AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮದರಸಾಗಳ ಮೇಲೆ ಹಿಡಿತ ಸಾಧಿಸಿದ್ದ ಪಿಎಫ್​ಐ: ದೇಶಕ್ಕೆ ಇದೇ ತಂತ್ರ ವಿಸ್ತರಿಸಲು ಮುಂದಾಗಿದ್ದ ಸಂಘಟನೆ

ಕೇರಳದ ಬಹುತೇಕ ಮಸೀದಿಗಳನ್ನು ಪಿಎಫ್​ಐ ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು. ಈ ಪ್ರಯೋಗವನ್ನು ಇನ್ನಷ್ಟು ಜಿಲ್ಲೆ, ರಾಜ್ಯಗಳಿಗೆ ವಿಸ್ತರಿಸಲು ಪಿಎಫ್​ಐ ಮುಂದಾಗಿತ್ತು ಎಂದು ಮೂಲಗಳು ಹೇಳಿವೆ.

ಕೇರಳ ಮದರಸಾಗಳ ಮೇಲೆ ಹಿಡಿತ ಸಾಧಿಸಿದ್ದ ಪಿಎಫ್​ಐ: ದೇಶಕ್ಕೆ ಇದೇ ತಂತ್ರ ವಿಸ್ತರಿಸಲು ಮುಂದಾಗಿದ್ದ ಸಂಘಟನೆ
ಪಿಎಫ್​ಐ ನಿಷೇಧ
TV9 Web
| Edited By: |

Updated on:Oct 09, 2022 | 9:16 AM

Share

ಮಂಗಳೂರು: ಕೇಂದ್ರ ಸರ್ಕಾರವು ನಿಷೇಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸಂಘಟನೆಯು ದೇಶದ ಎಲ್ಲ ಮದರಸಾಗಳ ಮೇಲೆ ಹಿಡಿತ ಸಾಧಿಸಲು ಮುಂದಾಗಿತ್ತು ಎನ್ನುವ ಆಘಾತಕಾರಿ ವಿಚಾರ ಇದೀಗ ಬಯಲಾಗಿದೆ. ಕೇರಳದ ಬಹುತೇಕ ಮಸೀದಿಗಳನ್ನು ಪಿಎಫ್​ಐ ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಮದರಸಗಳು ಸಹ ಪಿಎಫ್ಐ ಹಿಡಿತದಲ್ಲಿದ್ದವು. ಮೇಲ್ನೋಟಕ್ಕೆ ಜಮಾತ್​ಗಳೇ ಈ ಮಸೀದಿಗಳನ್ನು ನಿರ್ವಹಿಸುತ್ತಿರುವಂತೆ ಕಂಡುಬಂದರೂ ಪಿಎಫ್​ಐ ಸಂಘಟನೆಯು ಒಟ್ಟಾರೆ ಕಾರ್ಯವೈಖರಿಯನ್ನು ನಿಯಂತ್ರಿಸುತ್ತಿತ್ತು. ಈ ಪ್ರಯೋಗವನ್ನು ಇನ್ನಷ್ಟು ಜಿಲ್ಲೆ, ರಾಜ್ಯಗಳಿಗೆ ವಿಸ್ತರಿಸಲು ಪಿಎಫ್​ಐ ಮುಂದಾಗಿತ್ತು ಎಂದು ಮೂಲಗಳು ಹೇಳಿವೆ.

ಮನವಿ ಮತ್ತು ಮನವೊಲಿಕೆ ಮೂಲಕ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪಿಎಫ್​ಐ ಪ್ರಯತ್ನಿಸುತ್ತಿತ್ತು. ಮಣಿಯದಿದ್ದರೆ ಬೆದರಿಕೆ ಹಾಕಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ. ಇಂಥ ಮದರಸಾಗಳಲ್ಲಿ ಧರ್ಮಗುರುಗಳ ಜೊತೆಜೊತೆಗೆ ಪಿಎಫ್ಐ ಮುಖಂಡರೂ ಸಹ ತಮ್ಮ ಅಜೆಂಡಾಗಳ ಬಗ್ಗೆ ಬೋಧಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಬೋಧನೆಗೆ ಜಮಾತ್​ನಿಂದ ವಿರೋಧ ವ್ಯಕ್ತವಾದರೆ ಬೆದರಿಕೆ ಹಾಕಲಾಗುತ್ತಿತ್ತು ಎಂದು ಉನ್ನತ ಮೂಲಗಳು ಟಿವಿ9ಗೆ ಮಾಹಿತಿ ನೀಡಿವೆ.

110 ಕಾರ್ಯಕರ್ತರ ಬಂಧನ

ಕರ್ನಾಟಕದಲ್ಲಿ 110 ಪಿಎಫ್​ಐ ಮುಖಂಡರನ್ನು ಬಂಧಿಸಲಾಗಿದ್ದು, 42 ಪಿಎಫ್​ಐ ಕಚೇರಿಗಳಿಗೆ ಬೀಗಮುದ್ರೆ ಹಾಕಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಿಎಫ್​ಐ ಕಚೇರಿಗಳಲ್ಲಿ ಇದ್ದ ಲ್ಯಾಪ್​ಟಾಪ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಿಚಾರಣೆ-ತನಿಖೆ ಮುಂದುವರಿದಿದೆ ಎಂದು ತಿಳಿಸಿದರು. ಪಿಎಫ್​ಐ ಮುಖಂಡರ ವೈಯಕ್ತಿಕ ಬ್ಯಾಂಕ್​ ಅಕೌಂಟ್​ಗಳ ಬಗ್ಗೆ ಇಡಿ ಮತ್ತು ಎನ್​ಐಎ ಪರಿಶೀಲನೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ನಿಷೇಧಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಪ್ರಸ್ತಾಪವಾಗಿದೆ. ಪಿಎಫ್​ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸನ್ನೂ ಉಲ್ಲೇಖಿಸಿದೆ. ಈ ನಿಷೇಧಾಜ್ಞೆಯನ್ನು ಸುಪ್ರೀಂಕೋರ್ಟ್​​ನಲ್ಲಿ ಪ್ರಶ್ನಿಸಲಾಗುವುದು ಎಂದು ಪಿಎಫ್​ಐನ ಅಂಗಸಂಸ್ಥೆ ಸಿಎಫ್​ಐ ಹೇಳಿದೆ.

Published On - 8:59 am, Sun, 9 October 22

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ