AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಕೆಎಸ್​ಆರ್​​ಟಿಸಿ ಬಸ್ ಒದಗಿಸಿ; ರಾಮಲಿಂಗಾ ರೆಡ್ಡಿಗೆ ಪುತ್ತೂರು ಶಾಸಕ ಅಶೋಕ್‌ ರೈ ಮನವಿ

ಕೋವಿಡ್ -19 ಲಾಕ್‌ಡೌನ್‌ಗಳ ನಂತರ ಬಸ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಹೀಗಾಗಿ ತೊಂದರೆ ಅನುಭವಿಸುತ್ತಿರುವ ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಶಾಸಕರು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಕೆಎಸ್​ಆರ್​​ಟಿಸಿ ಬಸ್ ಒದಗಿಸಿ; ರಾಮಲಿಂಗಾ ರೆಡ್ಡಿಗೆ ಪುತ್ತೂರು ಶಾಸಕ ಅಶೋಕ್‌ ರೈ ಮನವಿ
ಪುತ್ತೂರು ಶಾಸಕ ಅಶೋಕ್‌ ರೈ (ಚಿತ್ರ ಕೃಪೆ; ಶಾಸಕರ ಫೇಸ್​ಬುಕ್ ಖಾತೆ)Image Credit source: Facebook
ಗಣಪತಿ ಶರ್ಮಾ
|

Updated on: Jun 10, 2023 | 3:10 PM

Share

ಮಂಗಳೂರು: ಪುತ್ತೂರು ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ (KSRTC Bus) ಸಂಖ್ಯೆಯನ್ನು ಹೆಚ್ಚಿಸಬೇಕು ಮತ್ತು ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಸಾಕಷ್ಟು ಸಿಬ್ಬಂದಿಯನ್ನು ನೇಮಿಸಬೇಕು ಎಂದು ಕಾಂಗ್ರೆಸ್‌ನ ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ (Ashok Kumar Rai) ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಪುತ್ತೂರು ಡಿಪೋದಲ್ಲಿ ಖಾಲಿ ಇರುವ ಚಾಲಕರು ಹಾಗೂ ಇತರೆ ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿರುವುದಾಗಿ ಶಾಸಕರು ತಿಳಿಸಿದ್ದಾರೆ.

ಈ ಹಿಂದೆ ಕೆಎಸ್‌ಆರ್‌ಟಿಸಿಯ ಪುತ್ತೂರು ಘಟಕದಲ್ಲಿ ಬಸ್‌ಗಳ ಕೊರತೆ ಇರಲಿಲ್ಲ. ಇದರಿಂದ ಹಳ್ಳಿಗಳ ಜನರು, ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಕೂಲಿ ಕಾರ್ಮಿಕರ ಸಂಚಾರಕ್ಕೆ ತೊಂದರೆಯಾಗಲಿಲ್ಲ. ಆದಾಗ್ಯೂ, ಕೋವಿಡ್ -19 ಲಾಕ್‌ಡೌನ್‌ಗಳ ನಂತರ ಬಸ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಹೀಗಾಗಿ ತೊಂದರೆ ಅನುಭವಿಸುತ್ತಿರುವ ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಶಾಸಕರು ತಿಳಿಸಿದ್ದಾರೆ.

ಪುತ್ತೂರಿನಿಂದ ಹಲವು ಸಿಬ್ಬಂದಿ ವರ್ಗಾವಣೆಗೊಂಡಿದ್ದು, ಡಿಪೋದಲ್ಲಿ ಆಡಳಿತಾತ್ಮಕ ಸಮಸ್ಯೆ ತಲೆದೋರಿದೆ ಎಂಬುದನ್ನು ಸಚಿವರ ಗಮನಕ್ಕೆ ತರಲಾಗಿದೆ ಎಂದು ಅಶೋಕ್ ರೈ ತಿಳಿಸಿದ್ದಾರೆ.

ಸಚಿವರಿಗೆ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿಯನ್ನು ಸಲ್ಲಿಸಿದ್ದೇನೆ ಎಂದು ಹೇಳಿದ ಅವರು, ಸಚಿವರು ಬೇಡಿಕೆಗಳನ್ನು ಪರಿಗಣಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಉಪ್ಪಿನಂಗಡಿಯಲ್ಲಿ ದೇವಸ್ಥಾನಕ್ಕೆ ಭೂಮಿ ಖರೀದಿಸಲು ಮಂಜೂರಾತಿ ನೀಡುವಂತೆ ಕೋರಿ ಮುಜರಾಯಿ ಇಲಾಖೆ ಸಚಿವರೂ ಆಗಿರುವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಶಾಸಕರು ಹೇಳಿದ್ದಾರೆ.

ಇದನ್ನೂ ಓದಿ: KSRTC: ರವಿವಾರ ಉಚಿತ ಪ್ರಯಾಣದ ಗ್ಯಾರಂಟಿಗೆ ಚಾಲನೆ ನೀಡುವ ಸಿದ್ದರಾಮಯ್ಯ ಕೆಎಸ್​ಆರ್​ಟಿಸಿ ಸಿಬ್ಬಂದಿಯ ಯೂನಿಫಾರ್ಮ್ ಕಡೆ ಗಮನ ಹರಿಸುವರೇ?

ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿಸಲು ಮುಜರಾಯಿ ಇಲಾಖೆಯಿಂದ ಅನುಮತಿ ಕೋರಿದ್ದೇನೆ. ಇದು ಪ್ರಸಿದ್ಧ ದೇವಸ್ಥಾನವಾಗಿದ್ದು, ಜಿಲ್ಲೆ ಮತ್ತು ಹೊರರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದರೆ ಸಾಕಷ್ಟು ಮೂಲಸೌಕರ್ಯ ವ್ಯವಸ್ಥೆ ಒದಗಿಸಬೇಕಿದೆ. ಅತಿಥಿ ಗೃಹ ಮತ್ತು ಪಾರ್ಕಿಂಗ್ ಸೌಲಭ್ಯದ ಕೊರತೆ ಇದೆ. ಹೀಗಾಗಿ ಭಕ್ತರು ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ದೇವಸ್ಥಾನದ ಪಕ್ಕದಲ್ಲೇ 32 ಸೆಂಟ್ಸ್ ಜಾಗ ಗುರುತಿಸಿದ್ದಾರೆ. ಇಲಾಖೆ ಅನುಮತಿ ನೀಡಿದರೆ ಭೂಮಿ ಖರೀದಿಸಬಹುದು ಎಂದು ಶಾಸಕರು ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!