AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಕನಸಿನ ಮನೆ ಸಿದ್ದ: ನಾಳೆ ನೆರವೇರಲಿದೆ ನೂತನ ಮನೆಯ ಗೃಹ ಪ್ರವೇಶ

ಕಳೆದ ವರ್ಷ ಕೊಲೆಯಾದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ, ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕನಸಿನ ಮನೆ ಸಿದ್ಧವಾಗಿದ್ದು, ನಾಳೆ ನೂತನ ಮನೆಯ ಗೃಹ ಪ್ರವೇಶ ನೆರವೇರಲಿದೆ.

ಪ್ರವೀಣ್ ನೆಟ್ಟಾರು ಕನಸಿನ ಮನೆ ಸಿದ್ದ: ನಾಳೆ ನೆರವೇರಲಿದೆ ನೂತನ ಮನೆಯ ಗೃಹ ಪ್ರವೇಶ
ಪ್ರವೀಣ್ ನೆಟ್ಟಾರು ಹೊಸ ಮನೆ
ಗಂಗಾಧರ​ ಬ. ಸಾಬೋಜಿ
|

Updated on:Apr 26, 2023 | 5:53 PM

Share

ಮಂಗಳೂರು: ಕಳೆದ ವರ್ಷ ಕೊಲೆಯಾದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ, ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು (Praveen Nettaru) ಕನಸಿನ ಮನೆ ಸಿದ್ಧವಾಗಿದ್ದು, ನಾಳೆ ನೂತನ ಮನೆಯ ಗೃಹ ಪ್ರವೇಶ ನೆರವೇರಲಿದೆ. ಜಿಲ್ಲಾ ಬಿಜೆಪಿ ವತಿಯಿಂದ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಐದೇ ತಿಂಗಳಲ್ಲಿ ವಿಶಾಲವಾದ ಸುಂದರ ಮನೆ ನಿರ್ಮಾಣವಾಗಿದೆ. 70 ಲಕ್ಷ ವೆಚ್ಚದಲ್ಲಿ, 2,800 ಚದರಡಿ ವಿಸ್ತೀರ್ಣದಲ್ಲಿ ಮನೆ‌‌ ನಿರ್ಮಾಣ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರುವಿನಲ್ಲಿ 2022ರ ನವೆಂಬರ್ 2ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಗುದ್ದಲಿಪೂಜೆ ನೆರವೇರಿಸಿದ್ದರು. ಈ ಮೂಲಕ ಹತ್ಯೆಯಾದ ಕಾರ್ಯಕರ್ತನ ಕುಟುಂಬದ ಪರ ನಿಂತಿದ್ದೇವೆ ಎಂದು ಬಿಜೆಪಿ ಸಂದೇಶ ಸಾರಲಿದೆ.

ಪ್ರವೀಣ್ ಪತ್ನಿಗೆ ಸರ್ಕಾರಿ ಉದ್ಯೋಗ

ಪ್ರವೀಣ್ ಪತ್ನಿಗೆ ಸದ್ಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಸರ್ಕಾರಿ ಉದ್ಯೋಗ ನೀಡಲಾಗಿದೆ. ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿತ್ತು. ಪ್ರವೀಣ್ ಹತ್ಯೆ ಬಳಿಕ ತೀವ್ರ ಮುಜುಗರಕ್ಕೆ ಈಡಾಗಿದ್ದ ಬಿಜೆಪಿ‌ ನಾಯಕರು ಸದ್ಯ ಈಗ ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕನಸಿನ ಮನೆಗೆ ಮುಹೂರ್ತ ಫಿಕ್ಸ್; ಚುನಾವಣೆಗೆ ಹೊಸ ಅಸ್ತ್ರ ಪ್ರಯೋಗಕ್ಕೆ ಮುಂದಾದ ಬಿಜೆಪಿ

ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರ್​ ಹತ್ಯೆ

2022 ಜುಲೈ‌ 26 ರಂದು ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರ್​ ಹತ್ಯೆಗೀಡಾಗಿದ್ದ. ಘಟನೆ ಬಳಿಕ ಬಿಜೆಪಿ ಸರ್ಕಾರದ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಜನಪ್ರತಿನಿಧಿಗಳ ಕಾರ್ಯಕರ್ತರು ವಿರುದ್ಧ ಸಮರ ಸಾರಿದ್ದರು. ಕಾರ್ಯಕರ್ತರ ಆಕ್ರೋಶದಿಂದ ಬಿಜೆಪಿ ನಾಯಕರು ಮುಜುಗರಕ್ಕೆ ಒಳಗಾಗಿದ್ದರು.

ಇದನ್ನೂ ಓದಿ: ಪುತ್ತೂರು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ ವಿಚಾರಣಾಧೀನ ಕೈದಿ, ಪ್ರವೀಣ್ ನೆಟ್ಟಾರು ಕೊಲೆ ಆರೋಪಿ

ಪ್ರವೀಣ್ ನೆಟ್ಟಾರ್ ಕುಟುಂಬ, ಕಾರ್ಯಕರ್ತರಿಗೆ ಸರ್ಕಾರ, ಬಿಜೆಪಿ ನಾಯಕರು ಸಾಂತ್ವನ ಹೇಳಿದ್ದರು. ಆ ಸಂದರ್ಭ ಪ್ರವೀಣ್ ನೆಟ್ಟಾರ್ ಕನಸಿನ ಮನೆ ನಿರ್ಮಾಣ ಕುರಿತು ಬಿಜೆಪಿ ಭರವಸೆ ನೀಡಿತ್ತು. ಸದ್ಯ ಕೊಟ್ಟ ಭರವಸೆಯನ್ನು‌ ಬಿಜೆಪಿ ಈಡೇರಿಸಿದೆ. ಪ್ರವೀಣ್ ನೆಟ್ಟಾರ್ ಸಮಾಧಿ ಬಳಿಯೇ ನೂತನ ಮನೆ ನಿರ್ಮಾಣ ಮಾಡಿದ್ದು, ಪ್ರವೀಣ ಹೆಸರಿನಲ್ಲೆ‌ ನಿರ್ಮಾಣ ಮಾಡಲಾಗಿದೆ. ನಾಳೆ ಅಧಿಕೃತವಾಗಿ ಪ್ರವೀಣ್ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ ಮಾಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:53 pm, Wed, 26 April 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ