AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ತೂರು: ತಂಗಿ ಲಿವರ್‌ ದಾನ ಮಾಡಿದರೂ ಉಳಿಯಲಿಲ್ಲ ಅಕ್ಕ; ಹೃದಯಾಘಾತದಿಂದ ಸಾವು

ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನನ್ನು ಉಳಿಸಿಕೊಳ್ಳಲು ತಂಗಿ ಲಿವರ್ ದಾನ ಮಾಡಿದ್ದು ದುರದೃಷ್ಟವಶಾತ್ ಅಕ್ಕನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಕ್ಕನನ್ನು ಉಳಿಸಿಕೊಳ್ಳುವ ತಂಗಿಯ ಪ್ರಯತ್ನ ವಿಫಲವಾಗಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ತಂಗಿಯ ಚಿಕಿತ್ಸೆ ಮುಂದುವರೆದಿದೆ.

ಪುತ್ತೂರು: ತಂಗಿ ಲಿವರ್‌ ದಾನ ಮಾಡಿದರೂ ಉಳಿಯಲಿಲ್ಲ ಅಕ್ಕ; ಹೃದಯಾಘಾತದಿಂದ ಸಾವು
ಸಾವು
ಆಯೇಷಾ ಬಾನು
|

Updated on: Jan 25, 2024 | 12:58 PM

Share

ಪುತ್ತೂರು, ಜ.25: ಲಿವರ್ ವೈಫಲ್ಯದಿಂದ (Liver Damage) ಬಳಲುತ್ತಿದ್ದ ಅಕ್ಕನ ಪ್ರಾಣ ಕಾಪಾಡಲು ತಂಗಿ ತನ್ನ ಲಿವರ್ ದಾನ ಮಾಡಿದ್ದು ದುರದೃಷ್ಟವಶಾತ್ ಅಕ್ಕ ಹೃದಯಾಘಾತದಿಂದ (Heart Attack) ಪ್ರಾಣಬಿಟ್ಟಿದ್ದಾರೆ. ಅಕ್ಕನನ್ನು ಕಾಪಾಡಬೇಕೆನ್ನುವ ತಂಗಿಯ ಸಂಪೂರ್ಣ ಪ್ರಯತ್ನ ವಿಫಲವಾದ ಮನಕಲಕುವ ಘಟನೆ ನೆಹರು ನಗರದಲ್ಲಿ ನಡೆದಿದೆ. ಐಶ್ವರ್ಯ(29) ಮೃತ (Death) ಯುವತಿ.

ನೆಹರು ನಗರದ ನಿವಾಸಿ ದಿವಂಗತ ಆನಂದ ನಾಯ್ಕ ಅವರ ಹಿರಿಯ ಪುತ್ರಿ ಐಶ್ವರ್ಯ ಅವರು ಜಾಂಡೀಸ್‌ನಿಂದ ಬಳಲುತ್ತಿದ್ದರು. ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಐಶ್ವರ್ಯಾಗೆ ಲಿವರ್ ಡ್ಯಾಮೇಜ್ ಆಗಿರುವುದು ತಿಳಿದುಬಂದಿದೆ. ಹೀಗಾಗಿ ಯಕೃತ್ತಿನ ಕಸಿ ಅಗತ್ಯ ಎಂದು ವೈದ್ಯರು ನಿರ್ಧರಿಸಿದರು.

ಐಶ್ವರ್ಯಾ ಅವರ ತಾಯಿ ಲಿವರ್ ದಾನ ಮಾಡಲು ಸಿದ್ಧರಿದ್ದರು, ಆದರೆ ಐಶ್ವರ್ಯಾ ಅವರ ತಂಗಿ ಅನುಷಾ ತನ್ನ ಸಹೋದರಿಯ ಜೀವ ಉಳಿಸಲು ತನ್ನ ಸ್ವಂತ ಲಿವರ್ ದಾನ ಮಾಡುವ ಧೈರ್ಯದ ನಿರ್ಧಾರವನ್ನು ತೆಗೆದುಕೊಂಡರು. ಕಸಿ ಪ್ರಕ್ರಿಯೆಗಾಗಿ ಇಬ್ಬರೂ ಸಹೋದರಿಯರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಂತವೆಂದರೆ, ಯಕೃತ್ತಿನ ಕಸಿ ಸಮಯದಲ್ಲಿ ಐಶ್ವರ್ಯಾ ಹೃದಯಾಘಾತಕ್ಕೆ ಒಳಗಾಗಿ ಪ್ರಾಣಬಿಟ್ಟಿದ್ದಾರೆ.

ಲಿವರ್ ದಾನ ಪ್ರಕ್ರಿಯೆಗೆ ಒಳಗಾದ ಅನುಷಾ ಪ್ರಸ್ತುತ ಬೆಂಗಳೂರಿನ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ ಐಶ್ವರ್ಯಾ ಅವರ ಚಿಕಿತ್ಸೆಗೆ 40 ಲಕ್ಷ ರೂಪಾಯಿ ಖರ್ಚಾಗಿತ್ತು. ವೈದ್ಯಕೀಯ ವೆಚ್ಚವನ್ನು ಭರಿಸಲು ಸಹಾಯ ಮಾಡುವಂತೆ ಕುಟುಂಬಸ್ಥರು ಸಾಮಾಜಿಕ ಮಾಧ್ಯಮದ ಮೂಲಕ ಸಹಾಯವನ್ನು ಕೋರಿದ್ದರು. ಆದರೆ ತಂಗಿ ತಾಯಿಯನ್ನು ಬಿಟ್ಟು ಐಶ್ವರ್ಯಾ ಇಹಲೋಕ ತ್ಯಜಿಸಿದ್ದಾರೆ. ಅಕ್ಕನನ್ನು ಉಳಿಸುವ ತಂಗಿಯ ಯತ್ನ ವಿಫಲವಾಗಿದೆ.

ಇದನ್ನೂ ಓದಿ: ಹನಿಮೂನ್​ಗೆ ಬೀಚ್‌ ಸ್ವಚ್ಛ ಮಾಡಿದ್ದ ಬೈಂದೂರಿನ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ

ಖೋಟಾ ನೋಟು ತಯಾರು ಮಾಡ್ತಿದ್ದವರ ಬಂಧನ

ಖೋಟಾ ನೋಟು ತಯಾರಿಸಿ ಚಲಾವಣೆ ಮಾಡ್ತಿದ್ದ 6 ಜನರನ್ನ ಬಂಧಿಸಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸರು, DCRB ಪೊಲೀಸರ ಕಾರ್ಯಾಚಣೆ ನಡೆಸಿದ್ದು, ಮೂಲದ ಕುಬೇರಪ್ಪ ತಳವಾರ್, ಹರೀಶ್ ಗೌಡ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಇಂಜಿನಿಯರ್ ಜೆ.ರುದ್ರೇಶ್, ಮೈಸೂರು ಮೂಲದ ಮನೋಜ್ ಗೌಡ, ಮಂಡ್ಯ ಮೂಲದ ಸಂದೀಪ್, ಚಿತ್ರದುರ್ಗ ಮೂಲದ ಕೃಷ್ಣ ನಾಯ್ಕನನ್ನು ಬಂಧಿಸಿದ್ದಾರೆ. ಒಟ್ಟು 7.70 ಲಕ್ಷ ಮೌಲ್ಯದ 500, 200 ಮುಖಬೆಲೆಯ ಖೋಟಾ ನೋಟು ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು