AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಸರಗೋಡಿನ ಮನೆಯಲ್ಲಿ ಸಿಕ್ತು 2000 ಮುಖಬೆಲೆಯ ಬರೋಬ್ಬರಿ 7 ಕೋಟಿ ರೂ. ನಗದು!

ದಕ್ಷಿಣ ಕನ್ನಡ ಜಿಲ್ಲೆಯ ಸಮೀಪದ ಕಾಸರಗೋಡಿನ ಮನೆಯೊಂದರಲ್ಲಿ ಚಲಾವಣೆಯಿಂದ ಹಿಂಪಡೆಯಲಾಗಿರುವ 2000 ಮುಖಬೆಲೆಯ ಸುಮಾರು 7 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು ಹಲವು ಅನುಮಾನಗಳನ್ನು. ಸದ್ಯ ನಗದನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದಾರೆ. ಕರ್ನಾಟಕದ ಹಲವಡೆ ಕೂಡ ಗುರುವಾರ ಕೋಟ್ಯಂತರ ಮೌಲ್ಯದ ನಗದು, ಆಭರಣ, ಬಟ್ಟೆ ಬರೆ ವಶಪಡಿಸಿಕೊಳ್ಳಲಾಗಿದೆ. ಆ ಕುರಿತ ವಿವರ ಇಲ್ಲಿದೆ.

ಕಾಸರಗೋಡಿನ ಮನೆಯಲ್ಲಿ ಸಿಕ್ತು 2000 ಮುಖಬೆಲೆಯ ಬರೋಬ್ಬರಿ 7 ಕೋಟಿ ರೂ. ನಗದು!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Mar 22, 2024 | 7:22 AM

Share

ಮಂಗಳೂರು, ಮಾರ್ಚ್​ 22: ನೆರೆಯ ಕೇರಳ ರಾಜ್ಯದ ಕಾಸರಗೋಡು (Kasaragod) ಜಿಲ್ಲೆಯ ಗುರಪುರದ ಅಂಬಲತ್ತರ ಎಂಬಲ್ಲಿನ ಮನೆಯೊಂದರಿಂದ 7 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ (Currency Notes) ಮುಖಬೆಲೆಯ ನೋಟುಗಳನ್ನು ಪೊಲೀಸರು (Kasaragod Police) ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಖಚಿತ ಮಾಹಿತಿ ಪಡೆದ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿದ್ದರು. 2000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಕೇಂದ್ರ ಸರ್ಕಾರ ಕಳೆದ ವರ್ಷದ ಆರಂಭದಲ್ಲಿ ಚಲಾವಣೆಯಿಂದ ಹಿಂಪಡೆದಿತ್ತು.

ನೋಟುಗಳು ಪತ್ತೆಯಾಗಿರುವುದು ಗಲ್ಫ್ ಉದ್ಯೋಗಿ ಕೆಪಿ ಬಾಬು ರಾಜ್ ಅವರ ಮಾಲೀಕತ್ವದ ಮನೆಯಲ್ಲಿ ಎಂದು ಪೊಲೀಸರು ತಿಳಿಸಿದ್ದಾರೆ. ಬಾಬು ರಾಜ್ ಅವರು ಪಾಣತ್ತೂರು ನಿವಾಸಿ ಅಬ್ದುಲ್ ರಜಾಕ್ ಎಂಬುವವರಿಗೆ ಮನೆ ಬಾಡಿಗೆಗೆ ನೀಡಿದ್ದರು.

ಕಳೆದ ಮೂರು ದಿನಗಳಿಂದ ಪೊಲೀಸರು ಮನೆಯ ಮೇಲೆ ನಿಗಾ ಇರಿಸಿದ್ದರು. ಬುಧವಾರ ದಾಳಿ ನಡೆಸಿ ಎರಡು ಕೊಠಡಿಗಳಲ್ಲಿ ಸಂಗ್ರಹಿಸಿಟ್ಟಿದ್ದ ಕರೆನ್ಸಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. 2000 ರೂಪಾಯಿ ನೋಟುಗಳನ್ನು ಥರ್ಮಾಕೋಲ್ ಬಾಕ್ಸ್, ರಟ್ಟಿನ ಬಾಕ್ಸ್ ಮತ್ತು ಗೋಣಿಚೀಲಗಳಲ್ಲಿ ತುಂಬಿರುವುದು ಪತ್ತೆಯಾಗಿದೆ.

ಕರ್ನಾಟಕದ ಹಲವೆಡೆ ಕೋಟಿ ಮೌಲ್ಯದ ವಸ್ತುಗಳು ವಶ

ಇನ್ನು ಕರ್ನಾಟಕದ ಹಲವೆಡೆ ಗುರುವಾರ ಕೋಟಿ ಕೋಟಿ ಮೌಲ್ಯದ ಬಟ್ಟೆಗಳು, ಸೀರೆ, ಆಭರಣ ಹಾಗೂ ನಗದನ್ನು ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಚುನಾವಣಾ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ‌ಕೆಆರ್ ಪುರಂನಲ್ಲಿರೋ ಡಿಲಕ್ಸ್ ಲಾಜಿಸ್ಟಿಕ್ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.1 ಕೋಟಿ ರೂ. ಮೌಲ್ಯದ ಬಟ್ಟೆಗಳನ್ನು ಸೀಜ್ ಮಾಡಿದ್ದಾರೆ. ಸದ್ಯ ಈ ಎಲ್ಲ ಬಟ್ಟೆಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ಪೈಪೋಟಿ​ ಮಧ್ಯೆ ಆಮಿಷದ ವಸ್ತುಗಳ ಸದ್ದು ಕೂಡ ಅಷ್ಟೇ ಜೋರಾಗಿದೆ. ಭದ್ರಾವತಿ ತಾಲೂಕಿನ ಬಿಆರ್​​ಪಿ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 700ಕ್ಕೂ ಹೆಚ್ಚು ಸೀರೆಗಳು ವಶಪಡಿಸಿಕೊಳ್ಳಲಾಗಿದೆ. 500, 200 ಬೆಲೆಯ ಮತ್ತು ನೂರು ರೇಷ್ಮೆ ಸೀರೆಗಳು ಚೂಡಿದಾರ್ ಪೀಸ್​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತದಲ್ಲಿ ಹಸುಗೂಸು ಸೇರಿ ಮಂಗಳೂರಿನ ನಾಲ್ವರು ಸಾವು

ರಾಮನಗರ ಜಿಲ್ಲೆಯ ಮಾಗಡಿ‌ ತಾಲೂಕಿನ ತಟವಾಳ್ ಗ್ರಾಮದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್​ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಸದ್ಯ ಅಪರಿಚಿತರ ಮೇಲೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಚಿಕ್ಕಮಗಳೂರು ತಾಲೂಕಿನ ಮಾಗಡಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ತಪಾಸಣೆ ನಡೆಸುವ ವೇಳೆ 13.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮುತ್ತು, ಹರಳು ಪತ್ತೆಯಾಗಿದ್ದು, ಚಿನ್ನದ ಸರ ಸೇರಿ ಉಂಗುರಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ