AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Praveen Nettar: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಎನ್​ಐಎ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಪತ್ತೆಗೆ NIA ಬಹುಮಾನ ಘೋಷಿಸಿದೆ.

Praveen Nettar: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಎನ್​ಐಎ
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 20, 2023 | 10:18 AM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಪತ್ತೆಗೆ NIA ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಮಗ ಷರೀಫ್ ಮತ್ತು ನೆಕ್ಕಿಲಾಡಿಯ ಅಗ್ನಾಡಿ ಹೌಸ್​ನ ಅಬೂಬಕರ್ ಮಗ ಮಸೂದ್ ಕೆ.ಎ ಆರೋಪಿಗಳಾಗಿದ್ದು, ಇವರಿಬ್ಬರ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನವನ್ನು ಎನ್​ಐಎ ಘೋಷಿಸಿದೆ. ಬೆಂಗಳೂರಿನ ದೊಮ್ಮಲೂರು  ಬಳಿ ಇವರು NIAಯ SP ಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಎನ್​​​ಐಎ ತಂಡ ಇತ್ತೀಚೆಗೆ ಮೂವರು ಆರೋಪಿಗಳನ್ನು ಬಂಧಿಸಿತ್ತು.

ಘಟನೆ ಹಿನ್ನೆಲೆ

ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದು, ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದರು. ದುಷ್ಕರ್ಮಿಗಳು  ಹತ್ಯೆಗೈದು ಪರಾರಿಯಾಗಿದ್ದರು.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯನ್ನು ಬಂಧಿಸಿದ NIA

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿದ್ದಾರೆ. ನಾಕಾಬಂದಿ ಹಾಕಿ ಕೊಲೆ ಆರೋಪಿಗಳಿಗಾಗಿ ತಲಾಶ್‌ ನಡೆಸುತ್ತಿದ್ದಾರೆ.

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು:

ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ. ಪ್ರವೀಣ್ ಕೊಲೆಯಾಗೊ ಮೊದಲು ಎರಡು ಬಾರಿ ಹತ್ಯೆ ಯತ್ನ ನಡೆದಿತ್ತು. ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಅದೇ ಬೈಕ್​ನಲ್ಲಿ ಕೊಲ್ಲಲು ತಂಡ ಬಂದಿದ್ದು, ಆದರೆ ಅಂಗಡಿ ಬಳಿ ಜನ ಇದ್ದಿದ್ದರಿಂದ ವಾಪಾಸ್ ಹೋಗಿದ್ದಾರೆ. ಜು.24 ರಂದು ಸಂಜೆ 4.30 ಕ್ಕೆ ಕೊಲ್ಲಲು ಸಂಚು ರೂಪಿಸಿದ್ದು, ಅಂದು ಆ ಮೂವರ ತಂಡದಲ್ಲಿ ಅಬೀದ್ ಕೂಡ ಇದ್ದ ಎಂದು ಹೇಳಲಾಗಿದೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹಂತಕರಿಗಾಗಿ ಪುತ್ತೂರು, ಸುಳ್ಯದಲ್ಲಿ ಎನ್​ಐಎ ತಂಡದಿಂದ ವ್ಯಾಪಕ ತಲಾಶ್​

ವಿಚಾರಣೆ ವೇಳೆ ಪೊಲೀಸರಿಗೆ ಅಬೀದ್ ಹೇಳಿಕೆ‌ ನೀಡಿದ್ದು, ಅಂದು ಕೊಲೆ ಮಾಡಲು ಇಬ್ಬರ ಜೊತೆ ಅಬೀದ್ ಹೋಗಿದ್ದು, ಅಂಗಡಿ ಬಳಿ ಪ್ರವೀಣ್ ಇದ್ದಾನ ಇಲ್ವಾ ಅಂತಾ ನೋಡಲು  ನೌಫಾಲ್ ಹೋಗಿದ್ದ. ಅವತ್ತು ಪ್ರವೀಣ್ ಅಂಗಡಿಯಲ್ಲಿ ಇರಲಿಲ್ಲ‌. ಪ್ರವೀಣ್ ಅಂಗಡಿಯಲ್ಲಿ ಇಲ್ಲ ಅಂತಾ ನೌಫಾಲ್‌ ಮಾಹಿತಿ ನೀಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ