AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲ K.S.N.ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಮೂವರು ಅರೆಸ್ಟ್, ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುತ್ತೇನೆಂದು ಉರ್ವ ಪೊಲೀಸ್ ಠಾಣೆಗೆ ಕರಿಸಿ ಠಾಣೆಯಲ್ಲಿ ಸಂತ್ರಸ್ತೆ ಜೊತೆ ಸಂಧಾನ ವೇಳೆ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಎಂಬ ಆರೋಪ ಪವಿತ್ರಾ ಆಚಾರ್ಯರ್ ವಿರುದ್ಧ ಕೇಳಿ ಬಂದಿದೆ.

ವಕೀಲ K.S.N.ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಮೂವರು ಅರೆಸ್ಟ್, ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Oct 22, 2021 | 2:09 PM

Share

ಮಂಗಳೂರು: ಇಂಟರ್ನ್‌ಶಿಪ್‌ ಮಾಡುತ್ತಿದ್ದ ವಿದ್ಯಾರ್ಥಿನಿಗೆ ವಕೀಲ K.S.N.ರಾಜೇಶ್ ಭಟ್ರಿಂದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಆರೋಪಿ ಪವಿತ್ರಾ ಆಚಾರ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುತ್ತೇನೆಂದು ಉರ್ವ ಪೊಲೀಸ್ ಠಾಣೆಗೆ ಕರಿಸಿ ಠಾಣೆಯಲ್ಲಿ ಸಂತ್ರಸ್ತೆ ಜೊತೆ ಸಂಧಾನ ವೇಳೆ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಎಂಬ ಆರೋಪ ಪವಿತ್ರಾ ಆಚಾರ್ಯರ್ ವಿರುದ್ಧ ಕೇಳಿ ಬಂದಿದೆ. ಹೀಗಾಗಿ ಅವರನ್ನು ಬಂಧಿಸಿದ್ದು ಪ್ರಕರಣ ಸಂಬಂಧ ಸಂತ್ರಸ್ತೆಯ ಬಾಯ್ ಫ್ರೆಂಡ್ ಧ್ರುವ ಮತ್ತು ಆತನ ತಾಯಿ ಮಹಾಲಕ್ಷ್ಮೀ ಕೂಡ ಅರೆಸ್ಟ್ ಆಗಿದ್ದಾರೆ.

ಇನ್ನು ಕರ್ತವ್ಯ ಲೋಪದಡಿ ಉರ್ವ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಲಾ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಮೋದ್ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಕಾನೂನು ಬಾಹಿರವಾಗಿ ಸಂತ್ರಸ್ತೆಯಿಂದ ಮುಚ್ಚಳಿಕೆ ಬರೆಸಿಕೊಂಡು ಹೆಬ್ಬೆಟ್ಟು ಸಹಿ ಹಾಕಿಸಿಕೊಳ್ಳಲಾಗಿದೆ ಹೀಗಾಗಿ ಕರ್ತವ್ಯ ಲೋಪವಾಗಿದೆ ಎಂದು PSI, ಹೆಡ್ ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ.

ವಕೀಲ ರಾಜೇಶ್ ಭಟ್ ವಿರುದ್ಧ ಆರೋಪ ಮಂಗಳೂರಿನ ಖ್ಯಾತ ವಕೀಲ K.S.N.ರಾಜೇಶ್ ಭಟ್ ವಿರುದ್ಧ ಇಂಟರ್ನ್‌ಶಿಪ್‌ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ FIR ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್ಎಲ್‌ಬಿ ವಿದ್ಯಾರ್ಥಿನಿ ದೂರು ಆಧರಿಸಿಅಕ್ಟೋಬರ್ 18 ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ.

ಮಂಗಳೂರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ರಾಜೇಶ್ ಭಟ್, ನಗರದ ಪ್ರಸಿದ್ಧ ಬ್ಯಾಂಕ್‌ಗಳು ಸೇರಿ ಹಲವು ಕಂಪನಿಗಳಿಗೆ ಲೀಗಲ್ ಅಡ್ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜೇಶ್ ಕಚೇರಿಗೆ ವಿದ್ಯಾರ್ಥಿನಿ ಇಂಟರ್ನ್‌ಶಿಪ್‌ಗೆ ಬರುತ್ತಿದ್ದರು. ಸಂತ್ರಸ್ತ ಯುವತಿ ರಾಜೇಶ್ ವಿರುದ್ಧ ಅಕ್ಟೋಬರ್ 18 ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ FIR ದಾಖಲಿಸಲಾಗಿದೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಎಫ್​ಐಆರ್ ದಾಖಲು

Published On - 1:59 pm, Fri, 22 October 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’