AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಮನೆಗೆ ನುಗ್ಗಿ ಯುವತಿಯನ್ನು ಹತ್ಯೆಗೈದ ಆರೋಪಿ 24 ಗಂಟೆಯೊಳಗೆ ಸಿಕ್ಕ, ಪೊಲೀಸರ ಮುಂದೆ ಅಸಲಿ ಕಾರಣ ಬಾಯ್ಬಿಟ್ಟ

ಮಂಗಳೂರಿನ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿ ಯುವತಿಯನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಾಡಹಗಲೇ ಮನೆಗೆ ನುಗ್ಗಿ ಯುವತಿಯನ್ನು ಹತ್ಯೆಗೈದ ಆರೋಪಿ 24 ಗಂಟೆಯೊಳಗೆ ಸಿಕ್ಕ, ಪೊಲೀಸರ ಮುಂದೆ ಅಸಲಿ ಕಾರಣ ಬಾಯ್ಬಿಟ್ಟ
ಕೊಲೆಯಾದ ಯುವತಿ ಜಯಶ್ರೀ
TV9 Web
| Edited By: |

Updated on:Jan 18, 2023 | 12:33 AM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿ ಯುವತಿಯನ್ನು ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜಯಶ್ರೀ ಕೊಲೆಯಾದ 24 ಗಂಟೆಯೊಳಗೆ ಸಂಪ್ಯಾ ಗ್ರಾಮಾಂತರ ಠಾಣೆ ಪೊಲೀಸರು ಕನಕಮಜಲು ಗ್ರಾಮದ ನಿವಾಸಿ ಉಮೇಶ್ ಎನ್ನುವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಯಶ್ರೀ ದೂರ ಮಾಡಿದ್ದಕ್ಕೆ ಅಸಮಾಧಾನಗೊಂಡು ಕೊಲೆ ಮಾಡಿರುವುದಾಗಿ ಆರೋಪಿ ಉಮೇಶ್ ಪೊಲೀಸರ ತನಿಖೆ ವೇಲೆ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ: ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಯುವತಿಗೆ ಚೂರಿ ಇರಿದು ಹತ್ಯೆ

​ಕೆಲವು ದಿನಗಳಿಂದ ಜಯಶ್ರೀಯನ್ನು ಪ್ರೀತಿಸುತ್ತಿದ್ದ ಉಮೇಶ್​, ಆಗಾಗ ಜಯಶ್ರೀ ಮನೆಗೆ ಬಂದು ಹೋಗುತ್ತಿದ್ದ. ಆದ್ರೆ, ಇಬ್ಬರ ನಡುವೆ ನಡುವೆ ಏನಾಗಿತ್ತೋ ಏನೋ 2022ರ ನವೆಂಬರ್​ನಿಂದ ಜಯಶ್ರೀ ಉಮೇಶ್​ನಿಂದ ದೂರವಾಗಿದ್ದಳು. ಇದರಿಂದ ಕೋಪಗೊಂಡಿದ್ದ ಉಮೇಶ್​, ಇಂದು(ಜನವರಿ 17) ಆಕೆಯ ಮನೆಗೆ ನುಗ್ಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.

ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಮನೆಯಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಚೂರಿಯಿಂದ ಇರಿದು ಜಯಶ್ರೀ (23) ಎಂಬ ಯುವತಿಯನ್ನು ಕೊಲೆ ಮಾಡಿದ್ದ. ವಿಷಯ ತಿಳಿದು ಸಂಪ್ಯಾ ಗ್ರಾಮಾಂತರ ಪೊಲೀಸರು, ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ದೌಡಾಯಿಸಿದ್ದರು.

ಇನ್ನು ಮೃತ ಯುವತಿ ತಾಯಿ ಉಮೇಶ್ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಳು. ಇದೀಗ ಪೊಲೀಸ್ ತನಿಖೆ ವೇಳೆ ಉಮೇಶನೇ ಜಯಶ್ರೀಯನ್ನ ಕೊಚ್ಚಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ.

Published On - 12:32 am, Wed, 18 January 23

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ