AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಪರಶುರಾಮನ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ತುಳುನಾಡು ನಿರ್ಮಾತೃ ಪರಶುರಾಮನ ಪುತ್ಥಳಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿಗೆ ಉಡುಗೊರೆಯಾಗಿ ಪುತ್ಥಳಿ ನೀಡಲಾಗುತ್ತೆ.

ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಪರಶುರಾಮನ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ
ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on: Aug 31, 2022 | 12:29 PM

Share

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸೆಪ್ಟೆಂಬರ್ 1 ಮತ್ತು 2ರಂದು ಕರ್ನಾಟಕ ಹಾಗೂ ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 2ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದು ಪ್ರಧಾನಿ ಮೋದಿಗೆ ಪರಶುರಾಮ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ತುಳುನಾಡು ನಿರ್ಮಾತೃ ಪರಶುರಾಮನ ಪುತ್ಥಳಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿಗೆ ಉಡುಗೊರೆಯಾಗಿ ಪುತ್ಥಳಿ ನೀಡಲಾಗುತ್ತೆ. ಕಾರ್ಯಕ್ರಮಕ್ಕೆ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಸಮಾವೇಶ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಕರೆತರಲು 2000 ಬಸ್ ವ್ಯವಸ್ಥೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು‌ ಉಡುಪಿ‌ ಜಿಲ್ಲೆಗಳಿಂದ ಕರೆತರಲು ಬಸ್ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ಬಳಿಕ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಸೇರಿದಂತೆ 1 ಗಂಟೆ ಕಾಲ ರಾಜ್ಯ ಬಿಜೆಪಿ ನಾಯಕರ ಜೊತೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ.

ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಸೆ. 2ರಂದು ಮಧ್ಯಾಹ್ನ 1.30ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. 1951ರಲ್ಲಿ ಜವಾಹರಲಾಲ್ ನೆಹರೂ ಪ್ರಧಾನಿಯಾಗಿದ್ದಾಗ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದ್ದರು. ಲಾಲ್​ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ ಕೂಡ ಪ್ರಧಾನಿಯಾಗಿದ್ದಾಗ ಮಂಗಳೂರಿಗೆ ಆಗಮಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಕೂಡ ಮಂಗಳೂರು, ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದರು. ಇದೀಗ ನರೇಂದ್ರ ಮೋದಿಯವರು ಈ ವಾರ ಮಂಗಳೂರಿಗೆ ಆಗಮಿಸಲಿದ್ದಾರೆ.

ಪ್ರಧಾನಮಂತ್ರಿಯವರು ಭಾರತದಲ್ಲಿ ಮೊದಲ ಬಾರಿಗೆ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಯುದ್ಧನೌಕೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಬ್ಯೂರೋ (WDB) ವಿನ್ಯಾಸಗೊಳಿಸಿದ ಮತ್ತು ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯದ ಅಡಿಯಲ್ಲಿ ಸಾರ್ವಜನಿಕ ವಲಯದ ಶಿಪ್‌ಯಾರ್ಡ್ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ನಿರ್ಮಿಸಲ್ಪಟ್ಟಿದೆ. ವಿಕ್ರಾಂತ್ ಅತ್ಯಾಧುನಿಕ ಯಾಂತ್ರೀಕೃತಗೊಂಡ ವೈಶಿಷ್ಟ್ಯಗಳೊಂದಿಗೆ ನಿರ್ಮಿಸಲ್ಪಟ್ಟಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!