AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ಜೀವಕ್ಕೆ 25 ಲಕ್ಷ ಕಟ್ಟಬೇಡಿ: ಬಿಲ್ಲವ ಈಡಿಗ ಸಮುದಾಯಕ್ಕೆ ನಾವು ನಂಬಿದ ಪಕ್ಷದಿಂದ ರಕ್ಷಣೆ ಸಿಗುತ್ತಿಲ್ಲ-ಪ್ರಣವಾನಂದಶ್ರೀ

ಹಿಂದುಳಿದ‌ ಬಿಲ್ಲವ ಈಡಿಗ ಸಮುದಾಯದ ಜನ ಗಂಟೆಯಲ್ಲಿ ಸಾಯುತ್ತಿದ್ದಾರೆ. ಇದರಿಂದ‌ ನಮ್ಮ ಸಮುದಾಯಕ್ಕೆ ನಷ್ಟವಾಗಿದೆ. ನಮಗೆ ಈ ಪರಿಸ್ಥಿತಿ ಬರಲು ನಮ್ಮ ಪ್ರಾಮಾಣಿಕತೆಯೇ ಕಾರಣ. ನಾವು ನಂಬಿದ ಪಕ್ಷದಿಂದ ರಕ್ಷಣೆ ಸಿಗುತ್ತಿಲ್ಲ.

ಪ್ರವೀಣ್ ಜೀವಕ್ಕೆ 25 ಲಕ್ಷ ಕಟ್ಟಬೇಡಿ: ಬಿಲ್ಲವ ಈಡಿಗ ಸಮುದಾಯಕ್ಕೆ ನಾವು ನಂಬಿದ ಪಕ್ಷದಿಂದ ರಕ್ಷಣೆ ಸಿಗುತ್ತಿಲ್ಲ-ಪ್ರಣವಾನಂದಶ್ರೀ
ಪ್ರಣವಾನಂದ ಸ್ವಾಮೀಜಿ
TV9 Web
| Updated By: ಆಯೇಷಾ ಬಾನು|

Updated on:Jul 28, 2022 | 9:16 PM

Share

ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಇಂದು(ಜುಲೈ 28) ಪ್ರವೀಣ್ ನೆಟ್ಟಾರು(Praveen Nettar) ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಮಾಡಿದ್ರು. ಹಾಗೂ 25 ಲಕ್ಷ ರೂ. ಪರಿಹಾರದ ಚೆಕ್‌ ನೀಡಿ ರಾಜ್ಯ ಬಿಜೆಪಿ ಸರ್ಕಾರ ನಿಮ್ಮೊಂದಿಗಿದೆ ಇದೆ ಎಂದು ಅಭಯ ನೀಡಿದ್ರು. ಆದ್ರೆ ಮತ್ತೊಂದು ಕಡೆ ಪ್ರವೀಣ್ ಜೀವಕ್ಕೆ 25 ಲಕ್ಷದಲ್ಲಿ ಬೆಲೆ ಕಟ್ಟಬೇಡಿ. ನಿಮ್ಮ ಸಿದ್ಧಾಂತಕ್ಕಾಗಿ ನಮ್ಮ ಸಮುದಾಯದ ಯುವಕ ಬಲಿಯಾಗಿದ್ದಾನೆ ಎಂದು ಬ್ರಹ್ಮಶ್ರಿ ನಾರಾಯಣಗುರು ಶಕ್ತಿಪೀಠದ‌ ಪ್ರಣವಾನಂದ ಸ್ವಾಮೀಜಿ(Pranavananda Swamiji) ವಾಗ್ದಾಳಿ ನಡೆದಿದ್ದಾರೆ.

ಹಿಂದುಳಿದ‌ ಬಿಲ್ಲವ ಈಡಿಗ ಸಮುದಾಯದ ಜನ ಗಂಟೆಯಲ್ಲಿ ಸಾಯುತ್ತಿದ್ದಾರೆ. ಇದರಿಂದ‌ ನಮ್ಮ ಸಮುದಾಯಕ್ಕೆ ನಷ್ಟವಾಗಿದೆ. ನಮಗೆ ಈ ಪರಿಸ್ಥಿತಿ ಬರಲು ನಮ್ಮ ಪ್ರಾಮಾಣಿಕತೆಯೇ ಕಾರಣ. ನಾವು ನಂಬಿದ ಪಕ್ಷದಿಂದ ರಕ್ಷಣೆ ಸಿಗುತ್ತಿಲ್ಲ. ಹಾಗಾಗಿ ಬಿಲ್ಲವ ಸಮುದಾಯದ ಯುವಕರು ಒಂದು ಶಪಥ ಮಾಡಬೇಕು. ಇನ್ನು ಮುಂದೆ ಕೋಮು ಗಲಾಟೆಯಲ್ಲಿ ಪಾಲ್ಗೊಳ್ಳುವುದಿಲ್ಲ. ಯಾವುದೇ ಕೇಸ್ ಹಾಕಿಸಿಕೊಳ್ಳುವುದಿಲ್ಲ. ಇಡೀ ಕರಾವಳಿಯಲ್ಲಿ ಬಿಲ್ಲವ ಸಮುದಾಯದವರು ಶಪಥ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ನಾನು ಪಾದಯಾತ್ರೆ ಮಾಡುತ್ತೇನೆ ಎಂದರು.

ಸಿಎಂಗೆ ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ

ಮುಖ್ಯಮಂತ್ರಿಗೆ ನಾನು ಎಚ್ಚರಿಕೆ ಕೊಡುತ್ತೇನೆ. ಇನ್ನು ನಮ್ಮ ಸಮುದಾಯ ಸುಮ್ಮನಿರುವುದಿಲ್ಲ. ಪ್ರವೀಣ್ ಜೀವಕ್ಕೆ 25 ಲಕ್ಷದಲ್ಲಿ ಬೆಲೆ ಕಟ್ಟಬೇಡಿ. ನಿಮ್ಮ ಸಿದ್ಧಾಂತಕ್ಕಾಗಿ ನಮ್ಮ ಸಮುದಾಯದ ಯುವಕ ಬಲಿಯಾಗಿದ್ದಾನೆ. ಪ್ರವೀಣ್ ಕುಟುಂಬಕ್ಕೆ ಸರ್ಕಾರಿ ನೌಕರಿ, ಒಂದು ಕೋಟಿ ರೂ ಪರಿಹಾರ ನೀಡಬೇಕು. ನಮ್ಮ ಬೇಡಿಕೆಗಳನ್ನ ಈಡೇರಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಪ್ರಣವಾನಂದ‌ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತನಾಡಿದ ಬಳಿಕ ಪ್ರಣವಾನಂದ‌ ಸ್ವಾಮೀಜಿ ವಾಗ್ದಾಳಿ ನಡೆಸಿದ್ರು.

ನಾಳೆ ಪಾದಯಾತ್ರೆ ಮೂಲಕ ಪ್ರತಿಭಟನೆಗೆ ಹಿಂದೂ ಸಂಘಟನೆಗಳ ಕರೆ

ಚಿಕ್ಕಮಗಳೂರು:ಮೂಡಿಗೆರೆಯಿಂದ ಚಿಕ್ಕಮಗಳೂರು ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. 30 ಕಿ.ಮೀ. ಪಾದಯಾತ್ರೆ ನಡೆಸಿ ಡಿಸಿಗೆ ಮನವಿಗೆ ಸಲ್ಲಿಸಲು ನಿರ್ಧರಿಸಿದ್ದಾರೆ. ಪ್ರವೀಣ್ ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮನವಿ ಮಾಡಲಿದ್ದಾರೆ. ನಾಳೆಯ ಪಾದಯಾತ್ರೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

Published On - 9:01 pm, Thu, 28 July 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!