AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಫಿಶ್ ಮಿಲ್ ಚಿಮಣಿಯಲ್ಲಿ ಹಾರುತ್ತಿದೆ ಸಣ್ಣ ಬೆಂಕಿ ಉಂಡೆಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಸ್ಥಳೀಯ ನಿವಾಸಿಗಳು ಭಯಬೀತಗೊಂಡಿದ್ದು, ಈ ಹಿಂದೆ ಅಪಾಯದ ಮುನ್ಸೂಚನೆ ನೀಡಿದ್ದರು ಮಾಲೀಕರು ಎಚ್ಚೆತ್ತುಕೊಳ್ಳದ ಪರಿಣಾಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ‌ ನಡೆದಿದೆ.

ಮಂಗಳೂರು: ಫಿಶ್ ಮಿಲ್ ಚಿಮಣಿಯಲ್ಲಿ ಹಾರುತ್ತಿದೆ ಸಣ್ಣ ಬೆಂಕಿ ಉಂಡೆಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಫಿಶ್ ಮಿಲ್
TV9 Web
| Edited By: |

Updated on:Jan 23, 2022 | 8:44 PM

Share

ಮಂಗಳೂರು: ಫಿಶ್ ಮಿಲ್ ಚಿಮಣಿಯಲ್ಲಿ ಸಣ್ಣ ಬೆಂಕಿ (Fire) ಉಂಡೆಗಳು ಹಾರುತ್ತಿದ್ದು, ಮನೆ ಪಕ್ಕದ ಟಾರ್ಪಲ್ ಮೇಲೆ ಕಿಡಿ ಹಾರಿ ಬೆಂಕಿ ಹೊತ್ತಿಕೊಂಡಿದೆ. ಮಂಗಳೂರಿನ ಮುಕ್ಕ ಬಳಿಯ ಫಿಶ್ ಮಿಲ್ (Fish mill) ಬಳಿ ಘಟನೆ ನಡೆದಿದೆ. ಮುಕ್ಕ ಸೀಫುಡ್ ಇಂಡಸ್ಟ್ರೀಸ್ ಫ್ಯಾಕ್ಟರಿಯಲ್ಲಿ ಸಣ್ಣ ಬೆಂಕಿ ಉಂಡೆಗಳು ಆಗಾಗ ಕಾಣಿಸಿಕೊಳ್ಳುತ್ತಿರುತ್ತದೆ. ಸದ್ಯ ಸ್ಥಳೀಯ ನಿವಾಸಿಗಳು ಭಯಬೀತಗೊಂಡಿದ್ದು, ಈ ಹಿಂದೆ ಅಪಾಯದ ಮುನ್ಸೂಚನೆ ನೀಡಿದ್ದರು ಮಾಲೀಕರು (Owner) ಎಚ್ಚೆತ್ತುಕೊಳ್ಳದ ಪರಿಣಾಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ‌ ನಡೆದಿದೆ.

ವಿಜಯನಗರ: ಸೆಕ್ಯೂರಿಟಿ ಗಾರ್ಡ್​ ಕೊಲೆ ಪ್ರಕರಣದ ಆರೋಪಿ ಸೆರೆ

ಜ.10 ರಂದು ಹೊಸಪೇಟೆ ಪಟ್ಟಣದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸ ಸರಿಯಾಗಿ ಮಾಡು ಎಂದು ಹೇಳಿದ್ದಕ್ಕೆ ಕಾಲೇಜು ಸೆಕ್ಯೂರಿಟಿ ಗಾರ್ಡ್​​​ನನ್ನು​​ ಹತ್ಯೆ ಮಾಡಿದ್ದ. ಬಿಹಾರ ಮೂಲದ ಆರೋಪಿ ಸಂಜೀವ್​​ ಕುಮಾರ್ ಸಹನಿಯನ್ನು  ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಂಕರ್ ಆನಂದಸಿಂಗ್ ಕಾಲೇಜು ಕಾವಲುಗಾರನಾಗಿದ್ದ ಗೌಸಸಾನ್​ನನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ಕಾರ್ಮಿಕ ಸದ್ಯ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ.

ಬೆಂಗಳೂರು: ಮದ್ಯದ ಅಮಲಿನಲ್ಲಿ ಯುವಕನಿಗೆ ಚಾಕು ಇರಿದ ಸ್ನೇಹಿತರು

ಎಣ್ಣೆ ಪಾರ್ಟಿ ವೇಳೆ ಜಗಳವಾಗಿ ಮದ್ಯದ ಅಮಲಿನಲ್ಲಿದ್ದ ಸ್ನೇಹಿತರು ಯುವಕನಿಗೆ ಚಾಕು ಇರಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಮುತ್ತಗಟ್ಟಿ ಬಳಿ ನಡೆದಿದೆ. ಬನ್ನೇರುಘಟ್ಟದ ಕಲ್ಕೆರೆ ನಿವಾಸಿ ವಿಜಯ್ ಹಲ್ಲೆಗೊಳಗಾದ ಯುವಕ. ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಲು ಬಂದಿದ್ದ ವಿಜಯ್​ ಜತೆ ಗಲಾಟೆ ಮಾಡಿಕೊಂಡೆ ಸ್ನೇಹಿತರು ಚಾಕುವಿನಿಂದ ಚುಚ್ಚಿದ್ದಾರೆ. ಸದ್ಯ ಗಾಯಾಳು ವಿಜಯ್​ನನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೇಕಲ್ ಪೊಲೀಸ್​ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಬಸ್​​ ಚಲಾಯಿಸುವಾಗ ಚಾಲಕನಿಗೆ ಮೂರ್ಛೆ ರೋಗ;  ನಿಯಂತ್ರಣ ತಪ್ಪಿ ಫುಟ್​​ಪಾತ್​​ಗೆ ನುಗ್ಗಿ ಬೈಕ್​ಗಳಿಗೆ ಡಿಕ್ಕಿ

ಬಸ್​​ ಚಲಾಯಿಸುವಾಗ ಚಾಲಕನಿಗೆ ಮೂರ್ಛೆ ರೋಗ ಬಂದ ಪರಿಣಾಮ ನಿಯಂತ್ರಣ ತಪ್ಪಿ ಫುಟ್​​ಪಾತ್​​ಗೆ ನುಗ್ಗಿ ಬೈಕ್​ಗಳಿಗೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿ ನಡೆದಿದೆ. ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆ ವೇಳೆ ಯಾವುದೇ ಪ್ರಾಣಾಪಾಯವಿಲ್ಲ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ನವನಗರ ಪೊಲೀಸ್​ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime News: ಸುಪ್ರೀಂ ಕೋರ್ಟ್​ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಕೋಲಾರಕ್ಕೆ ಹೊಂದಿಕೊಂಡಿರುವ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ; ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

Published On - 8:19 pm, Sun, 23 January 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್