AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡೇತರ ನಾಮಫಲಕ ತೆರವಿಗೆ ತುಳುನಾಡಿನಲ್ಲಿ ವಿರೋಧ; ಯಾವುದೇ ಬೋರ್ಡ್​ಗೆ ಕೈ ಹಾಕದಂತೆ ಎಚ್ಚರಿಕೆ

ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡೇತರ ನಾಮಫಲಕ ಧ್ವಂಸಗೊಳಿಸಿ ಹೋರಾಟ ನಡೆಯುತ್ತಿರುವ ಹಿನ್ನೆಲೆ ಆಕ್ರೋಶಗೊಂಡಿರುವ ತುಳು ಭಾಷೆ ಹೋರಾಟಗಾರರು ತುಳುನಾಡಿನಲ್ಲಿ ಯಾವುದೇ ಬೋರ್ಡ್​​ಗೆ ಕೈ ಹಾಕದಂತೆ ಎಚ್ಚರಿಕೆ ನೀಡಿದ್ದಾರೆ.

ಕನ್ನಡೇತರ ನಾಮಫಲಕ ತೆರವಿಗೆ ತುಳುನಾಡಿನಲ್ಲಿ ವಿರೋಧ; ಯಾವುದೇ ಬೋರ್ಡ್​ಗೆ ಕೈ ಹಾಕದಂತೆ ಎಚ್ಚರಿಕೆ
ಕನ್ನಡೇತರ ನಾಮಫಲಕ ತೆರವಿಗೆ ತುಳುನಾಡು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿರೋಧ; ಯಾವುದೇ ಬೋರ್ಡ್​ಗೆ ಕೈ ಹಾಕದಂತೆ ಎಚ್ಚರಿಕೆ
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi|

Updated on: Mar 08, 2024 | 12:01 PM

Share

ಮಂಗಳೂರು, ಮಾ.8: ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ (Kannada Nameplate) ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡೇತರ ನಾಮಫಲಕ ಧ್ವಂಸಗೊಳಿಸಿ ಹೋರಾಟ ನಡೆಯುತ್ತಿರುವ ಹಿನ್ನೆಲೆ ಆಕ್ರೋಶಗೊಂಡಿರುವ ತುಳು (Tulu) ಭಾಷೆ ಹೋರಾಟಗಾರರು ತುಳುನಾಡಿನಲ್ಲಿ ಯಾವುದೇ ಬೋರ್ಡ್​​ಗೆ ಕೈ ಹಾಕದಂತೆ ಎಚ್ಚರಿಕೆ ನೀಡಿದ್ದಾರೆ.

ಪ್ರೀತಿಯಿಂದ ಭಾಷೆಗಳನ್ನು ಬಳಸಬೇಕೇ ಹೊರತು ಒತ್ತಾಯದ ಹೇರಿಕೆ ಸರಿಯಲ್ಲ ಎಂದು ತುಳು ಹೋರಾಟಗಾರ ರೋಷನ್ ರೇನಾಲ್ಡ್ ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಸರ್ಕಾರದ ಕಡತಗಳಲ್ಲೇ ಇಂಗ್ಲೀಷ್ ಇದೆ. ಇವರು ಮೊದಲು ಅದನ್ನೆಲ್ಲಾ ತೆಗೆಯಲಿ ಎಂದರು.

ಬೋರ್ಡ್​ಗಳನ್ನು ಒಡೆಯುವುದು ಒಂದು ದಂಧೆ

ಬೋರ್ಡ್​ಗಳನ್ನು ಒಡೆಯುವುದು ಒಂದು ದಂಧೆಯಾಗಿದೆ. ಬೋರ್ಡ್ ಮಾಡುವ ಅಂಗಡಿಗಳಿಂದ ಇವರಿಗೆ ಫಂಡಿಂಗ್ ಆಗುತ್ತಿದೆ. ತುಳುವರು ಯಾವತ್ತು ಭಾಷೆಗಳ ವಿರೋಧಿಗಳಲ್ಲ. ತುಳು ಭಾಷೆ ರಾಜ್ಯದ ಎರಡನೇ ಭಾಷೆ ಆಗಬೇಕೆಂದು ಎರಡು ವರ್ಷಗಳಿಂದ ಕೇಳುತ್ತಿದ್ದೇವೆ. ಪಂಚದ್ರಾವಿಡ ಭಾಷೆಗಳಲ್ಲಿ ತುಳು ಭಾಷೆಯೂ ಒಂದು. ಎಲ್ಲಾ ಭಾಷೆಗಳು ಎಂಟನೇ ಪರಿಚ್ಛೇದಕ್ಕೆ ಸೇರಿವೆ. ಆದರೆ ತುಳು ಬಾಕಿ ಉಳಿದಿದೆ. ಇದರ ಬಗ್ಗೆ ನಮಗೆ ಬಹಳ ನೋವಿದೆ ಎಂದರು.

ಇಲ್ಲಿರುವ ನಾಲ್ಕೈದು ತುಳುವರು ಕನ್ನಡ ಸಂಘಟನೆ ಕಟ್ಟಿಕೊಂಡಿದ್ದಾರೆ. ಕನ್ನಡ ಉಳಿಸಬೇಕೆಂದಿದ್ದರೆ ಅವರಿಗೆ ಶಿಕ್ಷಣದಲ್ಲಿ ಉಳಿಸಬೇಕಿತ್ತು. ಕನ್ನಡ ಶಾಲೆಗಳು ಇವತ್ತು ಮುಚ್ಚುತ್ತಿದೆ. ಅದು ಬಿಟ್ಟು ವ್ಯಾಪಾರ ಮಾಡುವ ಅಂಗಡಿಗಳ ಬೋರ್ಡ್ ಒಡೆಯುವುದು ಸರಿಯಲ್ಲ. ತುಳುನಾಡಿನಲ್ಲಿ ಭಾಷೆಗಳ ನಡುವೆ ದ್ವೇಷ ಸೃಷ್ಟಿಸಿ ಜಗಳ ಪ್ರಾರಂಭಿಸುವುದನ್ನು ನಾವು ಒಪ್ಪಲ್ಲ ಎಂದರು.

ಇದನ್ನೂ ಓದಿ: ಕನ್ನಡ ನಾಮಫಲಕ: ಗಡುವು ವಿಸ್ತರಿಸಿದ್ದಕ್ಕೆ ಕರವೇ ನಾರಾಯಣಗೌಡ ಗರಂ, ಸರ್ಕಾರಕ್ಕೆ ಖಡಕ್ ಎಚ್ಚರಿಕೆ

ತುಳುನಾಡಿನಲ್ಲಿ ಎಲ್ಲಿಯೂ ಸಹ ಯಾವುದೇ ಬೋರ್ಡ್​ಗೆ ಕೈ ಹಾಕಿದರೆ ಇದನ್ನು ಖಂಡಿಸುತ್ತೇವೆ. ಕೊರೊನಾ ಬಳಿಕ ವ್ಯಾಪಾರಿಗಳು ಕಷ್ಟದಲ್ಲಿರುವಾಗ ಇವರ್ಯಾರು ಬಂದಿಲ್ಲ. ಈಗ ಬೋರ್ಡ್ ಒಡೆದು ಹಾಕಿ ನಷ್ಟ ಮಾಡಬಾರದು. ಇಲ್ಲಿ‌ ಅಂತಾರಾಷ್ಟ್ರೀಯ ಮಟ್ಟದ ಟೂರಿಸಂ ಇದೆ. ಇಲ್ಲಿಗೆ ವಿದೇಶ, ನೆರೆ ರಾಜ್ಯದಿಂದ ಪ್ರವಾಸಿಗರು ಬರುತ್ತಾರೆ. ಅವರಿಗೆಲ್ಲಾ ತೊಂದರೆ ಆಗುತ್ತದೆ ಎಂದರು.

ತುಳುನಾಡಿನ ಬೋರ್ಡ್​ಗಳಲ್ಲಿ ಕೇವಲ ಇಂಗ್ಲೀಷ್ ಮಾತ್ರವಲ್ಲ, ಕನ್ನಡ, ಇಂಗ್ಲಿಷ್, ತುಳು ಭಾಷೆಯ ಲಿಪಿಗಳು ಇವೆ. ಬೋರ್ಡ್​ಗಳ ವಿಚಾರಕ್ಕೆ ಬಂದರೆ ನಾವು ಬಿಡುವುದಿಲ್ಲ. ಬೇರೆ ರಾಜ್ಯದಿಂದ ಬಂದವರಿಗೆ ಕೇವಲ ಕನ್ನಡದಲ್ಲಿದ್ದರೆ ಅದು ಅರ್ಥ ಆಗಲ್ಲ. ಈಗ ಇಲ್ಲಿನ ಜನ ತುಳು ಬೋರ್ಡ್ ಸಹ ಹಾಕುತ್ತಿದ್ದಾರೆ. ಪ್ರೀತಿಯಿಂದ ಬಳಸಬೇಕೆ ಹೊರತು ಒತ್ತಾಯದ ಹೇರಿಕೆ ಆಗಬಾರದು ಎಂದರು.

ತುಳು ವಿರೋಧಿ ಸಂಘಟನೆಗಳನ್ನು ಬಿಡುವುದಿಲ್ಲ

ತುಳುವನ್ನು ವಿರೋಧ ಮಾಡುವ ತಾಕತ್ತು ಅವರಿಗಿಲ್ಲ. ಈ ಮಣ್ಣಿನ ಭಾಷೆಯನ್ನು ವಿರೋಧ ಮಾಡುವ ಯಾವುದೇ ಸಂಘಟನೆಯನ್ನು ಬಿಡುವುದಿಲ್ಲ. ಆ ಸಂಘಟನೆಗಳನ್ನು ಮಂಗಳೂರಿನಲ್ಲಿ ಇರುವುದಕ್ಕೂ ಬಿಡುವುದಿಲ್ಲ. ತುಳು ಲಿಪಿಯ ಬೋರ್ಡ್ ತೆಗೆದಿರುವ ಮಾಹಿತಿ ಈವರೆಗೂ ಬಂದಿಲ್ಲ. ತುಳು ಲಿಪಿಯ ಬೋರ್ಡ್ ಮುಟ್ಟಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇಷ್ಟು ಪರ್ಸೆಂಟ್ ಹಾಕಬೇಕು, ಹಾಕಬಾರದೆಂಬ ಒತ್ತಾಯವಿಲ್ಲ. ಇಲ್ಲಿ ಯಾವುದೇ ದ್ವೇಷವಿಲ್ಲ. ವ್ಯಾಪಾರದಲ್ಲಿ ಪರ್ಸಂಟೇಜ್ ಕೇಳುವ ಸಂಘಟನೆಗಳು ಇವೆ. ಯಾವುದೇ ಬೋರ್ಡ್​ಗೆ ಕೈ ಹಾಕಿದರೆ ತುಳುವರು ಎಚ್ಚೆತ್ತುಕೊಳ್ಳುತ್ತೇವೆ. ಈ ಬಗ್ಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪೊಲೀಸ್ ವರಿಷ್ಟಾಧಿಕಾರಿಯವರಿಗೂ ಹೇಳಿದ್ದೇವೆ. ಇದು ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಹೇಳಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ