AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು

ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ 2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.55 ಸೆಕೆಂಡ್​ನಲ್ಲಿ ಕ್ರಮಿಸಿದ್ದರು.

ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು
ಶ್ರೀನಿವಾಸಗೌಡ ವಿರುದ್ಧ ಕ್ರಿಮಿನಲ್ ದೂರು
TV9 Web
| Edited By: |

Updated on:Jul 20, 2022 | 8:43 AM

Share

ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು (Criminal complaint) ದಾಖಲಾಗಿದೆ. ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ ವಿರುದ್ದ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬುವವರು ದೂರು ನೀಡಿದ್ದಾರೆ. ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಆರೋಪ ಕೇಳಿಬಂದಿದೆ. ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ನಡೆಸುವ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ದ ಕ್ರಿಮಿನಲ್ ದೂರು ನೀಡಲಾಗಿದೆ.

ಇದನ್ನೂ ಓದಿ: Ramanagara News: ನಾಡಿನಲ್ಲಿ ಬಹಳ ಜನ ಸಿಎಂ ಆಗಬೇಕೆಂದು ಆಸೆ ಪಟ್ಟಿದ್ದಾರೆ; ಆದರೆ ಭಗವಂತನ ಇಚ್ಛೆ ಬೇರೆ ಇದೆ ಎಂದ ಕುಮಾರಸ್ವಾಮಿ

ಅಧಿಕೃತ ಮಾನ್ಯತೆ ಪಡೆಯದ, ನಂಬಲಾರ್ಹವಲ್ಲದ ಸ್ಕೈ ವೀವ್ ಸಂಸ್ಥೆಯಿಂದ ಸುಳ್ಳು ತೀರ್ಪಿನ ದಾಖಲೆ ನೀಡಲಾಗಿದೆ ಎನ್ನಲಾಗುತ್ತಿದೆ. ಪೊಲೀಸರು ತನಿಖೆ ನಡೆಸದೇ ಇದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡುವುದಾಗಿ ಹೇಳಲಾಗಿದೆ. 2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.55 ಸೆಕೆಂಡ್​ನಲ್ಲಿ ಶ್ರೀನಿವಾಸ ಗೌಡ ಕ್ರಮಿಸಿದ್ದರು. 2009ರಲ್ಲಿ ಉಸೇನ್ ಬೋಲ್ಟ್ 100 ಮೀ. ಅನ್ನು 9.58 ಸೆಕೆಂಡ್​ನಲ್ಲಿ ಕ್ರಮಿಸಿದ ದಾಖಲೆ ಉಡೀಸ್ ಮಾಡಿದ್ದರು. ರಾಜ್ಯ ಸರ್ಕಾರ ಸೇರಿ ದೇಶದ ಹಲವು ಸಂಸ್ಥೆಗಳು ಶ್ರೀನಿವಾಸ ಗೌಡಗೆ ನೆರವು ನೀಡಿದ್ದವು

ದೂರಿನಲ್ಲಿ ದಾಖಲಾಗಿರುವ ಅಂಶಗಳು:

ಮಾನ್ಯರೇ,

ವಿಷಯ:- ಸುಳ್ಳು ದಾಖಲೆ ಸೃಷ್ಟಿಸಿ ಸರಕಾರ ಮತ್ತು ಸಾರ್ವಜನಿಕರಿಗೆ ವಂಚಿಸಿವ ಮೂಲಕ ಕಂಬಳ ಕ್ಷೇತ್ರದ ಖ್ಯಾತಿಗೆ ದಕ್ಕೆ ತಂದಿರುವ ಕುರಿತು.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದೂರುದಾರನಾದ ನಾನು (ಲೋಕೇಶ್ ಶೆಟ್ಟಿ) ಜಿಲ್ಲಾ ಕಂಬಳ ಸಮಿತಿಯ ಆವ ಸದಸ್ಯವಾಗಿದ್ದು, ಆರೋಪಿಗಳು ಸಮಿತಿ ಸದಸ್ಯರಾಗಿರುವುದಿಲ್ಲ. ಮೊದಲನೇ ಆರೋಪಿ ಕಂಬಳ ಅಕಾಡೆಮಿಯನ್ನು ನಡೆಸಿಕೊಂಡು ಬರುತ್ತಿದ್ದು, ತನ್ನ ಸ್ವಂತ ಲಾಭಕ್ಕಾಗಿ ಜಿಲ್ಲಾ ಕಂಬಳ ಸಮಿತಿಯಲ್ಲಿ ಆಕ್ರಮ ಪ್ರವೇಶ ಮಾಡಿರುತ್ತಾರೆ. ಮಾತ್ರವಲ್ಲದೆ ಕಂಬಳ ಕೂಟದ ಸಭೆಗಳಲ್ಲಿ ಮೈಕ್ ಹಿಡಿದು ತಾನೊಬ್ಬ ಮಹಾಸಾಧಕ, ನನ್ನಿಂದಲೇ ಕಂಬಳ ಉಳಿದಿದೆ ಎಂದು ಸಾರ್ವಜನಿಕರಲ್ಲಿ ಬಿಂಬಿಸಿ ತನ್ನ ಸ್ವಾರ್ಥ ಸಾಧನೆಗೆ ಕಂಬಳವನ್ನು ದುರುಪಯೋಗಪಡಿಸಿರುತ್ತಾರೆ.

ಅಷ್ಟೇ ಅಲ್ಲದೆ ಅವರ ಆಕಾಡೆಮಿಯಲ್ಲಿ ತರಬೇತಿ ಪಡೆದಿದ್ದರೆನ್ನಲಾದ ಎರಡನೇ ಆರೋಪಿ ಹೆಸರಲ್ಲಿ ಹಲವು ನಕಲಿ ದಾಖಲೆ ಸೃಷ್ಟಿಸಿದ್ದು, ಮಾಧ್ಯಮಗಳ ಮೂಲಕ ಬೊಗಳೆ ಬಿಟ್ಟು ಕಂಬಳದ ಅಭಿಮಾನಿಗಳು ಮತ್ತು ಸಾರ್ವಜನಿಕರಿಗೆ ಮಾಧ್ಯಮ ಮತ್ತು ಜನಪ್ರತಿನಿಧಿಗಳಿಗೆ ನಂಬಿಕೆ ಬರುವಂತೆ ಮೋಸದಿಂದ ಮೊದಲನೇ ಆರೋಪಿ ನಡೆದುಕೊಂಡಿದ್ದಾರೆ. ಈ ಮೂಲಕ ಮೇಲಿನ ಎಲ್ಲಾ ಆರೋಪಿಗಳು ನಕಲಿ ದಾಖಲೆ ಮತ್ತು ದಾಸ್ತಾವೇಜು ಸೃಷ್ಟಿಸುವ ಮೂಲಕ ಸರಕಾರ ಮತ್ತು ಸಾರ್ವಜನಿಕ ವಲಯದಿಂದ ಲಕ್ಷಾಂತರ ರೂಪಾಯಿ ದೇಣಿಗೆ ಪಡೆದು ಯಾವುದೇ ಲೆಕ್ಕಪತ್ರ ಮಂಡನೆ ಮಾಡದೆ ವಂಚಿಸಿರುತ್ತಾರೆ.

ಮಾಧ್ಯಮ ಮತ್ತು ಜನಪ್ರತಿನಿಗಳಿಗೆ ನಂಬಿಕೆ ಬರುವಂತೆ ಮೊದಲನೇ ಆರೋಪಿ ನಡೆದುಕೊಂಡಿದ್ದಾರೆ ಈ ಮೂಲಕ ಮೇಲಿನ ಎಲ್ಲ ಆರೋಪಿಗಳು ನಕಲಿ ದಾಖಲೆ ಮತ್ತು ದಸ್ತಾವೇಜು ಸೃಷ್ಟಿಸುವ ಮೂಲಕ ಸರಕಾರ ಮತ್ತು ಸಾರ್ವಜನಿಕ ವಲಯದಿಂದ ಲಕ್ಷಾಂತರ ರೂಪಾಯಿ ದೇಣಿಗೆ ಲಕರು ಯಾವದೇ ಲೆಕ್ಕಪತ್ರ ಮಂಡನೆ ಮಡದೆ ವಂಚಿಸಿರುತ್ತಾರೆ

ಮೊದಲನೆ ಮತ್ತು ಎರಡನೇ ಆರೋಪಿಗಳ ಎಲ್ಲಾ ಮೋಸದ ಕೃತ್ಯಗಳಿಗೆ ಮೂರನೇ ಆರೋಪಿ ಸಹಕರಿಸಿದ್ದು, ಯಾವುದೇ ಅಧಿಕೃತ ಮಾನ್ಯತೆ ಪಡೆಯದೆ, ನಂಬಲರ್ಹವಾಗಿರದ ತಂತ್ರಜ್ಞಾನದ ಮೂಲಕ ಮನಸಾಇಚ್ಚೆಯಂತೆ ತೀರ್ಪು ನೀಡಿ, ಸುಳ್ಳು, ಮೋಸ, ವಂಚನೆ ಉದ್ದೇಶಪೂರ್ವಕವಾಗಿ ಸಹಕರಿಸಿರುತ್ತಾರೆ.

ಆರೋಪಿಗಳು ಕಂಬಳದ ಖ್ಯಾತಿ ಮತ್ತು ಘನತೆಗೆ ದಕ್ಕೆ ತಂದಿರುತ್ತಾರೆ. ಆರೋಪಿಗಳ ಮೋಸದ ವಿರುದ್ಧ ದನಿ ಎತ್ತಿದವರಿಗೆ ಆರೋಪಿಗಳು ಜೀವ ಬೆದರಿಕೆ ಒಡ್ಡಿರುವುದು ಕೆಲ ತಿಂಗಳ ಹಿಂದೆ ವೈರಲ್ ಆದ ಆಡಿಯೋ ಸಂದೇಶದಿಂದ ದೃಢಪಟ್ಟಿರುತ್ತದೆ. ಈ ಮೂವರಿಂದಾಗಿ ಯುವ ಓಟಗಾರರ ಮನೂಸ್ಥೈರ್ಯ ಕುಂದಿದಂತಾಗಿದೆ

ಮಾನ್ಯರೆ, ಇದನ್ನು ಕುಲಂಕುಶವಾಗಿ ತನಿಖೆ ನಡೆಸಬೇಕಾಗಿ ತಮ್ಮಲ್ಲಿ ವಿನಂತಿ.

 

Published On - 8:40 am, Wed, 20 July 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​