AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ಅಂಗಡಿಯಿಂದ 500 ಮೀಟರ್ ದೂರದಲ್ಲೇ ಬಾಡಿಗೆ ಮನೆ ಪಡೆದು ಕೊಲೆ ಸಂಚು: ತನಿಖೆಯಲ್ಲಿ ಹೊರಬಿತ್ತು ಅಸಲಿ ಸತ್ಯ

ಬೆಳ್ಳಾರೆ ಮುಖ್ಯರಸ್ತೆಯಲ್ಲೇ ಶಫೀಕ್ ಮನೆ ಇದ್ದು ಬಾಡಿಗೆ ಮನೆ ಪಡೆದು ತಂದೆ ತಾಯಿ ಜೊತೆ ಆರೋಪಿ ವಾಸವಿದ್ದ. ಇದೇ ಮನೆಯಲ್ಲಿ ಕುಳಿತು ಪ್ರವೀಣ್ ಹತ್ಯೆಗೆ ಬಲೆ ಹೆಣೆಯಲಾಗಿತ್ತು.

ಪ್ರವೀಣ್ ಅಂಗಡಿಯಿಂದ 500 ಮೀಟರ್ ದೂರದಲ್ಲೇ ಬಾಡಿಗೆ ಮನೆ ಪಡೆದು ಕೊಲೆ ಸಂಚು: ತನಿಖೆಯಲ್ಲಿ ಹೊರಬಿತ್ತು ಅಸಲಿ ಸತ್ಯ
ಮೃತ ಪ್ರವೀಣ್ ನೆಟ್ಟಾರು
TV9 Web
| Edited By: |

Updated on: Jul 31, 2022 | 4:48 PM

Share

ಮಂಗಳೂರು: ಪ್ರವೀಣ್ ನೆಟ್ಟಾರ(Praveen Nettar) ಹತ್ಯೆ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಸ್ಫೋಟಕ ಸತ್ಯವೊಂದು ಬಯಲಾಗಿದೆ. ಪೊಲೀಸರ ಒಂದು ಟೀಮ್ ಕರ್ನಾಟಕದಲ್ಲಿ, ಮತ್ತೊಂದು ಟೀಮ್ ಕೇರಳದಲ್ಲಿ, ಮತ್ತೊಂದು ಟೀಮ್ ಟೆಕ್ನಿಕಲ್ ಸಾಕ್ಷ್ಯ ಕಲೆ ಹಾಕ್ತಿದೆ. ಇನ್ನೂಂದು ತಂಡ ಆರೋಪಿಗಳಿಂದ ಸತ್ಯ ಹೊರಹಾಕಿಸುವ ಪ್ರಯತ್ನದಲ್ಲಿದೆ. ಸದ್ಯ ಈಗ ಪೊಲೀಸರ ತನಿಖೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವನಿಯೋಜಿತ ಕೃತ್ಯ ಎನ್ನುವುದು ದೃಢಪಟ್ಟಿದೆ. ಹಾಗೂ ಹತ್ಯೆಗೆ ಯಾವ ರೀತಿ ಸಂಚು ರೂಪಿಸಲಾಗಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆಯಾಗಿತ್ತು. ಪ್ರವೀಣ್ ಹತ್ಯೆಗೂ ಮುನ್ನ ಹಂತಕರು ಸ್ಟ್ರೀಟ್ಲೈಟ್ ಆಫ್ ಮಾಡಿ ಬಳಿಕ ಕೊಲೆ ಮಾಡಿದ್ದಾರೆ ಎಂಬ ಸತ್ಯ ಬಯಲಾಗಿದೆ. ಆರೋಪಿಗಳು ಪ್ರವೀಣ್ ಅಂಗಡಿಯಿಂದ 500 ಮೀಟರ್ ದೂರದಲ್ಲಿ ಬಾಡಿಗೆ ಮನೆಮಾಡಿಕೊಂಡು ವಾಸವಿದ್ದರು ಎಂಬುವುದು ಬಹಿರಂಗವಾಗಿದೆ. ಪ್ರವೀಣ್ ಹತ್ಯೆ ಕೇಸ್ನಲ್ಲಿ ಶಫೀಕ್, ಜಾಕೀರ್ ಪಾತ್ರವಿರುವುದು ದೃಢವಾಗಿರುವ ಹಿನ್ನೆಲೆ ಸರ್ಚ್ವಾರಂಟ್ ಪಡೆದು ಶಫೀಕ್ ಮನೆಯಲ್ಲಿ ಪೊಲೀಸರು ಶೋಧಕ್ಕೆ ಮುಂದಾಗಿದ್ದಾರೆ.

ಬೆಳ್ಳಾರೆ ಮುಖ್ಯರಸ್ತೆಯಲ್ಲೇ ಶಫೀಕ್ ಮನೆ ಇದ್ದು ಬಾಡಿಗೆ ಮನೆ ಪಡೆದು ತಂದೆ ತಾಯಿ ಜೊತೆ ಆರೋಪಿ ವಾಸವಿದ್ದ. ಇದೇ ಮನೆಯಲ್ಲಿ ಕುಳಿತು ಪ್ರವೀಣ್ ಹತ್ಯೆಗೆ ಬಲೆ ಹೆಣೆಯಲಾಗಿತ್ತು. ಈ ಮನೆ ಬೆಳ್ಳಾರೆ ಠಾಣೆಯಿಂದ 300 ಮೀಟರ್ ದೂರದಲ್ಲೇ ಇದೆ. ಹಾಗೂ ಪ್ರವೀಣ್ ಅಂಗಡಿಯಿಂದ 500 ಮೀಟರ್ ದೂರದಲ್ಲಿದೆ. ಇದೇ ಮನೆಯಲ್ಲಿ ಕುಳಿತು ಪ್ರವೀಣ್ ಚಲನವಲನ ಗಮನಿಸಿ ಕೊಲೆಗೆ ಹಂತಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಪ್ರವೀಣ್ ಹತ್ಯೆಗೂ ಮುನ್ನ ಸ್ಟ್ರೀಟ್ಲೈಟ್ ಆಫ್ ಮಾಡಲಾಗಿದೆ. ಕೊಲೆ ದಿನ ಆ ಏರಿಯಾದಲ್ಲಿ ಕರೆಂಟ್ ಇದ್ದರೂ ಪವರ್ ಕಟ್ ಆಗಿತ್ತು. ಪ್ರವೀಣ್ ಅಂಗಡಿಯ 500 ಮೀಟರ್ ಸುತ್ತಾ ಮುತ್ತಾ ಆರೋಪಿಗಳು ಪವರ್ ಕಟ್ ಮಾಡಿಸಿದ್ದರು. ನಂತರ ಪ್ರವೀಣ್ ಅಂಗಡಿ ಬಳಿ ತೆರಳಿ ಮರ್ಡರ್ ಮಾಡಿದ್ದಾರೆ. ಹಾಗಾಗಿ ಯಾವ ಸಿಸಿಟಿವಿ ಕ್ಯಾಮೆರಾದಲ್ಲೂ ಆರೋಪಿಗಳ ಚಹರೆ ಸಿಕ್ಕಿಲ್ಲ. ಕೊಲೆ ಬಳಿಕ ಕಾದು ಕುಳಿತಿದ್ದ ಶಫೀಕ್ ಜಾಕಿರ್, ಹಂತಕರನ್ನು ಕರೆದೊಯ್ದಿದ್ದಿದ್ದಾರೆ.

ಮನೆ ಮಾಲೀಕರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಒಂದು ವರ್ಷದಿಂದ ಇದೇ ಮನೆಯಲ್ಲಿ ವಾಸವಿರೋದಾಗಿ ಮಾಹಿತಿ ಸಿಕ್ಕಿದೆ. ಹತ್ಯೆಯಾದ ನಂತರ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಮರ್ಡರ್ ಸ್ಪಾಟ್ ಸುತ್ತಾ ಮುತ್ತಾ ಜಾಗ ನೋಡಿ ಶಾಕ್ ಆಗಿದ್ದರು. ಕಗ್ಗತ್ತಲಲ್ಲೇ ಗಾಯಾಳುವನ್ನು ಶಿಫ್ಟ್ ಮಾಡಿದ್ದರು.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ