AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ತೂರು: ಬಿಜೆಪಿಯ ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ, ಆಸ್ಪತ್ರೆಗೆ ದಾಖಲು

ಮನೆಯ ತೋಟದಲ್ಲಿ ನಿಂತಿದ್ದ ವೇಳೆ ಅವರಿಗೆ ಕನ್ನಡಿ ಹಾವು ಕಚ್ಚಿದೆ. ಗಂಭೀರ ಸ್ವರೂಪದ ಗಾಯವಲ್ಲದ ಕಾರಣ ಸಂಜೀವ ಮಠಂದೂರು ಚೇತರಿಸಿಕೊಂಡಿದ್ದಾರೆ.

ಪುತ್ತೂರು: ಬಿಜೆಪಿಯ ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ, ಆಸ್ಪತ್ರೆಗೆ ದಾಖಲು
ಸಂಜೀವ ಮಠಂದೂರು
TV9 Web
| Updated By: Ganapathi Sharma|

Updated on: Nov 16, 2023 | 10:19 PM

Share

ಮಂಗಳೂರು, ನವೆಂಬರ್ 16: ಪುತ್ತೂರಿನ ಬಿಜೆಪಿಯ ಮಾಜಿ ಶಾಸಕ ಸಂಜೀವ ಮಠಂದೂರು (Sanjeeva Matandoor) ಅವರಿಗೆ ಹಾವು ಕಡಿತವಾಗಿದ್ದು ಪುತ್ತೂರಿನ (Puttur) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ತೋಟದಲ್ಲಿ ನಿಂತಿದ್ದ ವೇಳೆ ಅವರಿಗೆ ಕನ್ನಡಿ ಹಾವು ಕಚ್ಚಿದೆ. ಗಂಭೀರ ಸ್ವರೂಪದ ಗಾಯವಲ್ಲದ ಕಾರಣ ಸಂಜೀವ ಮಠಂದೂರು ಚೇತರಿಸಿಕೊಂಡಿದ್ದಾರೆ.

ಗಡಿಪಾರು ಅಸ್ತ್ರ: ರಾಜ್ಯ ಸರ್ಕಾರದ ವಿರುದ್ಧ ಸಂಸದ ನಳಿನ್ ವಾಗ್ದಾಳಿ

ಪುತ್ತೂರಿನ ಭಜರಂಗದಳ ಕಾರ್ಯಕರ್ತರ ವಿರುದ್ದ ಗಡಿಪಾರು ಅಸ್ತ್ರ ವಿಚಾರವಾಗಿ ಪುತ್ತೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ದ ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ‌ಮಾಡುತ್ತಿದೆ. ಸುಳ್ಳು ಪ್ರಕರಣ ದಾಖಲಿಸಿ ಅಪರಾಧಿ ಅಲ್ಲದಿದ್ದರೂ ಗಡೀಪಾರು ಮಾಡ್ತಿದಾರೆ. ಪುತ್ತೂರಿನಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಇಂಥ ದ್ವೇಷದ ರಾಜಕಾರಣ ಸರಿಯಲ್ಲ, ಇದನ್ನ ಖಂಡಿಸ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ

ಗಡಿಪಾರು ವಿಚಾರವಾಗಿ ಅಧಿಕಾರಿಗಳ ತರಾಟೆಗೆ ತೆಗೊಂಡಿದೇನೆ, ಒಂದು ಕೇಸ್ ಇದ್ದವನಿಗೂ ಗಡಿಪಾರು ನೊಟೀಸ್ ಆಗಿದೆ. ಯಾವುದೇ ಕಾರಣಕ್ಕೂ ಈ ರೀತಿ ಮಾಡಲು ನಾವು ಬಿಡಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪುತ್ತೂರಿನಲ್ಲೇ ಎರಡು ಹತ್ಯೆ ನಡೆದಿದೆ. ಉಡುಪಿಯಲ್ಲಿ ಒಂದೇ ಮನೆಯಲ್ಲಿ ನಾಲ್ಕು ಹತ್ಯೆ ಆಗಿದೆ. ಗುಪ್ತಚರ ಇಲಾಖೆ ಏನ್ ಮಾಡ್ತಾ ಇದೆ, ಇವರೆಲ್ಲರ ಕೈ ಕಟ್ಟಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗ ಗೂಂಡಾಗಳಿಗೆ ಲಾಭ ಆಗ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ