AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಪತಿ ಹತ್ಯೆಯಲ್ಲಿ ಮುಸ್ತಫಾ ಪೈಚಾರ್ ಪ್ರಮುಖ ಆರೋಪಿ: ಪ್ರವೀಣ್ ನೆಟ್ಟಾರು ಪತ್ನಿ ನೂತನಾ

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಕೊಲೆ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿಯನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ನನ್ನ ಪತಿ ಹತ್ಯೆಯಲ್ಲಿ ಮುಸ್ತಫಾ ಪೈಚಾರ್ ಪ್ರಮುಖ ಆರೋಪಿ: ಪ್ರವೀಣ್ ನೆಟ್ಟಾರು ಪತ್ನಿ ನೂತನಾ
ಪ್ರವೀಣ ನೆಟ್ಟಾರು ಪತ್ನಿ ನೂತನಾ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ವಿವೇಕ ಬಿರಾದಾರ|

Updated on: May 10, 2024 | 4:45 PM

Share

ಮಂಗಳೂರು, ಮೇ 10: ನನ್ನ ಪತಿಯ ಹತ್ಯೆ ಪ್ರಕರಣ ಮುಸ್ತಫಾ ಪೈಚಾರ್​ನೇ (Mustafa Paychar) ಪ್ರಮುಖ ಆರೋಪಿಯಾಗಿದ್ದಾನೆ. ಅವನನ್ನು ಬಂಧಿಸಿದ್ದಕ್ಕೆ ನಮಗೆ ತುಂಬಾ ಖುಷಿಯಾಗಿದೆ. ಈ ಪ್ರಕರಣದ ಎಲ್ಲ ಆರೋಪಿಗಳಿಗೂ ಮರಣ ದಂಡನೆಯಾಗಬೇಕು. ಮುಂದೆ ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು ಎಂದು ಪ್ರವೀಣ ನೆಟ್ಟಾರು (Praveen Nettaru) ಪತ್ನಿ ನೂತನಾ ಹೇಳಿದರು. ‌

ಇಡೀ ದೇಶದಲ್ಲಿ ಇಂತಹ ಪ್ರಕರಣಗಳು ಮತ್ತೆ ನಡೆಯಬಾರದು. ಆರೋಪಿ ಮುಸ್ತಫಾ ಪೈಚಾರ್ ಬಂಧನ ಸುದ್ದಿ‌ ಕೇಳಿ ನಮ್ಮ ಕುಟುಂಬದವರಿಗೆ ತುಂಬಾ ಸಂತಸವಾಗಿದೆ. ನಮ್ಮ ಕುಟುಂಬದ ಪರವಾಗಿ ಎನ್​ಐಎ ಅಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ. ಬಂಧನ ಆಗಿರುವುದು ನಮಗೆಲ್ಲ ತುಂಬಾ ಖುಷಿಯಾಗಿದೆ. ಪ್ರಕರಣ ನಡೆದು ಎರಡು ವರ್ಷವಾದರೂ ಆರೋಪಿಗಳನ್ನ ಬಂಧಿಸಲು ಎನ್​ಐಎ ಅಧಿಕಾರಿಗಳು ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಎನ್​​ಐಎ ಸಂಸ್ಥೆಯ ಮೇಲೆ ನಂಬಿಕೆ ಇದೆ. ಎಲ್ಲ ಆರೋಪಿಗಳ ಬಂಧನವಾಗುತ್ತೆ. ಈ ಪ್ರಕರಣದ ಆರೋಪಿಗಳಿಗೆ ನೀಡುವ ಶಿಕ್ಷೆ ಒಂದು ಪಾಠವಾಗಬೇಕು. ಎಸ್​ಡಿಪಿಐ, ಪಿಎಫ್​ಐ ಕಾರ್ಯಕರ್ತರು ಮುಂದೆ ಯಾವತ್ತೂ ಇಂತಹ ಪ್ರಕರಣಕ್ಕೆ ಕೈ ಹಾಕಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಬಂಧನ

ಆರೋಪಿಯ ವಿಚಾರಣೆ

ಹಾಸನ ಸಕಲೇಶಪುರ ನಗರ ಠಾಣೆಯಲ್ಲಿ ಮುಖ್ಯ ಆರೋಪಿ ಮುಸ್ತಾಫಾ ಪೈಚಾರ್ ಹಾಗೂ ಇಲಿಯಾಸ್​ನನ್ನು ಎನ್​ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸಕಲೇಶಪುರ ಆನೇಮಹಲ್ ಸಿರಾಜ್ ಎಂಬುವರು ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದರು. ಇದೀಗ ಸಿರಾಜ್​ ಅವರನ್ನೂ ಎನ್​ಐಎ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಆನೆಮಹಲ್‌ನ ಸಿರಾಜ್ ಬಳಿ ಶುಂಠಿ ಬೆಳೆ ಬೆಳೆಯಲು ಮುಸ್ತಾಫಾ ಪೈಚಾರ್ ಹಾಗೂ ಇಲಿಯಾಸ್ ಜೊತೆಯಾಗಿದ್ದರು. ಸದ್ಯ ಇಬ್ಬರೂ ಆರೋಪಿಗಳನ್ನು ಎನ್​ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆ ತಂದಿದ್ದಾರೆ.

ಪ್ರವೀಣ ನೆಟ್ಟಾರು ಕೊಲೆ

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್​ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ