AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ

ಜೂನ್‌ ತಿಂಗಳಿನಲ್ಲಿ ಭತ್ತದ ಬೆಳೆ ಫಸಲ್‌ ಭಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಸರಕಾರ ಆದೇಶ ಹೊಡಡಿಸಿತ್ತು. ಇದರಿಂದಾಗಿ ಅಡಿಕೆ ಬೆಳೆಗಾರರು ಆತಂಕಕ್ಕೀಡಾಗಿದ್ದರು. ಸದ್ಯ ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ ಹೊರಡಿಸಲಾಗಿದೆ.

Mangaluru: ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ
ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ Image Credit source: microbi.tv
Rakesh Nayak Manchi
|

Updated on: Jul 20, 2023 | 9:34 PM

Share

ಮಂಗಳೂರು, ಜುಲೈ 20: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ (Arecanut), ಕಾಳುಮೆಣಸು (Pepper) ಬೆಳೆಗಳನ್ನು ಸೇರ್ಪಡೆಗೊಳಿಸಲಾಗಿದ್ದು, ಯೋಜನೆಯಡಿ ಬೆಳಗಳಿಗೆ ಬೆಳೆ ವಿಮೆ (Crop Insurance) ಪಾವತಿಸಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಜು 31 ಕಂತು ಪಾವತಿಸಲು ಕೊನೆಯ ದಿನವಾಗಿದೆ.

ನಾಲ್ಕೈದು ವರ್ಷಗಳ ಹಿಂದೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕಾರ್ಯರೂಪಕ್ಕೆ ತರಲಾಗಿದೆ. ಅಂದಿನಿಂದ ಪ್ರತಿ ವರ್ಷದ ಜೂನ್ ತಿಂಗಳಲ್ಲಿ ಕಂತು ಪಾವತಿಗೆ ಅವಕಾಶ ಕಲ್ಪಿಸಿ ಸರ್ಕಾರವು ಅಧಿಸೂಚನೆ ಹೊರಡಿಸುತ್ತಿತ್ತು. ಆದರೆ ಈ ಬಾರಿ ಯಾವುದೇ ಅಧಿಸೂಚನೆ ಹೊರಡಿಸಿರಲಿಲ್ಲ. ಆದರೇ ಜೂನ್‌ ತಿಂಗಳಿನಲ್ಲಿ ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಸರಕಾರ ಆದೇಶ ಹೊಡಡಿಸಿತ್ತು.

ಇದನ್ನೂ ಓದಿ: Arecanut Pirce 20 July: ಇಂದಿನ ಅಡಿಕೆ ರೇಟ್, ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ?

ಇದು ಸಹಜವಾಗಿ ಅಡಿಕೆ ಬೆಳೆಗಾರರಲ್ಲಿ ತಲ್ಲಣ ಉಂಟು ಮಾಡಿತ್ತು. ಈ ಕುರಿತು ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತನಾಡುವುದಾಗಿ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್‌ ಕುಮಾರ್‌ ರೈ ಭರವಸೆ ನೀಡಿದ್ದರಲ್ಲದೆ, ತೋಟಗಾರಿಕಾ ಇಲಾಖೆ ಸಚಿವ ರಾಜಣ್ಣ ಮಾತುಕತೆ ನಡೆಸಿದ್ದರು. ವಿಧಾನಸಭೆಯಲ್ಲೂ ಪ್ರಸ್ತಾಪಿಸಿದ್ದರು.

ಇನ್ನು, ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕೆ ಇಲಾಖೆ ಆಯುಕ್ತರಿಗೆ ಪತ್ರ ಬರೆದು ವಿಮೆ ಯೋಜನೆ ವ್ಯಾಪ್ತಿಗೆ ಅಡಿಕೆ, ಕಾಳು ಮೆಣಸು ಬೆಳೆಗಳನ್ನು ಸೇರಿಸುವಂತೆ ಮನವಿ ಮಾಡಿದ್ದರು. ಇದರ ಜೊತೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನೂ ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?