AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಸ್ಪರ್ಧೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಚಕ್ರವರ್ತಿ ಸೂಲಿಬೆಲೆ: ಹೆಚ್ಚಾಯ್ತು ಅನುಮಾನ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಪಡೆದು ಸ್ಪರ್ಧೆ ಮಾಡುವ ವಿಚಾರವಾಗಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಇಷ್ಟು ವರ್ಷ ಕಾಯ್ದುಕೊಂಡು ಬಂದಿರುವ ನಿಲುವಿನಲ್ಲಿ ಸಣ್ಣಮಟ್ಟಿನ ಬದಲಾವಣೆ ಮಾಡಲು ಸಿದ್ಧ ಎಂದು ಅವರು ಹೇಳಿದ್ದಾರೆ.

ಚುನಾವಣೆ ಸ್ಪರ್ಧೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಚಕ್ರವರ್ತಿ ಸೂಲಿಬೆಲೆ: ಹೆಚ್ಚಾಯ್ತು ಅನುಮಾನ
ಪುತ್ತೂರಿನಲ್ಲಿ ಚಕ್ರವರ್ತಿ ಸೂಲಿಬೆಲೆ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Mar 15, 2024 | 8:11 AM

Share

ಮಂಗಳೂರು, ಮಾರ್ಚ್​ 15: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಅವರಿಗೆ ಬಿಜೆಪಿಯಿಂದ (BJP) ಲೋಕಸಭೆ ಚುನಾವಣೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿಗಳಾಗಿದ್ದವು. ಆದರೆ, ಅಧಿಕೃತವಾಗಿ ಯಾರೂ ಆ ಕುರಿತು ದೃಢಪಡಿಸಿರಲಿಲ್ಲ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur) ಮಾತನಾಡಿದ ಅವರು, ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ. ಹಾಗೆಂದು ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ದೊರೆಯುವ ಸಾಧ್ಯತೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ. ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಸದ್ಯದ ಮಟ್ಟಿಗಂತೂ ವದಂತಿಯಷ್ಟೆ ಎಂದು ಹೇಳಿದ್ದಾರೆ.

2014, 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024ರಲ್ಲೂ ಅಂಥದ್ದೊಂದು ವದಂತಿ ಹರಡಿದೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ, ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನು ಸ್ವಲ್ಪ ಸಡಿಲ ಮಾಡುತ್ತೇನೆ. ಹಾಗೆ ಆಗಬೇಕು ಎಂದು ಏನಾದರೂ ಭಗವಂತನ ಇಚ್ಛೆ ಇದ್ದರೆ ಅದು ಆಗಿಯೇ ಆಗುತ್ತದೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ. ನಾನೂ ಸಂಪರ್ಕ ಮಾಡಿಲ್ಲ ಎಂದು ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ 2024: ಉತ್ತರ ಕನ್ನಡದಲ್ಲಿ ತೇಲಿ ಬಂತು ಮತ್ತೊಂದು ಹೆಸರು, ಚಕ್ರವರ್ತಿ ಸೂಲಿಬೆಲೆಗೆ ಟಿಕೆಟ್​ ಸಾಧ್ಯತೆ

ಮೈಸೂರಿನಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲಿದೆ ಎಂಬ ವಿಚಾರ ಸುದ್ದಿಯಾಗಿದ್ದಾಗಲೇ ಚಕ್ರವರ್ತಿಸೂಲಿಬೆಲೆ ಹೆಸರು ಕೂಡ ಆ ಕ್ಷೇತ್ರಕ್ಕೆ ಕೇಳಿಬಂದಿತ್ತು. ಸೂಲಿಬೆಲೆಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಗಳಿವೆ ಎಂದು ಕೆಲವು ಮಾಧ್ಯಮಗಳು ಅಂದಾಜಿಸಿದ್ದವು. ಆದರೆ, ನಂತರ ಯದುವೀರ್ ಒಡೆಯರ್​ಗೆ ಟಿಕೆಟ್ ಘೋಷಣೆಯಾಯಿತು.

ಆ ನಂತರದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ ಇದೆ. ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ದೊರೆಯುವುದು ಅನುಮಾನ ಎಂಬ ವದಂತಿ ಹಬ್ಬಿತ್ತು. ಸದ್ಯದ ಮಟ್ಟಿಗೆ ಇದು ವದಮತಿಯಷ್ಟೇ ಎಂದು ಚಕ್ರವರ್ತಿ ಸೂಲಿಬೆಲೆ ಇದೀಗ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು