AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puttur News: ಪುತ್ತೂರಿನಲ್ಲಿ ನಕಲಿ ದಾಖಲೆ, ಸೀಲುಗಳನ್ನು ತಯಾರಿಸಿ ವಂಚನೆ ಎಸಗುತ್ತಿದ್ದ ವ್ಯಕ್ತಿಯ ಬಂಧನ

ಆರೋಪಿಯು ಸೀಲು, ಪಂಚಾಯತ್ ಪಿಡಿಓಗಳ ಸಹಿಯನ್ನು ನಕಲಿ ಮಾಡಿ ದಾಖಲೆ ಸಿದ್ಧಪಡಿಸುತ್ತಿದ್ದ. ನಿರಾಕ್ಷೇಪಣಾ ಪತ್ರ, ನಕಲಿ ತೆರಿಗೆ ರಶೀದಿ ಸೇರಿ 50ಕ್ಕೂ ಹೆಚ್ಚು ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Puttur News: ಪುತ್ತೂರಿನಲ್ಲಿ ನಕಲಿ ದಾಖಲೆ, ಸೀಲುಗಳನ್ನು ತಯಾರಿಸಿ ವಂಚನೆ ಎಸಗುತ್ತಿದ್ದ ವ್ಯಕ್ತಿಯ ಬಂಧನ
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Ganapathi Sharma|

Updated on: Jul 12, 2023 | 4:25 PM

Share

ಮಂಗಳೂರು: ನಗರಸಭೆ, ಗ್ರಾಮ ಪಂಚಾಯತ್ ನಕಲಿ ದಾಖಲೆ, ಸೀಲುಗಳನ್ನು ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur) ನಕಲಿ ದಾಖಲೆ ಸಿದ್ಧಪಡಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಬಕ ಗ್ರಾಮದ ಕೊಡಿಪ್ಪಾಡಿ ನಿವಾಸಿ ವಿಶ್ವನಾಥ (35) ಎಂದು ಗುರುತಿಸಲಾಗಿದೆ.

ವಿಶ್ವನಾಥ ಬಳಿ ಪುತ್ತೂರು ನಗರಸಭೆ, ಸುಳ್ಯ, ಬಂಟ್ವಾಳ, ಕಡಬ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ದಾಖಲೆಗಳು ಪತ್ತೆಯಾಗಿವೆ. ಸಾರ್ವಜನಿಕರು ನೀಡಿದ್ದ ದೂರಿನ ಅನ್ವಯ ಪುತ್ತೂರು ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಯು ಸೀಲು, ಪಂಚಾಯತ್ ಪಿಡಿಓಗಳ ಸಹಿಯನ್ನು ನಕಲಿ ಮಾಡಿ ದಾಖಲೆ ಸಿದ್ಧಪಡಿಸುತ್ತಿದ್ದ. ನಿರಾಕ್ಷೇಪಣಾ ಪತ್ರ, ನಕಲಿ ತೆರಿಗೆ ರಶೀದಿ ಸೇರಿ 50ಕ್ಕೂ ಹೆಚ್ಚು ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಪುತ್ತೂರು ತಾಲೂಕು ಪಂಚಾಯತ್ ಸಿಇಓ ದೂರಿನಂತೆ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: Mangaluru News: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್; ಮಂಗಳೂರಿನಲ್ಲಿ 21 ಪ್ರಕರಣ ದಾಖಲು

ಇಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಹೆಸರಿನ ಶಾಪ್​​ನಲ್ಲಿ ಕಂಪ್ಯೂಟರ್, ಪ್ರಿಂಟರ್ ಇಟ್ಟುಕೊಂಡು ನಕಲಿ ದಾಖಲೆ ಜಾಲ ಕೃತ್ಯ ಎಸಗುತ್ತಿತ್ತು. ಪ್ರಕರಣದಲ್ಲಿ ಪ್ರಭಾವಿಗಳು, ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ