AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಅಮಿತ್​ ಶಾ ಭೇಟಿ ಹಿನ್ನಲೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ

ಜಿಲ್ಲೆಯ ಪುತ್ತೂರಿಗೆ ಫೆಬ್ರವರಿ 11ರಂದು ಅಮಿತ್​ ಶಾ ಭೇಟಿ ನೀಡುವ ಹಿನ್ನಲೆ ಇಂದು(ಫೆ.2) ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.

ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಅಮಿತ್​ ಶಾ ಭೇಟಿ ಹಿನ್ನಲೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ
ಅಮಿತ್ ಶಾ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 02, 2023 | 3:05 PM

Share

ಮಂಗಳೂರು: ಜಿಲ್ಲೆಯ ಪುತ್ತೂರಿಗೆ ಫೆಬ್ರವರಿ 11ರಂದು ಅಮಿತ್​ ಶಾ ಭೇಟಿ ನೀಡಿಲಿದ್ದು, ಪುತ್ತೂರು ತೆಂಕಿಲ ವಿವೇಕಾನಂದ ಸಂಸ್ಥೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೋಳ್ಳಲಿದ್ದಾರೆ. ಜೊತೆಗೆ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿಗೂ ಭೇಟಿ ನೀಡಲಿದ್ದಾರೆ. ಈ ಹಿನ್ನಲೆ ಇಂದು(ಫೆ.2) ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಚಿವರಾದ ಎಸ್​.ಅಂಗಾರ​, ಕೋಟ ಶ್ರೀನಿವಾಸ ಪೂಜಾರಿ, ಸುನೀಲ್​ ಕುಮಾರ್​, ರಾಜ್ಯ ಬಿಜೆಪಿ ಅಧ್ಯಕ್ಷ ಕಟೀಲು ಉಪಸ್ಥಿತರಿರಲಿದ್ದಾರೆ.

ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ಬಿಜೆಪಿ ಚಾಣಾಕ್ಯ ಅಮಿತ್​ ಶಾ ಭೇಟಿ  ಬಿಜೆಪಿಗೆ  ಬೂಸ್ಟ್​ ನೀಡುವುದಂತು ಸುಳ್ಳಲ್ಲ. ಈ ಹಿಂದೆ ಜನವರಿ 28 ರಂದು ಧಾರವಾಡದಲ್ಲಿ ಭರ್ಜರಿ ರೋಡ್​ ಶೋ ನಡೆಸಿ ಕಾಂಗ್ರೆಸ್​ ಹಾಗೂ ಜೆಡಿಎಸ್​ ಬಗ್ಗೆ ಹರಿಹಾಯ್ದಿದ್ದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ ಕಾಂಗ್ರೆಸ್​ ಹೈ ಕಮಾಂಡ್​ ಕರ್ನಾಟಕವನ್ನ ಎಟಿಎಂ ಮಾಡಿಕೊಂಡಿತ್ತು ಎಂದು ಸಿದ್ದರಾಮಯ್ಯ ಸರ್ಕಾರ ವಿರುದ್ದ ಟೀಕೆ ಮಾಡಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬರುತ್ತಿದ್ದು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೋಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿಯೇ ಇಂದು ಮಧ್ಯಾಹ್ನ ಸಭೆ ಕರೆದಿದ್ದು, ನಂತರವೇ ಕಾರ್ಯಕ್ರಮದ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Thu, 2 February 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?