AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶೋಗಾಥೆ – ಈ ಯುವ ಮೆಕ್ಯಾನಿಕಲ್ ಇಂಜಿನಿಯರ್ ಅಡಿಕೆ ಎಲೆಗಳಿಂದ ಕೇವಲ ತಟ್ಟೆ, ಪ್ಲೇಟಷ್ಟೇ ಅಲ್ಲ; ಇನ್ನೂ ಏನೇನು ತಯಾರಿಸುತ್ತಾನೆ ನೋಡಿ!

ಸ್ವತಃ ಮೆಕ್ಯಾನಿಕಲ್ ಎಂಜಿನಿಯರ್ ಆಗಿದ್ದುಕೊಂಡು ಶ್ರೀ ಕೃಷ್ಣ ವಿವಿಧ ರೀತಿಯ ಉತ್ಪನ್ನಗಳಿಗೆ ಅಗತ್ಯವಿರುವ ಯಂತ್ರಗಳನ್ನು ತಾನೇ ತಯಾರಿಸಿಕೊಂಡಿರುವುದು ಮತ್ತೊಂದು ವಿಶೇಷ. ಮಡವು ಎಂಬ ಹಳ್ಳಿಯಲ್ಲಿ ತಯಾರಾಗುವ ವಿವಿಧ ರೀತಿಯ ಅಡಿಕೆ ಎಲೆಯ ಉತ್ಪನ್ನಗಳನ್ನು ಮಹಾರಾಷ್ಟ್ರ, ತಮಿಳುನಾಡು, ಕೇರಳ ಮತ್ತು ಗುಜರಾತ್‌ನಂತಹ ಹೊರ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತದೆ.

ಯಶೋಗಾಥೆ - ಈ ಯುವ ಮೆಕ್ಯಾನಿಕಲ್ ಇಂಜಿನಿಯರ್ ಅಡಿಕೆ ಎಲೆಗಳಿಂದ ಕೇವಲ ತಟ್ಟೆ, ಪ್ಲೇಟಷ್ಟೇ ಅಲ್ಲ; ಇನ್ನೂ ಏನೇನು ತಯಾರಿಸುತ್ತಾನೆ ನೋಡಿ!
ಯಶೋಗಾಥೆ - ಅಡಿಕೆ ಎಲೆ ತಟ್ಟೆ-ಪ್ಲೇಟು ತಯಾರಿಸುವ ಉದ್ಯಮದಲ್ಲಿ ಯುವ ಮೆಕ್ಯಾನಿಕಲ್ ಇಂಜಿನಿಯರ್ ಮಾದರಿ ಸಾಧನೆ
ಸಾಧು ಶ್ರೀನಾಥ್​
|

Updated on:Oct 10, 2023 | 11:09 AM

Share

ಪುತ್ತೂರು, ಅಕ್ಟೋಬರ್ 10: ನಿರುಪಯುಕ್ತ ಒಣಗಿದ ಅಡಿಕೆ ಎಲೆಗಳಿಂದ ತಟ್ಟೆ-ಪ್ಲೇಟು ತಯಾರಿಕೆ ಉದ್ಯಮದಲ್ಲಿ (arecanut leaf industry) ಯುವ ಮೆಕ್ಯಾನಿಕಲ್ ಇಂಜಿನಿಯರ್ ಒಬ್ಬರು (Mechanical engineer) ಈಟಿಂಗ್ ಪ್ಲೇಟ್, ಸಾಬೂನು ಬಾಕ್ಸ್, ಐಸ್ ಕ್ರೀಂ ಕಪ್ ಮತ್ತು ಚಮಚಗಳಂತಹ ನಾನಾ ವಸ್ತುಗಳನ್ನು ತಯಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡದ ಪುತ್ತೂರು (Puttur) ತಾಲೂಕಿನ ಮಾಡಾವು ನಿವಾಸಿ ಶ್ರೀಕೃಷ್ಣ ಈ ಉದ್ಯಮದಲ್ಲಿ ಸಾಧನೆ ಮಾಡಿದ ಯುವಕ. ಆತನ ಕೃಷಿ ಭೂಮಿಯಲ್ಲಿ ನಿರುಪಯುಕ್ತವಾಗಿ ಬಿದ್ದ ಅಡಿಕೆ ಎಲೆಗಳ ಜೊತೆಗೆ ನೆರೆಹೊರೆಯ ಅಡಿಕೆ ತೋಟಗಳಲ್ಲಿಯೂ ಬಿದ್ದಿರುವ ಎಲೆಗಳನ್ನು ಕೃಷ್ಣ ತನ್ನ ಉದ್ಯಮಕ್ಕೆ ಬಳಸುವ ಕಚ್ಚಾ ವಸ್ತುಗಳನ್ನಾಗಿ ಬಳಸುತ್ತಿದ್ದಾರೆ.

ಅನೇಕರು ಅಡಿಕೆ ಎಲೆಗಳಿಂದ ತಟ್ಟೆಗಳನ್ನು ಮಾತ್ರವೇ ತಯಾರಿಸಿ, ಮಾರಾಟ ಮಾಡುವುದನ್ನೇ ಕಾಯಕವಾಗಿಸಿಕೊಂಡಿದ್ದಾರೆ. ಆದರೆ ಕೃಷ್ಣ ಇಷ್ಟಕ್ಕೇ ಸೀಮಿತವಾಗದೆ ಒಂದೇ ಕಚ್ಚಾ ವಸ್ತುವಿನಿಂದ 60 ವಿವಿಧ ಉತ್ಪನ್ನಗಳನ್ನು ಉತ್ಪಾದಿಸುತ್ತಾನೆ (success story) .

ಸ್ವತಃ ಮೆಕ್ಯಾನಿಕಲ್ ಎಂಜಿನಿಯರ್ ಆಗಿದ್ದುಕೊಂಡು ಶ್ರೀ ಕೃಷ್ಣ ವಿವಿಧ ರೀತಿಯ ಉತ್ಪನ್ನಗಳಿಗೆ ಅಗತ್ಯವಿರುವ ಯಂತ್ರಗಳನ್ನು ಸ್ವತಃ ತಾನೇ ತಯಾರಿಸಿಕೊಂಡಿರುವುದು ಮತ್ತೊಂದು ವಿಶೇಷತೆ. ತಾಲ್ಲೂಕಿನ ಮಡವು ಎಂಬ ಹಳ್ಳಿಯಲ್ಲಿ ತಯಾರಾಗುವ ವಿವಿಧ ರೀತಿಯ ಅಡಿಕೆ ಎಲೆಯ ಉತ್ಪನ್ನಗಳನ್ನು ಮಹಾರಾಷ್ಟ್ರ, ತಮಿಳುನಾಡು, ಕೇರಳ ಮತ್ತು ಗುಜರಾತ್‌ನಂತಹ ಹೊರ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತದೆ. ಅವುಗಳನ್ನು ಅಮೆರಿಕ ಮತ್ತು ಆಸ್ಟ್ರೇಲಿಯಾದಂತಹ ದೇಶಗಳಿಗೂ ರಫ್ತು ಮಾಡಲಾಗುತ್ತದೆ.

ಇದನ್ನೂ ಓದಿ:ಬಿಕಾಂ ಪದವೀಧರನ ಕೃಷಿ ಪಯಣ; 20 ಎಕರೆ ಜಮೀನಿನಲ್ಲಿ ಸಮೃದ್ಧ ಬೆಳೆ, ಸ್ವಾವಲಂಬಿ ಜೀವನದ ಯಶೋಗಾಥೆ ಇಲ್ಲಿದೆ

ಈ ಉದ್ಯಮವು ಸ್ಥಳೀಯ ಮಹಿಳೆಯರಿಗೂ ಉದ್ಯೋಗ ಒದಗಿಸಿದೆ ಎಂಬುದು ಮತ್ತೊಂದು ಸಮಾಧಾನಕರ ಸಂಗತಿ. ಶ್ರೀಕೃಷ್ಣ ತೋರಿದ ಧೈರ್ಯವು ಅವರನ್ನು ಯಶಸ್ವಿ ಉದ್ಯಮಿ ಮತ್ತು ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವವರನ್ನಾಗಿ ಮಾಡಿದೆ ಎಂದು Daijiworld Media ವರದಿ ಮಾಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Tue, 10 October 23

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ