AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ನಾಲ್ವರು ಅರೆಸ್ಟ್

ಭಾನುವಾರವಾಗಿದ್ದ ಕಾರಣ ಕೆಲಸಕ್ಕೆ ರಜೆ ಇತ್ತು. ನಾಲ್ಕೈದು ಮಕ್ಕಳು ಹೆಂಚಿನ ಫ್ಯಾಕ್ಟರಿಯ ತುಂಬಾ ಆಟವಾಡಿಕೊಂಡಿದ್ದವು. ಅಪ್ರಾಪ್ತ ಬಾಲಕಿಯೊಬ್ಬಳು ಬೆಳಗ್ಗೆಯಿಂದ ನಾಪತ್ತೆಯಾದ ವಿಚಾರ ಸಂಜೆ 4 ಗಂಟೆಗೆ ಗೊತ್ತಾಗಿತ್ತು.

ಮಂಗಳೂರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ನಾಲ್ವರು ಅರೆಸ್ಟ್
ಸಾಂಕೇತಿಕ ಚಿತ್ರ
TV9 Web
| Updated By: sandhya thejappa|

Updated on:Nov 24, 2021 | 2:12 PM

Share

ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 21ರಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದರು. ಆರೋಪಿಗಳು ಬಾಲಕಿಯ ಕತ್ತು ಹಿಸುಕಿ ಕೊಲೆಗೈದಿದ್ದರು. ರಕ್ತಸ್ರಾವದಿಂದ ಸಂತ್ರಸ್ತೆ ಬಾಲಕಿ ಚೀರಾಡಿದ್ದಳು. ಆದರೆ ಆರೋಪಿಗಳು ಬಾಲಕಿಯ ಕತ್ತು ಹಿಸುಕಿ ಕೊಂದಿದ್ದರು. ಈ ಪ್ರಕರಣ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಂಚಿನ ಕಾರ್ಖಾನೆಯೊಂದರಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿತ್ತು. ಹೆಂಚಿನ ಕಾರ್ಖಾನೆಯಲ್ಲಿ ಕರ್ನಾಟಕ ಮತ್ತು ಉತ್ತರ ಭಾರತ ಮೂಲದ ಒಟ್ಟು 29 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದರಾರೆ. ಅದರಲ್ಲಿ ಜಾರ್ಖಂಡ್ ಮೂಲದ ಕುಟುಂಬ ಕೂಡ ಒಂದು. ಆ ಕುಟುಂಬದ ದಂಪತಿಯ ಅಪ್ರಾಪ್ತ ಮಗಳು ನವೆಂಬರ್ 21ಕ್ಕೆ ಹೆಂಚಿನ ಫ್ಯಾಕ್ಟರಿಯ ಡ್ರೈನೇಜ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಅಂದು ಭಾನುವಾರವಾಗಿದ್ದ ಕಾರಣ ಕೆಲಸಕ್ಕೆ ರಜೆ ಇತ್ತು. ನಾಲ್ಕೈದು ಮಕ್ಕಳು ಹೆಂಚಿನ ಫ್ಯಾಕ್ಟರಿಯ ತುಂಬಾ ಆಟವಾಡಿಕೊಂಡಿದ್ದವು. ಅಪ್ರಾಪ್ತ ಬಾಲಕಿಯೊಬ್ಬಳು ಬೆಳಗ್ಗೆಯಿಂದ ನಾಪತ್ತೆಯಾದ ವಿಚಾರ ಸಂಜೆ 4 ಗಂಟೆಗೆ ಗೊತ್ತಾಗಿತ್ತು. ನಂತರ ಸಂಜೆ ವೇಳೆಗೆ ಸುಮಾರಿಗೆ ಅದೇ ಬಾಲಕಿ ಶವವಾಗಿ ಪತ್ತೆಯಾಗಿದ್ದಳು.

ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಕೊಲೆ ಕೇಸ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿದ್ದರು. ಆಗ ಅದು ಕೊಲೆ ಮಾತ್ರವಲ್ಲ ಅತ್ಯಾಚಾರ ನಡೆದಿದೆ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿತ್ತು. ಸದ್ಯ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

ಇದನ್ನೂ ಓದಿ

ಬಿಬಿಎಂಪಿ ಪೌರಕಾರ್ಮಿಕರಾಗಿದ್ದ ಅಪ್ಪ ಸತ್ತ ಮೇಲೆ ಅನುಕಂಪದ ಮೇಲೆ ಕೆಲಸ ಗಿಟ್ಟಿಸಿಕೊಂಡ ಮಾಯಣ್ಣ ಇಂದು ನುಂಗಣ್ಣ ಆದ ಕತೆ!

ಮುದ್ರಣ ಜಾಹೀರಾತಿನಲ್ಲಿ ವಿಡಿಯೊ ಕ್ಯುಆರ್ ಕೋಡ್ ಬಳಸಲಿದೆ ಮೋದಿ ಸರ್ಕಾರ

Published On - 2:04 pm, Wed, 24 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ