AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puttur News: ಪುತ್ತೂರಿನಲ್ಲಿ ನಕಲಿ ದಾಖಲೆ, ಸೀಲುಗಳನ್ನು ತಯಾರಿಸಿ ವಂಚನೆ ಎಸಗುತ್ತಿದ್ದ ವ್ಯಕ್ತಿಯ ಬಂಧನ

ಆರೋಪಿಯು ಸೀಲು, ಪಂಚಾಯತ್ ಪಿಡಿಓಗಳ ಸಹಿಯನ್ನು ನಕಲಿ ಮಾಡಿ ದಾಖಲೆ ಸಿದ್ಧಪಡಿಸುತ್ತಿದ್ದ. ನಿರಾಕ್ಷೇಪಣಾ ಪತ್ರ, ನಕಲಿ ತೆರಿಗೆ ರಶೀದಿ ಸೇರಿ 50ಕ್ಕೂ ಹೆಚ್ಚು ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Puttur News: ಪುತ್ತೂರಿನಲ್ಲಿ ನಕಲಿ ದಾಖಲೆ, ಸೀಲುಗಳನ್ನು ತಯಾರಿಸಿ ವಂಚನೆ ಎಸಗುತ್ತಿದ್ದ ವ್ಯಕ್ತಿಯ ಬಂಧನ
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 12, 2023 | 4:25 PM

Share

ಮಂಗಳೂರು: ನಗರಸಭೆ, ಗ್ರಾಮ ಪಂಚಾಯತ್ ನಕಲಿ ದಾಖಲೆ, ಸೀಲುಗಳನ್ನು ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur) ನಕಲಿ ದಾಖಲೆ ಸಿದ್ಧಪಡಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಬಕ ಗ್ರಾಮದ ಕೊಡಿಪ್ಪಾಡಿ ನಿವಾಸಿ ವಿಶ್ವನಾಥ (35) ಎಂದು ಗುರುತಿಸಲಾಗಿದೆ.

ವಿಶ್ವನಾಥ ಬಳಿ ಪುತ್ತೂರು ನಗರಸಭೆ, ಸುಳ್ಯ, ಬಂಟ್ವಾಳ, ಕಡಬ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ದಾಖಲೆಗಳು ಪತ್ತೆಯಾಗಿವೆ. ಸಾರ್ವಜನಿಕರು ನೀಡಿದ್ದ ದೂರಿನ ಅನ್ವಯ ಪುತ್ತೂರು ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಯು ಸೀಲು, ಪಂಚಾಯತ್ ಪಿಡಿಓಗಳ ಸಹಿಯನ್ನು ನಕಲಿ ಮಾಡಿ ದಾಖಲೆ ಸಿದ್ಧಪಡಿಸುತ್ತಿದ್ದ. ನಿರಾಕ್ಷೇಪಣಾ ಪತ್ರ, ನಕಲಿ ತೆರಿಗೆ ರಶೀದಿ ಸೇರಿ 50ಕ್ಕೂ ಹೆಚ್ಚು ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಪುತ್ತೂರು ತಾಲೂಕು ಪಂಚಾಯತ್ ಸಿಇಓ ದೂರಿನಂತೆ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: Mangaluru News: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್; ಮಂಗಳೂರಿನಲ್ಲಿ 21 ಪ್ರಕರಣ ದಾಖಲು

ಇಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಹೆಸರಿನ ಶಾಪ್​​ನಲ್ಲಿ ಕಂಪ್ಯೂಟರ್, ಪ್ರಿಂಟರ್ ಇಟ್ಟುಕೊಂಡು ನಕಲಿ ದಾಖಲೆ ಜಾಲ ಕೃತ್ಯ ಎಸಗುತ್ತಿತ್ತು. ಪ್ರಕರಣದಲ್ಲಿ ಪ್ರಭಾವಿಗಳು, ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!