Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶೋಗಾಥೆ – ಈ ಯುವ ಮೆಕ್ಯಾನಿಕಲ್ ಇಂಜಿನಿಯರ್ ಅಡಿಕೆ ಎಲೆಗಳಿಂದ ಕೇವಲ ತಟ್ಟೆ, ಪ್ಲೇಟಷ್ಟೇ ಅಲ್ಲ; ಇನ್ನೂ ಏನೇನು ತಯಾರಿಸುತ್ತಾನೆ ನೋಡಿ!

ಸ್ವತಃ ಮೆಕ್ಯಾನಿಕಲ್ ಎಂಜಿನಿಯರ್ ಆಗಿದ್ದುಕೊಂಡು ಶ್ರೀ ಕೃಷ್ಣ ವಿವಿಧ ರೀತಿಯ ಉತ್ಪನ್ನಗಳಿಗೆ ಅಗತ್ಯವಿರುವ ಯಂತ್ರಗಳನ್ನು ತಾನೇ ತಯಾರಿಸಿಕೊಂಡಿರುವುದು ಮತ್ತೊಂದು ವಿಶೇಷ. ಮಡವು ಎಂಬ ಹಳ್ಳಿಯಲ್ಲಿ ತಯಾರಾಗುವ ವಿವಿಧ ರೀತಿಯ ಅಡಿಕೆ ಎಲೆಯ ಉತ್ಪನ್ನಗಳನ್ನು ಮಹಾರಾಷ್ಟ್ರ, ತಮಿಳುನಾಡು, ಕೇರಳ ಮತ್ತು ಗುಜರಾತ್‌ನಂತಹ ಹೊರ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತದೆ.

ಯಶೋಗಾಥೆ - ಈ ಯುವ ಮೆಕ್ಯಾನಿಕಲ್ ಇಂಜಿನಿಯರ್ ಅಡಿಕೆ ಎಲೆಗಳಿಂದ ಕೇವಲ ತಟ್ಟೆ, ಪ್ಲೇಟಷ್ಟೇ ಅಲ್ಲ; ಇನ್ನೂ ಏನೇನು ತಯಾರಿಸುತ್ತಾನೆ ನೋಡಿ!
ಯಶೋಗಾಥೆ - ಅಡಿಕೆ ಎಲೆ ತಟ್ಟೆ-ಪ್ಲೇಟು ತಯಾರಿಸುವ ಉದ್ಯಮದಲ್ಲಿ ಯುವ ಮೆಕ್ಯಾನಿಕಲ್ ಇಂಜಿನಿಯರ್ ಮಾದರಿ ಸಾಧನೆ
Follow us
ಸಾಧು ಶ್ರೀನಾಥ್​
|

Updated on:Oct 10, 2023 | 11:09 AM

ಪುತ್ತೂರು, ಅಕ್ಟೋಬರ್ 10: ನಿರುಪಯುಕ್ತ ಒಣಗಿದ ಅಡಿಕೆ ಎಲೆಗಳಿಂದ ತಟ್ಟೆ-ಪ್ಲೇಟು ತಯಾರಿಕೆ ಉದ್ಯಮದಲ್ಲಿ (arecanut leaf industry) ಯುವ ಮೆಕ್ಯಾನಿಕಲ್ ಇಂಜಿನಿಯರ್ ಒಬ್ಬರು (Mechanical engineer) ಈಟಿಂಗ್ ಪ್ಲೇಟ್, ಸಾಬೂನು ಬಾಕ್ಸ್, ಐಸ್ ಕ್ರೀಂ ಕಪ್ ಮತ್ತು ಚಮಚಗಳಂತಹ ನಾನಾ ವಸ್ತುಗಳನ್ನು ತಯಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡದ ಪುತ್ತೂರು (Puttur) ತಾಲೂಕಿನ ಮಾಡಾವು ನಿವಾಸಿ ಶ್ರೀಕೃಷ್ಣ ಈ ಉದ್ಯಮದಲ್ಲಿ ಸಾಧನೆ ಮಾಡಿದ ಯುವಕ. ಆತನ ಕೃಷಿ ಭೂಮಿಯಲ್ಲಿ ನಿರುಪಯುಕ್ತವಾಗಿ ಬಿದ್ದ ಅಡಿಕೆ ಎಲೆಗಳ ಜೊತೆಗೆ ನೆರೆಹೊರೆಯ ಅಡಿಕೆ ತೋಟಗಳಲ್ಲಿಯೂ ಬಿದ್ದಿರುವ ಎಲೆಗಳನ್ನು ಕೃಷ್ಣ ತನ್ನ ಉದ್ಯಮಕ್ಕೆ ಬಳಸುವ ಕಚ್ಚಾ ವಸ್ತುಗಳನ್ನಾಗಿ ಬಳಸುತ್ತಿದ್ದಾರೆ.

ಅನೇಕರು ಅಡಿಕೆ ಎಲೆಗಳಿಂದ ತಟ್ಟೆಗಳನ್ನು ಮಾತ್ರವೇ ತಯಾರಿಸಿ, ಮಾರಾಟ ಮಾಡುವುದನ್ನೇ ಕಾಯಕವಾಗಿಸಿಕೊಂಡಿದ್ದಾರೆ. ಆದರೆ ಕೃಷ್ಣ ಇಷ್ಟಕ್ಕೇ ಸೀಮಿತವಾಗದೆ ಒಂದೇ ಕಚ್ಚಾ ವಸ್ತುವಿನಿಂದ 60 ವಿವಿಧ ಉತ್ಪನ್ನಗಳನ್ನು ಉತ್ಪಾದಿಸುತ್ತಾನೆ (success story) .

ಸ್ವತಃ ಮೆಕ್ಯಾನಿಕಲ್ ಎಂಜಿನಿಯರ್ ಆಗಿದ್ದುಕೊಂಡು ಶ್ರೀ ಕೃಷ್ಣ ವಿವಿಧ ರೀತಿಯ ಉತ್ಪನ್ನಗಳಿಗೆ ಅಗತ್ಯವಿರುವ ಯಂತ್ರಗಳನ್ನು ಸ್ವತಃ ತಾನೇ ತಯಾರಿಸಿಕೊಂಡಿರುವುದು ಮತ್ತೊಂದು ವಿಶೇಷತೆ. ತಾಲ್ಲೂಕಿನ ಮಡವು ಎಂಬ ಹಳ್ಳಿಯಲ್ಲಿ ತಯಾರಾಗುವ ವಿವಿಧ ರೀತಿಯ ಅಡಿಕೆ ಎಲೆಯ ಉತ್ಪನ್ನಗಳನ್ನು ಮಹಾರಾಷ್ಟ್ರ, ತಮಿಳುನಾಡು, ಕೇರಳ ಮತ್ತು ಗುಜರಾತ್‌ನಂತಹ ಹೊರ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತದೆ. ಅವುಗಳನ್ನು ಅಮೆರಿಕ ಮತ್ತು ಆಸ್ಟ್ರೇಲಿಯಾದಂತಹ ದೇಶಗಳಿಗೂ ರಫ್ತು ಮಾಡಲಾಗುತ್ತದೆ.

ಇದನ್ನೂ ಓದಿ:ಬಿಕಾಂ ಪದವೀಧರನ ಕೃಷಿ ಪಯಣ; 20 ಎಕರೆ ಜಮೀನಿನಲ್ಲಿ ಸಮೃದ್ಧ ಬೆಳೆ, ಸ್ವಾವಲಂಬಿ ಜೀವನದ ಯಶೋಗಾಥೆ ಇಲ್ಲಿದೆ

ಈ ಉದ್ಯಮವು ಸ್ಥಳೀಯ ಮಹಿಳೆಯರಿಗೂ ಉದ್ಯೋಗ ಒದಗಿಸಿದೆ ಎಂಬುದು ಮತ್ತೊಂದು ಸಮಾಧಾನಕರ ಸಂಗತಿ. ಶ್ರೀಕೃಷ್ಣ ತೋರಿದ ಧೈರ್ಯವು ಅವರನ್ನು ಯಶಸ್ವಿ ಉದ್ಯಮಿ ಮತ್ತು ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವವರನ್ನಾಗಿ ಮಾಡಿದೆ ಎಂದು Daijiworld Media ವರದಿ ಮಾಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Tue, 10 October 23

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ