Sign In

By signing in or creating an account, you agree with Associated Broadcasting Company's Terms & Conditions and Privacy Policy.

Part Time Job: ಮಂಗಳೂರಿನಲ್ಲಿ ಹೆಚ್ಚುತ್ತಿದೆ ಆನ್​ಲೈನ್ ಪಾರ್ಟ್​ ಟೈಮ್ ಉದ್ಯೋಗ ವಂಚನೆ

ಪಾರ್ಟ್​​ಟೈಮ್ ಜಾಬ್ ವಿಚಾರದಲ್ಲಿ ವಂಚಿಸುತ್ತಿರುವ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಹೆಚ್ಚಾಗುತ್ತಿದ್ದು, ಜನವರಿಯಿಂದ ಈವರೆಗೆ ನಗರದಲ್ಲಿ 27 ಪ್ರಕರಣಗಳು ದಾಖಲಾಗಿವೆ.

Part Time Job: ಮಂಗಳೂರಿನಲ್ಲಿ ಹೆಚ್ಚುತ್ತಿದೆ ಆನ್​ಲೈನ್ ಪಾರ್ಟ್​ ಟೈಮ್ ಉದ್ಯೋಗ ವಂಚನೆ
ಮಂಗಳೂರಿನಲ್ಲಿ ಹೆಚ್ಚುತ್ತಿದೆ ಆನ್​ಲೈನ್ ಪಾರ್ಟ್​ ಟೈಮ್ ಉದ್ಯೋಗ ವಂಚನೆ (ಸಾಂದರ್ಭಿಕ ಚಿತ್ರ)
Follow us
Rakesh Nayak Manchi
|

Updated on: Jun 23, 2023 | 7:48 AM

ಮಂಗಳೂರು: ನಗರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅರೆಕಾಲಿಕ ಉದ್ಯೋಗ (Part Time Job) ವಂಚನೆ (Fraud) ಪ್ರಕರಣಗಳು ಹೆಚ್ಚಾಗುತ್ತಿದೆ. ಈ ವರ್ಷದ ಜನವರಿಯಿಂದ ಈವರೆಗೆ ಮಂಗಳೂರು (Mangaluru) ನಗರದ ಸಿಇಎನ್ ಪೊಲೀಸರು 27 ಅರೆಕಾಲಿಕ ಉದ್ಯೋಗ ವಂಚನೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ವಂಚಕರು ವಿವಿಧ ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ಸಂಪರ್ಕಿಸಿ ಹೆಚ್ಚುವರಿ ಆದಾವುದಾಗಿ ಭರವಸೆ ನೀಡಿ ನಂತರ ಮೋಸಗೊಳಿಸುತ್ತಾರೆ.

ಹಣದ ಮೇಲೆ ಲಾಭದಾಯಕ ಆದಾಯವನ್ನು ನೀಡುವ ಮೂಲಕ ವಂಚಕರು ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ಸಂಪರ್ಕಿಸುತ್ತಾರೆ. ಆರಂಭದಲ್ಲಿ ವಂಚಕರು ಉತ್ತಮ ಆದಾಯವನ್ನು ನೀಡಿ ಜನರನ್ನ ಮತ್ತಷ್ಟು ಆಕರ್ಷಿಸುತ್ತಾರೆ. ಇದಕ್ಕೆ ಮರುಳಾದ ಜನರು ದೊಡ್ಡ ಹೂಡಿಕೆ ಮಾಡಿದ ನಂತರ ವಂಚಕರು ಸಂಪರ್ಕಕ್ಕೆ ಸಿಗುವುದಿಲ್ಲ.

ಇದನ್ನೂ ಓದಿ: ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ, ಮನೆಯಲ್ಲಿ ಕೂಡಿ ಹಾಕಿ ಹಲ್ಲೆ: ವಿಡಿಯೋ ವೈರಲ್​

ವಂಚಕರು ಜನರನ್ನು ಮೋಸದ ಬಲೆಗೆ ಬೀಳಿಸಲು ಪ್ರತಿಬಾರಿಯೂ ಹೊಸಹೊಸ ತಂತ್ರಗಳನ್ನು ಪ್ರಯೋಗಿಸುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸುದ್ದಿ ಸಂಸ್ಥೆ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ. ವಂಚಕರ ತಂತ್ರಗಳ ಬಗ್ಗೆ ಜನರು ತಿಳಿದುಕೊಂಡ ಹಿನ್ನೆಲೆ ಅವರು ಹೊಸ ತಂತ್ರಗಳನ್ನು ಪ್ರಯೋಗಿಸುತ್ತಾರೆ. ಲಿಂಕ್ ಅನ್ನು ಸಾಮಾನ್ಯವಾಗಿ ಟೆಲಿಗ್ರಾಮ್ ಅಪ್ಲಿಕೇಶನ್​ನಲ್ಲಿ ಅಥವಾ ಇಮೇಲ್ ಅಥವಾ ಇತರ ಪ್ಲಾಟ್ಫಾರ್ಮ್​ಗಳ ಮೂಲಕ ಕಳುಹಿಸಲಾಗುತ್ತದೆ. ಪ್ರತಿ ಪ್ರಕರಣದಲ್ಲೂ ಸರಾಸರಿ 40,000-50,000 ರೂ.ಗಳನ್ನು ವಂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ನಗರದಲ್ಲಿ ವರದಿಯಾದ 112 ಪ್ರಕರಣಗಳಲ್ಲಿ 27 ಅರೆಕಾಲಿಕ ಉದ್ಯೋಗ ಪ್ರಕರಣಗಳಾಗಿವೆ. ಇದನ್ನು ಹೊರತುಪಡಿಸಿ ಸಿಇಎನ್ ಪೊಲೀಸರು, 14 ಗ್ರಾಹಕ ಸೇವಾ ವಂಚನೆ ಪ್ರಕರಣ, 13 ಹೂಡಿಕೆ ವಂಚನೆ ಪ್ರಕರಣ, 11 ಕೆವೈಸಿ ವಂಚನೆ ಪ್ರಕರಣ ಮತ್ತು ಸುಮಾರು 8 ಸಾಮಾಜಿಕ ಮಾಧ್ಯಮ ವಂಚನೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ಇಂತಹ ಹಲವಾರು ಪ್ರಕರಣಗಳು ಇನ್ನೂ ವರದಿಯಾಗುತ್ತಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಕುಲದೀಪ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ