಗೂ ಗುರುತಿಸಿಕೊಂಡಿದ್ದ. ಬಳಿಕ ತನ್ನದೇ ತಂಡವೊಂದನ್ನು ಕಟ್ಟಿಕೊಂಡು ಡ್ರಗ್ಸ್​​, ವಸೂಲಿ, ಅಕ್ರಮ ಚಿನ್ನ ವಹಿವಾಟು ಮತ್ತು ಕೊಲೆಯತ್ನ ಮಾಡುತ್ತಿದ್ದ. ನೌಫಾಲ್ ವಿರುದ್ಧ ಮಂಗಳೂರಿನಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಡಂಬಲ್ಸ್​ನಿಂದ ತಲೆಗೆ ಹೊಡೆದು ಸಹ ಕೆಲಸಗಾರ ಕೊಲೆ

ಕ್ಲುಲ್ಲಕ‌ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ 1:30ಕ್ಕೆ ನಡೆದಿದೆ. ಸೋಮಲಾ ವಂಶಿ (24) ಮೃತ ವ್ಯಕ್ತಿ. ಡಂಬಲ್ಸ್​ನಿಂದ ತಲೆಗೆ ಹೊಡೆದು ಭೀಮೇಶ್ ಬಾಬು ಎಂಬುವವರಿಂದ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ದೇವನಹಳ್ಳಿ: ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನ; ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಡಾಟಾ ಡಿಜಿಟಲ್ ಬ್ಯಾಂಕ್ ಹಾಗೂ ಸಿನಿಮಾಗಳಿಗೆ ಚಿತ್ರೀಕರಣ ಮಾಡುವ ಕಂಪನಿಯಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಪ್ರತಿನಿತ್ಯ ಕಂಪನಿಯಲ್ಲಿಯೇ ಮಲಗುತ್ತಿದ್ದರು. ಹೀಗಾಗಿ ಲೈಟ್ ಆನ್ ಮಾಡುವ ವಿಚಾರಕ್ಕೆ  ಗಲಾಟೆ ನಡೆದಿದ್ದು, ಬಳಿಕ ಕೊಲೆಯಲ್ಲಿ ಅಂತ್ಯವಾಗಿದೆ. ಹತ್ಯೆ ಬಳಿಕ ಪೊಲೀಸ್ ಠಾಣೆಗೆ ಬಂದು ಆರೋಪಿ ಶರಣಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:29 pm, Sat, 1 November 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್