AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ

ಜೂನ್‌ ತಿಂಗಳಿನಲ್ಲಿ ಭತ್ತದ ಬೆಳೆ ಫಸಲ್‌ ಭಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಸರಕಾರ ಆದೇಶ ಹೊಡಡಿಸಿತ್ತು. ಇದರಿಂದಾಗಿ ಅಡಿಕೆ ಬೆಳೆಗಾರರು ಆತಂಕಕ್ಕೀಡಾಗಿದ್ದರು. ಸದ್ಯ ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ ಹೊರಡಿಸಲಾಗಿದೆ.

Mangaluru: ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ
ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ Image Credit source: microbi.tv
Rakesh Nayak Manchi
Rakesh Nayak Manchi|

Updated on: Jul 20, 2023 | 9:34 PM

Share

ಮಂಗಳೂರು, ಜುಲೈ 20: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ (Arecanut), ಕಾಳುಮೆಣಸು (Pepper) ಬೆಳೆಗಳನ್ನು ಸೇರ್ಪಡೆಗೊಳಿಸಲಾಗಿದ್ದು, ಯೋಜನೆಯಡಿ ಬೆಳಗಳಿಗೆ ಬೆಳೆ ವಿಮೆ (Crop Insurance) ಪಾವತಿಸಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಜು 31 ಕಂತು ಪಾವತಿಸಲು ಕೊನೆಯ ದಿನವಾಗಿದೆ.

ನಾಲ್ಕೈದು ವರ್ಷಗಳ ಹಿಂದೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕಾರ್ಯರೂಪಕ್ಕೆ ತರಲಾಗಿದೆ. ಅಂದಿನಿಂದ ಪ್ರತಿ ವರ್ಷದ ಜೂನ್ ತಿಂಗಳಲ್ಲಿ ಕಂತು ಪಾವತಿಗೆ ಅವಕಾಶ ಕಲ್ಪಿಸಿ ಸರ್ಕಾರವು ಅಧಿಸೂಚನೆ ಹೊರಡಿಸುತ್ತಿತ್ತು. ಆದರೆ ಈ ಬಾರಿ ಯಾವುದೇ ಅಧಿಸೂಚನೆ ಹೊರಡಿಸಿರಲಿಲ್ಲ. ಆದರೇ ಜೂನ್‌ ತಿಂಗಳಿನಲ್ಲಿ ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಸರಕಾರ ಆದೇಶ ಹೊಡಡಿಸಿತ್ತು.

ಇದನ್ನೂ ಓದಿ: Arecanut Pirce 20 July: ಇಂದಿನ ಅಡಿಕೆ ರೇಟ್, ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ?

ಇದು ಸಹಜವಾಗಿ ಅಡಿಕೆ ಬೆಳೆಗಾರರಲ್ಲಿ ತಲ್ಲಣ ಉಂಟು ಮಾಡಿತ್ತು. ಈ ಕುರಿತು ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತನಾಡುವುದಾಗಿ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್‌ ಕುಮಾರ್‌ ರೈ ಭರವಸೆ ನೀಡಿದ್ದರಲ್ಲದೆ, ತೋಟಗಾರಿಕಾ ಇಲಾಖೆ ಸಚಿವ ರಾಜಣ್ಣ ಮಾತುಕತೆ ನಡೆಸಿದ್ದರು. ವಿಧಾನಸಭೆಯಲ್ಲೂ ಪ್ರಸ್ತಾಪಿಸಿದ್ದರು.

ಇನ್ನು, ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕೆ ಇಲಾಖೆ ಆಯುಕ್ತರಿಗೆ ಪತ್ರ ಬರೆದು ವಿಮೆ ಯೋಜನೆ ವ್ಯಾಪ್ತಿಗೆ ಅಡಿಕೆ, ಕಾಳು ಮೆಣಸು ಬೆಳೆಗಳನ್ನು ಸೇರಿಸುವಂತೆ ಮನವಿ ಮಾಡಿದ್ದರು. ಇದರ ಜೊತೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನೂ ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ