AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Part Time Job: ಮಂಗಳೂರಿನಲ್ಲಿ ಹೆಚ್ಚುತ್ತಿದೆ ಆನ್​ಲೈನ್ ಪಾರ್ಟ್​ ಟೈಮ್ ಉದ್ಯೋಗ ವಂಚನೆ

ಪಾರ್ಟ್​​ಟೈಮ್ ಜಾಬ್ ವಿಚಾರದಲ್ಲಿ ವಂಚಿಸುತ್ತಿರುವ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಹೆಚ್ಚಾಗುತ್ತಿದ್ದು, ಜನವರಿಯಿಂದ ಈವರೆಗೆ ನಗರದಲ್ಲಿ 27 ಪ್ರಕರಣಗಳು ದಾಖಲಾಗಿವೆ.

Part Time Job: ಮಂಗಳೂರಿನಲ್ಲಿ ಹೆಚ್ಚುತ್ತಿದೆ ಆನ್​ಲೈನ್ ಪಾರ್ಟ್​ ಟೈಮ್ ಉದ್ಯೋಗ ವಂಚನೆ
ಮಂಗಳೂರಿನಲ್ಲಿ ಹೆಚ್ಚುತ್ತಿದೆ ಆನ್​ಲೈನ್ ಪಾರ್ಟ್​ ಟೈಮ್ ಉದ್ಯೋಗ ವಂಚನೆ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on: Jun 23, 2023 | 7:48 AM

Share

ಮಂಗಳೂರು: ನಗರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅರೆಕಾಲಿಕ ಉದ್ಯೋಗ (Part Time Job) ವಂಚನೆ (Fraud) ಪ್ರಕರಣಗಳು ಹೆಚ್ಚಾಗುತ್ತಿದೆ. ಈ ವರ್ಷದ ಜನವರಿಯಿಂದ ಈವರೆಗೆ ಮಂಗಳೂರು (Mangaluru) ನಗರದ ಸಿಇಎನ್ ಪೊಲೀಸರು 27 ಅರೆಕಾಲಿಕ ಉದ್ಯೋಗ ವಂಚನೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ವಂಚಕರು ವಿವಿಧ ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ಸಂಪರ್ಕಿಸಿ ಹೆಚ್ಚುವರಿ ಆದಾವುದಾಗಿ ಭರವಸೆ ನೀಡಿ ನಂತರ ಮೋಸಗೊಳಿಸುತ್ತಾರೆ.

ಹಣದ ಮೇಲೆ ಲಾಭದಾಯಕ ಆದಾಯವನ್ನು ನೀಡುವ ಮೂಲಕ ವಂಚಕರು ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ಸಂಪರ್ಕಿಸುತ್ತಾರೆ. ಆರಂಭದಲ್ಲಿ ವಂಚಕರು ಉತ್ತಮ ಆದಾಯವನ್ನು ನೀಡಿ ಜನರನ್ನ ಮತ್ತಷ್ಟು ಆಕರ್ಷಿಸುತ್ತಾರೆ. ಇದಕ್ಕೆ ಮರುಳಾದ ಜನರು ದೊಡ್ಡ ಹೂಡಿಕೆ ಮಾಡಿದ ನಂತರ ವಂಚಕರು ಸಂಪರ್ಕಕ್ಕೆ ಸಿಗುವುದಿಲ್ಲ.

ಇದನ್ನೂ ಓದಿ: ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ, ಮನೆಯಲ್ಲಿ ಕೂಡಿ ಹಾಕಿ ಹಲ್ಲೆ: ವಿಡಿಯೋ ವೈರಲ್​

ವಂಚಕರು ಜನರನ್ನು ಮೋಸದ ಬಲೆಗೆ ಬೀಳಿಸಲು ಪ್ರತಿಬಾರಿಯೂ ಹೊಸಹೊಸ ತಂತ್ರಗಳನ್ನು ಪ್ರಯೋಗಿಸುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸುದ್ದಿ ಸಂಸ್ಥೆ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ. ವಂಚಕರ ತಂತ್ರಗಳ ಬಗ್ಗೆ ಜನರು ತಿಳಿದುಕೊಂಡ ಹಿನ್ನೆಲೆ ಅವರು ಹೊಸ ತಂತ್ರಗಳನ್ನು ಪ್ರಯೋಗಿಸುತ್ತಾರೆ. ಲಿಂಕ್ ಅನ್ನು ಸಾಮಾನ್ಯವಾಗಿ ಟೆಲಿಗ್ರಾಮ್ ಅಪ್ಲಿಕೇಶನ್​ನಲ್ಲಿ ಅಥವಾ ಇಮೇಲ್ ಅಥವಾ ಇತರ ಪ್ಲಾಟ್ಫಾರ್ಮ್​ಗಳ ಮೂಲಕ ಕಳುಹಿಸಲಾಗುತ್ತದೆ. ಪ್ರತಿ ಪ್ರಕರಣದಲ್ಲೂ ಸರಾಸರಿ 40,000-50,000 ರೂ.ಗಳನ್ನು ವಂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ನಗರದಲ್ಲಿ ವರದಿಯಾದ 112 ಪ್ರಕರಣಗಳಲ್ಲಿ 27 ಅರೆಕಾಲಿಕ ಉದ್ಯೋಗ ಪ್ರಕರಣಗಳಾಗಿವೆ. ಇದನ್ನು ಹೊರತುಪಡಿಸಿ ಸಿಇಎನ್ ಪೊಲೀಸರು, 14 ಗ್ರಾಹಕ ಸೇವಾ ವಂಚನೆ ಪ್ರಕರಣ, 13 ಹೂಡಿಕೆ ವಂಚನೆ ಪ್ರಕರಣ, 11 ಕೆವೈಸಿ ವಂಚನೆ ಪ್ರಕರಣ ಮತ್ತು ಸುಮಾರು 8 ಸಾಮಾಜಿಕ ಮಾಧ್ಯಮ ವಂಚನೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ಇಂತಹ ಹಲವಾರು ಪ್ರಕರಣಗಳು ಇನ್ನೂ ವರದಿಯಾಗುತ್ತಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಕುಲದೀಪ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?