AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಪ್ರಮೋದ್ ಮುತಾಲಿಕ್

ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶ ನಿರ್ಬಂಧ ತೆರವಾದ ಹಿನ್ನೆಲೆ ಇಂದು ಭೇಟಿ ನೀಡಿದ್ದು, ಪ್ರವೀಣ್ ತಾಯಿ, ತಂದೆ ಹಾಗೂ ಪತ್ನಿಗೆ ಸಾಂತ್ವನ ಹೇಳಿದರು.

ಪ್ರವೀಣ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಪ್ರಮೋದ್ ಮುತಾಲಿಕ್
ಪ್ರವೀಣ್ ‌ನೆಟ್ಟಾರು‌ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ.
TV9 Web
| Edited By: |

Updated on: Sep 19, 2022 | 6:25 PM

Share

ಮಂಗಳೂರು: ಹತ್ಯೆಯಾದ ಪ್ರವೀಣ್ ‌ನೆಟ್ಟಾರು‌ ಮನೆಗೆ ಇಂದು ಪ್ರಮೋದ್ ಮುತಾಲಿಕ್ ಭೇಟಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನಿವಾಸಕ್ಕೆ ಹತ್ಯೆಯ ಹಲವು ದಿನಗಳ ಬಳಿಕ‌ ಮುತಾಲಿಕ್ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶ ನಿರ್ಬಂಧ ತೆರವಾದ ಹಿನ್ನೆಲೆ ಇಂದು ಭೇಟಿ ನೀಡಿದ್ದು, ಪ್ರವೀಣ್ ತಾಯಿ, ತಂದೆ ಹಾಗೂ ಪತ್ನಿಗೆ ಸಾಂತ್ವನ ಹೇಳಿದರು. ಪ್ರವೀಣ್ ಸಮಾಧಿ ಸ್ಥಳಕ್ಕೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಪ್ರವೀಣ್ ಕುಟುಂಬಸ್ಥರ ಭೇಟಿ ಬಳಿಕ ಪ್ರಮೋದ್ ಮುತಾಲಿಕ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪ್ರವೀಣ್ ಸಾವನ್ನು ಕಾರ್ಯಕರ್ತರಾದ ನಾವು ವ್ಯರ್ಥವಾಗಲು ಬಿಡಲ್ಲ. ಸರ್ಕಾರ ಏನು ಮಾಡುತ್ತೋ ಬಿಡುತ್ತೋ ನಮಗೆ ಗೊತ್ತಿಲ್ಲ. ಆದರೆ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗೋವರೆಗೆ ನಾವು ವಿರಮಿಸಲ್ಲ. ಇಂಥ ಇಸ್ಲಾಮಿಕ್ ‌ಗೂಂಡಾಗಳಿಗೆ ಭಾರತದ ನೆಲದಲ್ಲಿ ಅವಕಾಶ ಮಾಡಿ ಕೊಡಲ್ಲ ಎಂದು ಹೇಳಿದರು.

ಆರೋಪಿಗಳಿಗೆ ಬೇಲ್ ಕೊಟ್ಟರೆ ಹಿಂದೂ ಸಮಾಜ ಬಿಡಲ್ಲ. ಅವರ ಮೇಲೆ ಕೋಕಾ ಕಾಯಿದೆ ಹೇರುವ ಕೆಲಸ ‌ಸರ್ಕಾರ ಮಾಡಲಿ. ಪ್ರವೀಣ್ ಕುಟುಂಬಕ್ಕೆ ಸಿಎಂ ಕೆಲಸ ಕೊಡುವ ಭರವಸೆ ಕೊಟ್ಟಿದ್ದಾರೆ. ಆದರೆ ಇದು ಭರವಸೆ ಆಗಬಾರದು, ಹಿಂದೆಯೂ ಭರವಸೆ ಕೊಟ್ಟು ಈಡೇರಿಸಿಲ್ಲ. ಶರತ್ ಮಡಿವಾಳ, ಪರೇಶ್ ಮೇಸ್ತಾ ವಿಚಾರದಲ್ಲಿ ‌ಹೀಗೇ ಆಗಿದೆ. ಭರವಸೆ ‌ಈಡೇರಿಸದೇ ಇದ್ದರೆ ನಿಮ್ಮ ‌ಮನೆಯ ಎದುರು ಧರಣಿ ಮಾಡ್ತೇವೆ. ಧರಣಿ ಜೊತೆಗೆ ನಿಮ್ಮ ‌ಮುಖಕ್ಕೆ ಮಸಿ ಬಳೀತಿವಿ ಎಂದು ಹೇಳಿದರು.

ಪ್ರವೀಣ್ ನೆಟ್ಟಾರು ಸೋದರನಿಂದ ಕೊಲೆ ಬೆದರಿಕೆ:  

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಬೆದರಿಕೆ ಹಾಕಿದವನ ಬಂಧನಕ್ಕೆ ಆಗ್ರಹಿಸಿ ಬೆಳ್ಳಾರೆ ಠಾಣೆ ಎದುರು‌ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫಿಕ್ ಸೋದರ ಸಫ್ರಿದ್‌ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಫೋನ್ ಕರೆ ಮಾಡಿ ಹಿಂದೂ ಕಾರ್ಯಕರ್ತ ಪ್ರಶಾಂತ್ ರೈ ಎಂಬುವವರಿಗೆ ಬೆದರಿಕೆ ಹಾಕಿದ್ದಾನಂತೆ. ಪ್ರಶಾಂತ್ ರೈ, ಸಫ್ರಿದ್ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಫ್ರಿದ್ ಬಂಧನಕ್ಕೆ ಆಗ್ರಹಿಸಿ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ