AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರಿನ ಖಾಸಗಿ ಬಸ್ ನಿಲ್ದಾಣದಲ್ಲಿ ವಾಮಂಜೂರು ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿತ್ತು. ಬಸ್​ನಲ್ಲಿ ಕುಳಿತಿದ್ದ ಜೋಡಿಯನ್ನ ಪ್ರಶ್ನಿಸಿ ಯುವಕರ ತಂಡ ಹಲ್ಲೆ ನಡೆಸಿತ್ತು.

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Jan 10, 2022 | 12:05 PM

Share

ಮಂಗಳೂರು: ನಗರದಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಖಾಸಗಿ ಬಸ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಸ್​ನಲ್ಲಿ ಕುಳಿತಿದ್ದ ಅನ್ಯಕೋಮಿನ ಜೋಡಿಯನ್ನು ಪ್ರಶ್ನಿಸಿ ಯುವಕರ ತಂಡ ಹಲ್ಲೆ ನಡೆಸಿತ್ತು. ಬಸ್ ನಿರ್ವಾಹಕ ಸೇರಿದಂತೆ ಕೆಲ ಯುವಕರು ವಿದ್ಯಾರ್ಥಿನಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಮಂಗಳೂರಿನ ಖಾಸಗಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು.

ಮಂಗಳೂರಿನ ಖಾಸಗಿ ಬಸ್ ನಿಲ್ದಾಣದಲ್ಲಿ ವಾಮಂಜೂರು ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿತ್ತು. ಬಸ್​ನಲ್ಲಿ ಕುಳಿತಿದ್ದ ಜೋಡಿಯನ್ನ ಪ್ರಶ್ನಿಸಿ ಯುವಕರ ತಂಡ ಹಲ್ಲೆ ನಡೆಸಿತ್ತು. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಯುವಕ ಶಿವಮೊಗ್ಗ ಮೂಲದವನಾಗಿದ್ದು, ವಿದ್ಯಾರ್ಥಿನಿ ಉಡುಪಿ ಮೂಲದವಳು ಎಂದು ತಿಳಿದುಬಂದಿದೆ.

ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ಮಂಗಳೂರಿ‌ನ ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲ್ಲೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಮಹಿಳೆಯರು ಧರಿಸುವ ಚಪ್ಪಲಿ ಕಾರಿನಲ್ಲಿ ಪತ್ತೆಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿ ಹಿನ್ನೆಲೆ ಪರಿಶೀಲಿಸುತ್ತಿದ್ದೇವೆ. ಕಾರಿನಲ್ಲಿ ಮಹಿಳೆ ಇದ್ದಳು ಅಂತಾ ಸ್ಥಳೀಯರು ತಿಳಿಸಿದ್ದಾರೆ. ಆದರೆ ಗಾಯಾಳು ಹೇಳಿಕೆ ಇದುವರೆಗೂ ನೀಡಿಲ್ಲ ಅಂತ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ರಂಗನಾಥಸ್ವಾಮಿ ದರ್ಶನ ಮುಗಿಸಿ ಒಂದೇ ಕಾರಿನಲ್ಲಿ ಹೊರಟ ಸಿಎಂ ಮತ್ತು ಮಾಜಿ ಸಿಎಂ

ಕುಲಪತಿ ಹುದ್ದೆಯಿಂದ ನಾನು ಕೆಳಗಿಳಿಯುತ್ತೇನೆ, ನೀವೇ ಅದನ್ನು ನಿರ್ವಹಿಸಿ; ಕೇರಳ ಮುಖ್ಯಮಂತ್ರಿಗೆ ಖಡಕ್​ ಪತ್ರ ಬರೆದ ರಾಜ್ಯಪಾಲ ಆರಿಫ್​ ಮೊಹಮ್ಮದ್​ ಖಾನ್​

Published On - 2:46 pm, Sat, 11 December 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ