AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ ನೆಪದಲ್ಲಿ ವೃತ್ತಕ್ಕೆ ಹಸಿರು ಬಟ್ಟೆ ಅಲಂಕಾರ! ಪರಿಸ್ಥಿತಿಯ ಗಂಭೀರತೆ ಅರಿತು ಹಸಿರು ಬಟ್ಟೆ ತೆರವು ಮಾಡಿದ ಪೊಲೀಸರು

ಈದ್ ಮಿಲಾದ್ ಹಬ್ಬದ ಹಿನ್ನೆಲೆ ವೀರ ಸೈನಿಕನ ಹೆಸರಿನ ವೃತ್ತಕ್ಕೆ ಹಸಿರು ಬಟ್ಟೆ ಮತ್ತು ಹಸಿರು ಬಾವುಟ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಈದ್ ನೆಪದಲ್ಲಿ ವೃತ್ತಕ್ಕೆ ಹಸಿರು ಬಟ್ಟೆ ಅಲಂಕಾರ! ಪರಿಸ್ಥಿತಿಯ ಗಂಭೀರತೆ ಅರಿತು ಹಸಿರು ಬಟ್ಟೆ ತೆರವು ಮಾಡಿದ ಪೊಲೀಸರು
ಈದ್ ನೆಪದಲ್ಲಿ ವೃತ್ತಕ್ಕೆ ಹಸಿರು ಬಟ್ಟೆ ಅಲಂಕಾರ
TV9 Web
| Edited By: |

Updated on:Oct 08, 2022 | 2:20 PM

Share

ಮಂಗಳೂರು: ಇಸ್ಲಾಂನ ಕೊನೆಯ ಪ್ರವಾದಿ ಹಜರತ್ ಮುಹಮ್ಮದ್ ಜನಿಸಿದ ದಿನದ ಅಂಗವಾಗಿ ಅಕ್ಟೋಬರ್ 9ರಂದು ಮುಸ್ಲೀಮರು ಈದ್ ಮಿಲಾದ್ ಹಬ್ಬವನ್ನು ಆಚರಿಸುತ್ತಾರೆ. ಹಬ್ಬದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಸಂದೀಪ್ ಉನ್ನಿಕೃಷ್ಣನ್ ವೃತ್ತಕ್ಕೆ ಹಸಿರು ಬಟ್ಟೆ ಹೊದಿಸಿ ತಯಾರಿ ಮಾಡಿಕೊಳ್ಳಲಾಗಿದೆ. ಆದ್ರೆ ಹಸಿರು ಬಟ್ಟೆ ಹೊದಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ.

ಈದ್ ಮಿಲಾದ್ ಹಬ್ಬದ ಹಿನ್ನೆಲೆ ವೀರ ಸೈನಿಕನ ಹೆಸರಿನ ವೃತ್ತಕ್ಕೆ ಹಸಿರು ಬಟ್ಟೆ ಮತ್ತು ಹಸಿರು ಬಾವುಟ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಹಸಿರು ಬಟ್ಟೆ ತೆಗೆಯಲು ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ. ಅಧಿಕಾರಿಗಳು ತಕ್ಷಣ ಪರಿಸ್ಥಿತಿ ಗಂಭೀರತೆ ಅರಿತು ಹಸಿರು ಬಟ್ಟೆ ತೆರವು ಮಾಡಿದ್ದಾರೆ. ಸದ್ಯ ಹಸಿರು ಬಟ್ಟೆ ತೆರವು ಮಾಡಿ ಪೊಲೀಸರು ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಸಂಪ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಅನುಮೋದನೆಗೆ ಬಿಜೆಪಿ ಕ್ಯಾಬಿನೆಟ್​ ಅಸ್ತು

ಚಿಕ್ಕಮಗಳೂರು ದತ್ತಪೀಠದ ಹೋಮ ಮಂಟಪದಲ್ಲೇ ಮಾಂಸಹಾರದ ಊಟ, ಹಿಂದೂ ಭಾವನೆಗಳಿಗೆ ಧಕ್ಕೆ

ಚಿಕ್ಕಮಗಳೂರು: ಇಲ್ಲಿನ ಐತಿಹಾಸಿಕ ದತ್ತಪೀಠದ ಆವರಣದಲ್ಲಿರುವ ಹೋಮ ಮಂಟಪದಲ್ಲಿಯೇ ಮತ್ತೆ ಮಾಂಸಹಾರದ ಊಟ (Meat consumption) ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಭಾವೈಕ್ಯತೆ ಕೇಂದ್ರದಲ್ಲಿ (chikmagalur datta peeta) ಹೀಗೆ ಮತ್ತೆ ಹಿಂದೂಗಳ (Hindus) ಭಾವನೆಗಳಿಗೆ ಧಕ್ಕೆ ಮಾಡಿರುವುದರಿಂದ ಹಿಂದೂ ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವೇ ಕ್ರಮ ಕೈಗೊಳ್ತೀವಿ ಎಂದೂ ಹಿಂದೂ ಬ್ರಿಗೇಡ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯದಿಂದ ಹೋಮ ಮಂಟಪದಲ್ಲಿ ಮಾಂಸಾಹಾರ ಸೇವನೆಯಾಗಿದೆ. ಪೀಠದ ಆವರಣದ ಪಕ್ಕದಲ್ಲೇ ಹೋಮಕ್ಕೆಂದು ನಿರ್ಮಿಸಿರುವ ತಾತ್ಕಾಲಿಕ ಶೆಡ್ ನಲ್ಲಿ ಮಾಂಸಾಹಾರ ಮಾಡಲಾಗಿದೆ. ಆರು ತಿಂಗಳ ಹಿಂದೆಯೂ ಇದೇ ಮಂಟಪದಲ್ಲಿ ಬಿರಿಯಾನಿ ಮಾಡಿದ್ದರು. ಆದರೆ ಕ್ರಮ ಕೈಗೊಳ್ಳುತ್ತೇವೆಂದು ಹೇಳಿ ಜಿಲ್ಲಾಡಳಿತ ಸುಮ್ಮನಾಗಿದೆ ಎಂದು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 2:00 pm, Sat, 8 October 22

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು