AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ನೆಪದಲ್ಲಿ ಎನ್​ಐಎ ದುರ್ಬಳಕೆ, ಮುಸ್ಲಿಂ ಮುಖಂಡರೆ ಟಾರ್ಗೆಟ್: ಪಿಎಫ್​ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್

ಬೆಳಗಾವಿಯ ಅರ್ಬಾಜ್, ಶಮೀರ್ ಕೇಸ್ NIAಗೆ ವಹಿಸಿಲ್ಲ. ಮುಸ್ಲಿಂ ಯುವಕರ ಹತ್ಯೆಯಲ್ಲಿ ಆರ್​​ಎಸ್​ಎಸ್​ ಕೈವಾಡ ಇದೆ. ವಿಧಾನಸಭಾ ಚುನಾವಣೆ ಮುಂದಿಟ್ಟು ನಿನ್ನೆ 30ಕ್ಕೂ ಅಧಿಕ ಕಡೆ ಎನ್​​ಐಎ ಅಧಿಕಾರಿಗಳಿಂದ ದಾಳಿ‌ ಮಾಡಿದ್ದಾರೆ.

ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ನೆಪದಲ್ಲಿ ಎನ್​ಐಎ ದುರ್ಬಳಕೆ, ಮುಸ್ಲಿಂ ಮುಖಂಡರೆ ಟಾರ್ಗೆಟ್: ಪಿಎಫ್​ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್
ಮೃತ ಪ್ರವೀಣ್ ನೆಟ್ಟಾರು
TV9 Web
| Edited By: |

Updated on: Sep 07, 2022 | 1:10 PM

Share

ಮಂಗಳೂರು: ಪ್ರವೀಣ್ ಕೊಲೆ ಪ್ರಕರಣ ನೆಪದಲ್ಲಿ ಎನ್​ಐಎ ದುರ್ಬಳಕೆ ಮಾಡುತ್ತಿದೆ. PFI ನಾಯಕರು ಅನ್ನೋ ಕಾರಣಕ್ಕೆ ಟಾರ್ಗೆಟ್ ಮಾಡ್ತಿದ್ದಾರೆ. ಮುಸ್ಲಿಂ ಮುಖಂಡರನ್ನ ಟಾರ್ಗೆಟ್ ಮಾಡಲಾಗ್ತಿದೆ ಎಂದು ನಗರದಲ್ಲಿ ಪಿಎಫ್​ಐ ಮುಖಂಡರ ಸುದ್ದಿಗೋಷ್ಠಿ ಪಿಎಫ್​ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ಹೇಳಿಕೆ ನೀಡಿದರು. ಶಿವಮೊಗ್ಗದ ಹರ್ಷ, ಪ್ರವೀಣ್ ಕೇಸ್ NIAಗೆ ವಹಿಸಲಾಗಿದೆ. ಆದರೆ ಇದರಲ್ಲಿ ಸರ್ಕಾರ ದ್ವಿಮುಖ ನೀತಿ ಅನುಸರಿಸ್ತಿದೆ. ಬೆಳಗಾವಿಯ ಅರ್ಬಾಜ್, ಶಮೀರ್ ಕೇಸ್ NIAಗೆ ವಹಿಸಿಲ್ಲ. ಮುಸ್ಲಿಂ ಯುವಕರ ಹತ್ಯೆಯಲ್ಲಿ ಆರ್​​ಎಸ್​ಎಸ್​ ಕೈವಾಡ ಇದೆ. ವಿಧಾನಸಭಾ ಚುನಾವಣೆ ಮುಂದಿಟ್ಟು ನಿನ್ನೆ 30ಕ್ಕೂ ಅಧಿಕ ಕಡೆ ಎನ್​​ಐಎ ಅಧಿಕಾರಿಗಳಿಂದ ದಾಳಿ‌ ಮಾಡಿದ್ದಾರೆ. ಬಿಜೆಪಿ ಸರ್ಕಾರ ವೈಫಲ್ಯತೆ‌ ಮುಚ್ಚಿ ಹಾಕಲು ಎನ್ಐಎ ದಾಳಿ ಮಾಡಿದ್ದು, ಪಿಎಫ್​ಐ ವಿರುದ್ಧ NIA, ಇಡಿ ಛೂಬಿಟ್ಟು ಕಿರುಕುಳ ನೀಡ್ತಿದ್ದಾರೆ ಎಂದು ಆರೋಪಿಸಿದರು.

ಪ್ರವೀಣ್ ‌ನೆಟ್ಟಾರು ಪ್ರಕರಣ ಸ್ಥಳೀಯ ಮಟ್ಟದ ಪ್ರತೀಕಾರದ ಪ್ರಕರಣ. ಸ್ಥಳೀಯ ಪೊಲೀಸರೇ ಇದರ ಆರೋಪಿಗಳನ್ನ ಬಂಧಿಸಿದ್ದಾರೆ. ಈ ಘಟನೆಯನ್ನ ಭಯೋತ್ಪಾದನೆ ಘಟನೆ ಅಂತ ತಿರುಚಲು ಎನ್.ಎ.ಗೆ ಅಸೈನ್ ಮೆಂಟ್ ಕೊಡಲಾಗಿದೆ. ಎನ್.ಐ.ಎ ದಾಳಿ ವೇಳೆ ಭಯೋತ್ಪಾದಕನ ಹಿಡಿಯೋ ರೀತಿ ವಾತಾವರಣ ಸೃಷ್ಟಿಸಲಾಗಿದೆ. ಪ್ರವೀಣ್ ಕೇಸ್ ಅಂತಾರಾಜ್ಯ ನಂಟಿನ ಕೇಸ್ ಅಂತ ಗೃಹ ಸಚಿವರು ಹೇಳಿದ್ದರು. ಆದರೆ ಆರೋಪಿಗಳ ಬಂಧನ ಆದ ನಂತರ ಅದು ಸ್ಥಳೀಯರು ಅಂತ ಗೊತ್ತಾಗಿದೆ. ನಾವು ಇದನ್ನ ಕಾನೂನಾತ್ಮಕವಾಗಿ ಎದುರಿಸಲಿದ್ದೇವೆ. ಸರ್ಕಾರಕ್ಕೆ ಪ್ರವೀಣ್ ಕೇಸಲ್ಲಿ ಮಾತ್ರ ಯಾಕೆ ಆಸಕ್ತಿ? ಮಸೂದ್ ಮತ್ತು ಫಾಜಿಲ್ ಕೇಸ್‌ನಲ್ಲಿ ಯಾಕಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ: ಪುತ್ತೂರು, ಸುಳ್ಯದ ಹಲವೆಡೆ ಎನ್​ಐಎ ದಾಳಿ

ಪ್ರವೀಣ್, ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಹತ್ಯೆ‌ ನಡೆದಿದೆ ಅಂತ ಮಾಧ್ಯಮಗಳಲ್ಲಿ ಬಂದಿದೆ. ನಮ್ಮ ತಾಲೂಕು ಘಟಕದ ಕೆಲ ನಾಯಕರ ಮನೆಗಳಿಗೆ ದಾಳಿ ಮಾಡಿದ್ದಾರೆ. ಕೆಲ ಶಸ್ತ್ರಾಸ್ತ್ರಗಳನ್ನ ವಶಕ್ಕೆ ಪಡೆದಿದ್ದಾರೆ ಅಂತ ಎನ್.ಐ.ಎ ಹೇಳಿದೆ. ಆದರೆ ಅದನ್ನ ಬೆಂಗಳೂರಿನಿಂದ ತಂದ್ರಾ? ದೆಹಲಿಯಿಂದ ತಂದ್ರಾ ಅಂತ ಎನ್ ಐಎ ಹೇಳಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ಹಾಲ್ ಗಳಲ್ಲಿ ನಮ್ಮ ಸಭೆಗಳು ನಡೆಯುತ್ತೆ. ಅದೇ ರೀತಿ ಪೊಲೀಸರಿಗೆ ‌ಮಾಹಿತಿ ನೀಡಿ ಮಿತ್ತೂರಿನ ಕಮ್ಯುನಿಟಿ ಹಾಲ್​ನಲ್ಲೂ ಸಭೆ ಮಾಡಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ