AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore News: ಕುಕ್ಕರ್ ಬಾಂಬ್​ ಆತಂಕದ ಬೆನ್ನಲ್ಲೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಬಳಿ ವಾರಸುದಾರರಿಲ್ಲದ ಬ್ಯಾಗ್ ಪತ್ತೆ! ​

ಮಂಗಳೂರು ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿತ್ತು. ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಜನ ವಾರಸುದಾರರಿಲ್ಲದ ಬ್ಯಾಗ್ ಪತ್ತೆಯಾಗುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದರು.

Mangalore News: ಕುಕ್ಕರ್ ಬಾಂಬ್​ ಆತಂಕದ ಬೆನ್ನಲ್ಲೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಬಳಿ ವಾರಸುದಾರರಿಲ್ಲದ ಬ್ಯಾಗ್ ಪತ್ತೆ! ​
ಕುಕ್ಕರ್ ಬಾಂಬ್​ ಆತಂಕದ ಬೆನ್ನಲ್ಲೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಬಳಿ ವಾರಸುದಾರರಿಲ್ಲದ ಬ್ಯಾಗ್ ಪತ್ತೆ! ​
TV9 Web
| Edited By: |

Updated on:Nov 22, 2022 | 11:43 AM

Share

ಮಂಗಳೂರು: ಕರಾವಳಿ ಭಾಗದಲ್ಲಿ ಕುಕ್ಕರ್ ಬಾಂಬ್​ (Cooker Bomb) ಆತಂಕದ ಬಳಿಕ ಸೋಮವಾರ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಬಳಿ (KSRTC bus stand) ವಾರಸುದಾರರಿಲ್ಲದ ಬ್ಯಾಗ್ ಪತ್ತೆಯಾಗಿತ್ತು. ​ಇದರಿಂದ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿತ್ತು. ಮಂಗಳೂರು ಸ್ಫೋಟ ಪ್ರಕರಣದ (Mangaluru blast case) ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿತ್ತು. ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಜನ ವಾರಸುದಾರರಿಲ್ಲದ ಬ್ಯಾಗ್ ಪತ್ತೆಯಾಗುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದರು. ಶ್ವಾನ ದಳದೊಂದಿಗೆ ದೌಡಾಯಿಸಿದ ಪೊಲೀಸರು ತಪಾಸಣೆ ಕಾರ್ಯದಲ್ಲಿ ತೊಡಗಿದರು.

ಶೋಧದ ಬಳಿಕ ಬ್ಯಾಗಿನಲ್ಲಿ ಅನಾಹುತಕಾರಿ ಅಂಶಗಳೇನೂ ಪತ್ತೆಯಾಗಲಿಲ್ಲ. ಯಾವುದೋ ಪ್ರಯಾಣಿಕರು ಈ ಬ್ಯಾಗ್ ಬಿಟ್ಟು ಹೋಗಿರಬಹುದು. ಅದರಲ್ಲಿ ಹಳೆಯ ಬಟ್ಟೆ ಮತ್ತು ಕೆಲವು ಪಾತ್ರೆಗಳು ಇದ್ದವು. ಅದರಲ್ಲಿ ಬೆಲೆಬಾಳುವ ವಸ್ತುಗಳೇನೂ ಕಂಡುಬರಲಿಲ್ಲ ಎಂದು ಬಾರ್ಕೆ ಪೊಲೀಸ್​ ಠಾಣೆ ಸಿಬ್ಬಂದಿ ತಿಳಿಸಿದ್ದಾರೆ.

ಆಟೋ ಚಾಲಕನ ಆರೋಗ್ಯ ಸುಧಾರಣೆ:

ಈ ಮಧ್ಯೆ, ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಪುರುಷೋತ್ತಮ್​​ ಆರೋಗ್ಯ ಸುಧಾರಣೆ ಆಗಿದೆ. ಪ್ರಮುಖ ಆರೋಪಿ ಶಾರಿಕ್​ ಎಲ್ಲೆಲ್ಲಿ ಹೋಗಿದ್ದ ಎಲ್ಲದರ ಬಗ್ಗೆಯೂ ತನಿಖೆ ಆಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್​ ತಿಳಿಸಿದ್ದಾರೆ. ಇನ್ನು ಕಂಕನಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಶಾರಿಕ್​ ನ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು ಕಮಿಷನರ್​​ ಶಶಿಕುಮಾರ್​ ಆಗಮಿಸಿದ್ದಾರೆ.

Also Read: Mangalore Blast: ಐಸಿಸ್ ಉಗ್ರರ ನಂಟಿನ ಮೂವರು ಶಂಕಿತರಿಂದ ಮಂಗಳೂರು ಸ್ಫೋಟಕ್ಕೆ ಕುಮ್ಮಕ್ಕು: ಪೊಲೀಸರ ಶಂಕೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Tue, 22 November 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!