AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ತಂಗಡಿಯಲ್ಲಿ ನಡೆಯಿತು ಪ್ರೇತಾತ್ಮಗಳ ವಿವಾಹ: ಕರಾವಳಿಯಲ್ಲಿ ಪ್ರೇತಗಳ ಮದ್ವೆ ಮಾಡುವುದೇಕೆ?

ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯವಾಗಿ ಭೂಲೋಕದಲ್ಲಿ ನಡೆಯುವುದು ಎಂದು ಹಿರಿಯರು ಹೇಳ್ತಾರೆ. ಆದ್ರೆ ಕರಾವಳಿಯಲ್ಲಿ ಪ್ರೇತಾತ್ಮಗಳಿಗೆ ಭೂಲೋಕದಲ್ಲಿ ಮದುವೆ ನಿಶ್ಚಯವಾಗಿ ಇಲ್ಲೇ ಮದುವೆ ಸಹ ಆಗುತ್ತೆ. ತುಳುನಾಡಿನಲ್ಲಿ ಆಟಿ ಮಾಸದಲ್ಲಿ ನಡೆಯೋ ಈ ಪ್ರೇತಗಳ ಮದುವೆ ವಿಚಿತ್ರ ಅನಿಸಿದ್ರೂ, ಬಹಳಷ್ಟು ವರ್ಷದಿಂದ ಈ ಆಚರಣೆ ನಡೆದುಕೊಂಡು ಬಂದಿದೆ. ಈ ಕುರಿತು ಒಂದು ಸ್ಪೆಷಲ್ ಸ್ಟೋರಿ ಇಲ್ಲಿದೆ ನೋಡಿ.

ಬೆಳ್ತಂಗಡಿಯಲ್ಲಿ ನಡೆಯಿತು ಪ್ರೇತಾತ್ಮಗಳ ವಿವಾಹ: ಕರಾವಳಿಯಲ್ಲಿ ಪ್ರೇತಗಳ ಮದ್ವೆ ಮಾಡುವುದೇಕೆ?
ಪ್ರೇತಾತ್ಮಗಳ ಅದ್ಧೂರಿ ಮದುವೆ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Aug 12, 2024 | 6:28 PM

Share

ಮಂಗಳೂರು, (ಆಗಸ್ಟ್ 12): ಕರಾವಳಿಯ ತುಳುನಾಡು ಎಂದು ಕರೆಸಿಕೊಳ್ಳುವ ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆ ನಾಗಾರಾಧನೆ, ಭೂತರಾಧನೆಯ ನೆಲ. ಇಲ್ಲಿನ ಸಂಸ್ಕೃತಿ, ಆಚಾರ,ವಿಚಾರ,ಆಹಾರ ಪದ್ದತಿ ಎಲ್ಲವೂ ಭಿನ್ನ. ಅದರಂತೆ ಈ ತುಳುನಾಡಿನಲ್ಲಿ ಜೀವಂತ ಇರುವವರಿಗೆ ಮಾತ್ರವಲ್ಲದೇ ಪ್ರೇತಾತ್ಮಗಳಿಗೂ ಮದುವೆ ನಡೆಸುವ ಸಂಪ್ರದಾಯವೊಂದಿದೆ. ಮದುವೆಯಾಗದೆ ಅಕಾಲಿಕವಾಗಿ ಮೃತಪಟ್ಟವರ ಪ್ರೇತಾತ್ಮಕ್ಕೆ ನಡೆಯುವ ಮದುವೆ ಕಾರ್ಯಕ್ರಮ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆಯಿತು. ವೇಣೂರು ಬರ್ಕಜೆ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಧರ್ಮದರ್ಶಿ ರಮೇಶ್ ಅವರ ಪೌರೋಹಿತ್ಯದಲ್ಲಿ ನಡೆದ ಪ್ರೇತಗಳ ಮದುವೆಗೆ ಸುಮಾರು ನೂರಕ್ಕೂ ಹೆಚ್ಚು ಮಂದಿ ಸಾಕ್ಷಿಗಳಾಗಿದ್ದರು. 35 ವರ್ಷಗಳ ಹಿಂದೆ ಅಕಾಲಿಕವಾಗಿ ಮೃತಪಟ್ಟ ಎರಡು ಗಂಡು ಹಾಗೂ ಎರಡು ಹೆಣ್ಣು ಮಕ್ಕಳ ಪ್ರೇತಾತ್ಮಕ್ಕೆ ಮದುವೆ ನೆರವೇರಿಸಲಾಯಿತು.

ಸಾಮಾನ್ಯವಾಗಿ ಪ್ರೇತ ಮದುವೆ ತುಳುನಾಡಿನ ಆಟಿ ಅಂದ್ರೆ ಆಷಾಢ ಮಾಸದಲ್ಲಿ ನಡೆಯುತ್ತೆ. ಇಲ್ಲಿ ಬೆಳ್ತಂಗಡಿ ತಾಲೂಕಿನ ಶಾರದಾ ಎಂಬ ವಧು ಹಾಗೂ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಸದಾಶಿವ ಎಂಬ ವರನ ಕುಟುಂಬದ ನಡುವೆ ಮದುವೆ ನಡೆದ್ರೆ ಇನ್ನೊಂದು ಜಾರಗುಡ್ಡೆಯ ಯಾದವ ಹಾಗೂ ಬಂಟ್ವಾಳ ತಾಲೂಕಿನ ನಯನಾಡ್ ನ ಯಶೋಧ ಎಂಬ ವಧುವಿನ ಕುಟುಂಬದ ನಡುವೆ ನಡೆಯಿತು. ಬೆಳ್ಳಿಯ ತಗಡಿನ ಮೂಲಕ ವರ ಹಾಗೂ ವಧುವಿನ ಮೂರ್ತಿ ತಯಾರಿಸಿ ಆ ಮೂರ್ತಿಗೆ ಧಾರೆ ಎರೆಯಲಾಯಿತು.

ಇದನ್ನೂ ಓದಿ: ಕರಾವಳಿಯಲ್ಲಿ ನಡೆಯುತ್ತೆ ಪ್ರೇತಾತ್ಮಗಳ ವಿವಾಹ; ಏನಿದು ಅಂತೀರಾ? ಇಲ್ಲಿದೆ ನೋಡಿ

ಪ್ರೇತ ಮದುವೆಯೆಂದರೆ ಇದು ಕಾಟಾಚಾರದ ಮದುವೆಯಲ್ಲ. ಜೀವಂತ ಇರುವವರ ಮದುವೆ ಹೇಗೆ ನಡೆಯುತ್ತೋ ಅದೇ ರೀತಿ ಪ್ರೇತಗಳ ಮದುವೆಯು ನಡೆಯುತ್ತೆ. ಇಲ್ಲಿ ಹೆಣ್ಣು – ಗಂಡು ನೋಡುವ ಶಾಸ್ತ್ರದಿಂದ ಹಿಡಿದು, ನಿಶ್ಚಿತಾರ್ಥ, ಮದುವೆ ದಿನ ವರನ ಮನೆಗೆ ದಿಬ್ಬಣ ಬರುವುದು, ಹೆಣ್ಣಿಗೆ ಸೀರೆ, ರವಕೆ, ಕರಿಮಣಿ, ಕಾಲುಂಗುರ, ಬಳೆ, ಗಂಡಿಗೆ ಪಂಚೆ, ಶರ್ಟ್ ಸಿದ್ಧಪಡಿಸಿ ಶಾಸ್ತ್ರಬದ್ಧವಾಗಿಯೇ ಮದುವೆಯಾಗುತ್ತದೆ‌. ಧಾರೆಯ ಬಳಿಕ ಸೇರಿದವರಿಗೆ ಮದುವೆ ಊಟವನ್ನು ಬಡಿಸಲಾಗುತ್ತೆ‌.

Pretha marriage Held In belthangady: What is ghost marriage and why do families perform marriages of dead children in karavali

 ಏಕೆ ಪ್ರೇತ ಮದುವೆ ಮಾಡ್ತರೆ?

ಮದುವೆಯಾಗದೆ ಮೃತಪಟ್ಟರೆ ಅವರಿಗೆ ಸದ್ಗತಿಯಿಲ್ಲ ಎಂಬುದು ತುಳುವರ ಬಲವಾದ ನಂಬಿಕೆ. ಹೀಗಾಗಿ ಮದುವೆಯಾಗದೆ ಅಕಾಲಿಕವಾಗಿ ಸತ್ತವರಿಗೆ ಪ್ರಾಯ ಪ್ರಬುದ್ಧವಾಗುವ ಹೊತ್ತಿಗೆ ಮದುವೆ ಮಾಡುವ ಸಂಪ್ರದಾಯ ಈ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಒಟ್ಟಿನಲ್ಲಿ ಪ್ರೇತ ಮದುವೆ ಮಾಡಿದ ಬಳಿಕ ಕುಟಂಬದಲ್ಲಿ ನೆಮ್ಮದಿ ಕಂಡುಕೊಂಡವರು ಸಾಕಷ್ಟು ಜನ ನಮ್ಮ ಮುಂದೆ ಇರುವುದರಿಂದ ಇಂದಿಗೂ ಈ ನಂಬಿಕೆ ಜೀವಂತ ಉಳಿದಿದೆ ಎಂಬುದಂತು ಸತ್ಯ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ