ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸಿ ಮಜಾ ತೆಗೆದುಕೊಳ್ಳುತ್ತಿದ್ದವ ಪೊಲೀಸ್ ಖೆಡ್ಡಕ್ಕೆ

ಕರಾವಳಿ ಮೊದಲೇ ಕೋಮುಸೂಕ್ಷ್ಮ ಪ್ರದೇಶ. ಸ್ವಲ್ಪ ಏನಾದರೂ ಹೆಚ್ಚು ಕಮ್ಮಿ ಆದ್ರೆ ಸಾಕು ಹಿಂದೂ ಮುಸ್ಲಿಂ ಗಲಾಟೆಗಳು, ಕೊಲೆಗಳು ಆಗುತ್ತವೆ. ಹೀಗಾಗಿ ಉಡುಪಿ, ದಕ್ಷಿಣ ಕನ್ನಡ ಕೋಮುಸೂಕ್ಷ್ಮ ಜಿಲ್ಲೆಯಾಗಿದೆ. ಹೀಗಿರುವಾಗ ವ್ಯಕ್ತಿಯೋರ್ವ ದೂರದ ದುಬೈನಲ್ಲಿ ಕುಳಿತು ಮಂಗಳೂರಿನಲ್ಲಿ ಕೋಮು ಭಾವನೆ ಕೆರಳಿಸುವಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ. ಇದೀಗ ಆ ಯುವಕ ಪೊಲೀಸರ ಖೆಡಕ್ಕೆ ಬಿದ್ದಿದ್ದಾನೆ.

ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸಿ ಮಜಾ ತೆಗೆದುಕೊಳ್ಳುತ್ತಿದ್ದವ ಪೊಲೀಸ್ ಖೆಡ್ಡಕ್ಕೆ
ಪ್ರಾತಿನಿಧಿಕ ಚಿತ್ರ

Updated on: Dec 15, 2025 | 4:16 PM

ಮಂಗಳೂರು, (ಡಿಸೆಂಬರ್ 15): ದುಬೈನಲ್ಲಿ (Dubai) ಕುಳಿತು ಮಂಗಳೂರಿನಲ್ಲಿ ಕೋಮು ಭಾವನೆ ಕೆರಳಿಸುವಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ (Social Media) ಹರಿಬಿಡುತ್ತಿದ್ದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಮೂಲದ 27 ವರ್ಷದ ಅಬ್ದುಲ್ ಖಾದರ್ ನೇಹಾದ್ ಬಂಧಿತ ಆರೋಪಿ. ಈತ ಸೌದಿ ಆರೇಬಿಯಾದಲ್ಲಿ ಕುಳಿತು ಇನ್ಸ್ಟಾಗ್ರಾಮ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಅನ್ಯ ಧರ್ಮದವರ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ವಿಚಾರಗಳನ್ನು ಪೋಸ್ಟ್ ಮಾಡಿ ಕೋಮು ಭಾವನೆಯನ್ನು ಕೆರಳಿಸುತ್ತಿದ್ದ.

ಅನ್ಯಧರ್ಮಗಳ ಬಗ್ಗೆ ಅವಹೇಳನಕಾರಿ  ಪೋಸ್ಟ್

ಆರೋಪಿ ಅಬ್ದುಲ್ ಖಾದರ್‌ sdpi_2025 ಎಂಬ ಇನ್ಸ್ಟಾಗ್ರಾಮ್ ಖಾತೆಯನ್ನು ನಿಭಾಯಿಸುತ್ತಿದ್ದು, ಕಳೆದ ಆಕ್ಟೋಬರ್‌ 11ರಂದು ಇದೇ ಖಾತೆಯ ಮೂಲಕ ಅನ್ಯಧರ್ಮಗಳ ಬಗ್ಗೆ ತೀವ್ರ ಆಕ್ಷೇಪಾರ್ಹ ಹಾಗೂ ಅವಮಾನಕಾರಿಯಾಗಿ ಪೋಸ್ಟೊಂದನ್ನು ಪೋಸ್ಟ್ ಮಾಡಿದ್ದ. ಸಮಾಜದ ಶಾಂತಿ ಕದಡುವ ಉದ್ದೇಶದಿಂದಲೇ ಈ ರೀತಿ ಪೋಸ್ಟ್ ಹಂಚಿಕೊಳ್ಳುತ್ತಿದ್ದ. ಈ ಹಿನ್ನೆಲೆಯಲ್ಲಿ ಬಜ್ಪೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದಾ ಮಂಗಳೂರಿನ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಪ್ರಸ್ತುತ ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಅಬ್ದುಲ್ ಖಾದರ್ ಪ್ರಚೋದನಕಾರಿ ಪೋಸ್ಟ್‌ ಹಾಕಿರುವುದು ದೃಢಪಟ್ಟಿದೆ.

ಇದನ್ನೂ ನೋಡಿ: ಕೋಮುಸೂಕ್ಷ್ಮ ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

ಲುಕೌಟ್ ನೋಟೀಸ್

ಹೀಗಾಗಿ ವಿದೇಶದಲ್ಲಿ ಕುಳಿತು ಇಲ್ಲಿ ಕೋಮು ಗಲಭೆಗೆ ಪ್ರೇರಣೆ ನೀಡುತ್ತಿದ್ದ ಅಬ್ದುಲ್ ಖಾದರ್ ವಿರುದ್ಧ ಮಂಗಳೂರು ಪೊಲೀಸರು ತಕ್ಷಣವೇ ಲುಕೌಟ್ ನೋಟೀಸ್ ಜಾರಿ ಮಾಡಿದ್ದು, ಆತನ ಚಲನವಲಗಳ ಮೇಲೆ ಅಂದರೆ ಎಲ್ಲಿ ಹೋಗುತ್ತಾನೆ? ಏನ್ ಮಾಡುತ್ತಾನೆ ಎನ್ನುವ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದರು. ಇನ್ನು ಆತನ ಭಾರತಕ್ಕೆ ಬರುವುದನ್ನು ಕಾಯುತ್ತಿದ್ದು, ವಿಮಾನ ನಿಲ್ದಾಣದಲ್ಲಿ ಕಾಲಿಡುತ್ತಿದ್ದಂತೆಯೇ ಬಂಧಿಸಬೇಕೆಂದು ಎಲ್ಲಾ ಪ್ಕ್ಯಾನ್​​​ ಮಾಡಿಕೊಂಡಿದ್ದರು.

ಕ್ಯಾಲಿಕಟ್ ಏರ್​​​ಪೋರ್ಟ್​​​ನಲ್ಲಿ ಲಾಕ್

ನಂತರ ಡಿಸೆಂಬರ್ 14ರಂದು ಅಬ್ದುಲ್‌ ಖಾದರ್ ಸೌದಿ ಅರೇಬಿಯಾದಿಂದ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬರುವ ವಿಚಾರ ಪೊಲೀಸರಿಗೆ ಗೊತ್ತಾಗಿದೆ. ಕೂಡಲೇ ಮಂಗಳೂರು ಹಾಗೂ ಕೇರಳ ವಿಮಾನ ನಿಲ್ದಾಣದಲ್ಲಿ ಪೊಲೀಸರು ಅಲರ್ಟ್​ ಆಗಿದ್ದರು. ಅಬ್ದುಲ್‌ ಖಾದರ್ ಮಂಗಳೂರು ಬದಲಿಗೆ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಪೊಲೀಸ್ ಲಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Mon, 15 December 25

Loading...
Unable to load recommendations.
Follow Us