Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ದಾಳಿ: ಐವರು ವಶಕ್ಕೆ

ಪೊಲೀಸ್ ಕಮಿಷನರ್ N.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು ಪಿಎಫ್​​ಐ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಪಿಎಫ್​​ಐ ಮುಂಡರ ವಿರುದ್ಧ UAPA ಕಾಯ್ದೆ ಸೇರಿ ವಿವಿಧ ಸೆಕ್ಷನ್​​​ಗಳಡಿ ಕೇಸ್​ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಮತ್ತೆ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ದಾಳಿ: ಐವರು ವಶಕ್ಕೆ
ಪಿಎಫ್​ಐ ನಿಷೇಧ
Follow us
TV9 Web
| Updated By: ಆಯೇಷಾ ಬಾನು

Updated on:Oct 13, 2022 | 7:55 AM

ಮಂಗಳೂರು: ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಂಗಳೂರಿನಲ್ಲಿ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ. ಪೊಲೀಸ್ ಕಮಿಷನರ್ N.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು ಪಿಎಫ್​​ಐ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಣಂಬೂರು, ಸುರತ್ಕಲ್, ಮಂಗಳೂರು ಗ್ರಾಮಾಂತರ, ಉಳ್ಳಾಲ ಸೇರಿ ಏಳೆಂಟು ಕಡೆ ದಾಳಿ ಮಾಡಿರುವ ಪೊಲೀಸರು ಮನೆಗಳ ಸಂಪೂರ್ಣ ಪರಿಶೀಲನೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ಪಿಎಫ್​​ಐ ಮುಂಡರ ವಿರುದ್ಧ UAPA ಕಾಯ್ದೆ ಸೇರಿ ವಿವಿಧ ಸೆಕ್ಷನ್​​​ಗಳಡಿ ಕೇಸ್​ ದಾಖಲಿಸಲಾಗಿದೆ. ಇದನ್ನೂ ಓದಿ: ದೊಡ್ಡ ರಹಸ್ಯ ಬಯಲು ಮಾಡಲು ಹೋಗಿ ಗೊಂದಲಕ್ಕೆ ತುತ್ತಾದ ಝೇಂಡೆ; ತಿಳಿಯಿತು ಹಲವು ವಿಚಾರ

ಟರ್ಕಿ ದೇಶದ ಜೊತೆ ಸಂಪರ್ಕ ಹೊಂದಿದ್ದ ಪಿಎಫ್ಐಗೆ ಹರಿದುಬಂದ ಹಣದ ಹೊಳೆ

ಬೆಂಗಳೂರು: ನಿಷೇಧಿತ ಪಿಎಫ್​ಐ ಸಂಘಟನೆಯ ಮುಖಂಡರನ್ನು ಎನ್​ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಸಾಕಷ್ಟು ಮಾಹಿತಿಯನ್ನು ಹೊರಹಾಕಿದ್ದಾರೆ. ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಪಿಎಫ್​ಐಗೆ ಟರ್ಕಿ ದೇಶದ ಜತೆ ಸಂಪರ್ಕ ಹೊಂದಿದ್ದ ಬಗ್ಗೆ ತಿಳಿದುಬಂದಿದ್ದು, ಟರ್ಕಿ, ಕತಾರ್​ ದೇಶಗಳಿಂದ ಹಣದ ಹೊಳೆಯೇ ಹರಿದುಬಂದಿದೆ ಎಂಬ ಮಾಹಿತಿ ಹೊರಬಿದ್ದಿದೆ. ಟರ್ಕಿ, ಕತಾರ್​ ದೇಶಗಳಿಂದ ಕೇರಳ ಮೂಲಕ ಪಿಎಫ್​ಐಗೆ ಹವಲಾ ಹಣ ಸಂದಾಯವಾಗುತ್ತಿತ್ತು. ನಂತರ ದೇಶದ ವಿವಿಧ ಕಡೆಗಳಲ್ಲಿರುವ ಪಿಎಫ್​ಐ ಖಾತೆಗಳಿಗೆ ವರ್ಗಾವಣೆಯಾಗುತ್ತಿತ್ತು ಎನ್ನಲಾಗುತ್ತಿದೆ. ಹೀಗೆ ಹರಿದುಬಂದ ಹಣವನ್ನು ದೇಶ ವಿರೋಧಿ ಕೃತ್ಯಕ್ಕೆ, ಸರ್ಕಾರದ ವಿರುದ್ಧದ ಪ್ರತಿಭಟನೆ, ಅಪರಾಧಿ ಕೃತ್ಯಗಳಲ್ಲಿ ಬಂಧಿತ PFI ಸದಸ್ಯರ ಕುಟುಂಬಗಳಿಗೆ ನೆರವು ಮತ್ತು ತರಬೇತಿ ಶಿಬಿರಗಳಿಗೆ ಬಳಕೆ ಮಾಡಲಾಗುತ್ತಿತ್ತು ಎಂಬೂದು ತನಿಖೆ ವೇಳೆ ತಿಳಿದುಬಂದಿದೆ.

ಕತಾರ್​ಗೆ ಭೇಟಿ ಕೊಟ್ಟ ಪಿಎಫ್​ಐ ತಂಡ

ಭಾರತದಿಂದ ಪಿಎಫ್ಐನ ಒಂದು ತಂಡ ಕತಾರ್​ನಲ್ಲಿನ ದೋಹ ಎಂಬ ಪ್ರದೇಶದಕ್ಕೆ ಬೇಟಿ ನೀಡಿದ್ದು, ಟರ್ಕಿಯಿಂದ ಸಹ ಒಂದು ತಂಡ ಕತಾರ್​​ನ ದೋಹಕ್ಕೆ ಬಂದಿದೆ. ಇಲ್ಲಿ ಎರಡು ದಿನಗಳ ಕಾಲ ಸಭೆ ನಡೆಸಲಾಗಿದೆ. ದೇಶದಲ್ಲಿ ನಡೆದ ಸಿಎಎ ಪ್ರತಿಭಟನೆ ಸೇರಿ ಬೇರೆ ಬೇರೆ ಹಂತದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ಎಲ್ಲಾ ಈ ಟರ್ಕಿಯಿಂದ ಹಣ ರವಾನೆ ಅಗಿದೆ. ಈ ಹಣವು ಟರ್ಕಿ ಮೀಟಿಂಗ್ ಬಳಿಕ ವರ್ಗಾವಣೆಯಾಗಿದೆ. ಇದಾದ ಬಳಿಕ ಪಿಎಫ್​ಐನಿಂದ ತೀವ್ರ ಚಟುವಟಿಕೆಗಳು ಆರಂಭವಾದವು. ಸದ್ಯ ಟರ್ಕಿಗೆ ಹೋಗಿದ್ದು, ಅಲ್ಲಿಂದ ಭಾರತಕ್ಕೆ ಹಣ ಬಂದಿದ್ದು ಎಲ್ಲವನ್ನು ಟೈಮ್ ಮ್ಯಾಪಿಂಗ್ ಮಾಡಿರುವ ಎನ್ಐಎ ಟರ್ಕಿ ತೆರಳಿದ್ದ ಸಂಪೂರ್ಣ ಸಾಕ್ಷಿಗಳನ್ನು ಕಲೆಗಾಕಿಕೊಂಡಿದೆ. ಇದನ್ನು ಮುಂದಿಟ್ಟುಕೊಂಡು ಪಿಎಫ್​ಐ ಮುಖಂಡರನ್ನು ವಿಚಾರಣೆ ನಡೆಸಲಾಗುತ್ತಿದೆ.

Published On - 7:55 am, Thu, 13 October 22

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ