AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾತ್ರವಲ್ಲ, ಮಂಗಳಸೂತ್ರವೂ ನಿಷಿದ್ಧ! ವ್ಯಾಪಕ ಆಕ್ರೋಶ

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಇದೀಗ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಪರೀಕ್ಷೆಯೊಂದಕ್ಕೆ ಹಾಜರಾಗುವವರು ಮಂಗಳಸೂತ್ರ, ಧಾರ್ಮಿಕ ಸಂಕೇತಗಳನ್ನು ತೆಗೆದು ಹಾಜರಾಗಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿರುವುದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾತ್ರವಲ್ಲ, ಮಂಗಳಸೂತ್ರವೂ ನಿಷಿದ್ಧ! ವ್ಯಾಪಕ ಆಕ್ರೋಶ
ಮಂಗಳಸೂತ್ರ (ಸಾಂದರ್ಭಿಕ ಚಿತ್ರ) ಹಾಗೂ ರೈಲ್ವೆ ಮಂಡಳಿ ಪರೀಕ್ಷೆ ಹಾಲ್​​ಟಿಕೆಟ್ ಪ್ರತಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Apr 28, 2025 | 8:43 AM

Share

ಮಂಗಳೂರು, ಏಪ್ರಿಲ್ 28: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Janivar) ತೆಗೆಸಿದ ಪ್ರಕರಣ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲಿಯೇ ಇದೀಗ ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಕೂಡ ಆಕ್ಷೇಪಾರ್ಹ ಕ್ರಮ ಕೈಗೊಂಡಿದೆ. ಈ 29ರಂದು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ಹಾಲ್‌‌ಟಿಕೆಟ್ ನೀಡಲಾಗಿದೆ. ಅದರಲ್ಲಿ, ಮಂಗಳಸೂತ್ರ (Mangal Sutra) ಮತ್ತು ಧಾರ್ಮಿಕ ಸಂಕೇತಗಳನ್ನೆಲ್ಲ ತೆಗೆದಿರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ರೈಲ್ವೆ ನೇಮಕಾತಿ ಮಂಡಳಿಯ ಈ ಕ್ರಮಕ್ಕೆ ಹಿಂದು ಪರ ಸಂಘಟನೆಗಳ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಮಣೇಲ್ ಬೆಸೆಂಟ್ ವಿದ್ಯಾ ಕೇಂದ್ರದಲ್ಲಿ ಕೂಡ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ನೀಡಲಾದ ಹಾಲ್ ಟಿಕೆಟ್‌ನಲ್ಲಿ ಮಂಗಳಸೂತ್ರ ತೆಗೆದಿರಿಸುವಂತೆ ಉಲ್ಲೇಖಿಸಿರುವುದು ಕಂಡುಬಂದಿದ್ದು, ಜಿಲ್ಲೆಯ ಹಿಂದೂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಿವಾರ ಮತ್ತು ಮಂಗಳಸೂತ್ರ ಹಾಕುವುದು ಹಿಂದೂಗಳ ಧಾರ್ಮಿಕ ಸಂಪ್ರದಾಯ. ಅದನ್ನು ತೆಗೆದು ಪರೀಕ್ಷೆ ಬರೆಯುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇಂತಹ ಧರ್ಮ ವಿರೋಧಿ ಧೋರಣೆಯನ್ನು ಸಹಿಸಲು ಸಾಧ್ಯ ಎಂದು ಇಂದು ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ
Image
ಜನಿವಾರ ವಿವಾದ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ಗೆ ಪಿಐಎಲ್
Image
ಜನಿವಾರ ವಿವಾದ; ಅಧಿಕಾರಿಗಳದ್ದೇ ತಪ್ಪೆಂದು ವರದಿ ಸಲ್ಲಿಸಿದ ಡಿಸಿ
Image
ಕರ್ನಾಟಕ ಸಿಇಟಿ ಪರೀಕ್ಷೆ, ಜನಿವಾರ ವಿವಾದ: ನಿಜಕ್ಕೂ ಈವರೆಗೆ ನಡೆದಿದ್ದೇನು?
Image
CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು

‘‘ರೈಲ್ವೆ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆಯು ಏಪ್ರಿಲ್ 28, 29 ಹಾಗೂ 30 ರಂದು ಬೋಂದೆಲ್​ನ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ನಡೆಯಲಿದ್ದು, ಆ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಸಂಪ್ರದಾಯಗಳಾದ ಮಂಗಳಸೂತ್ರ, ಜನಿವಾರಗಳನ್ನೂ ತೆಗೆದು ಹಾಜರಾಗುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ರೀತಿಯ ಧಾರ್ಮಿಕ ವಿರೋಧಿ ಧೋರಣೆ ಸಹಿಸಲು ಅಸಾಧ್ಯ’’ ಎಂದು ವಿಎಚ್​​ಪಿ ಮುಖಂಡ ಶರಣ್ ಪಂಪುವೆಲ್ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶರಣ್ ಪಂಪುವೆಲ್ ಪೋಸ್ಟ್

‘‘ಮಾನ್ಯ ಜಿಲ್ಲಾಧಿಕಾರಿಗಳೇ / ಮಾನ್ಯ ಸಂಸದರೇ ಇಂತಹ ಆದೇಶವನ್ನು ಕೈಬಿಟ್ಟು, ನಡೆಯಲಿರುವ ಪರೀಕ್ಷೆಯಲ್ಲಿ ಹಿಂದೂಗಳ ಭಾವನೆಗೆ ಧಕ್ಕೆಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಆಗ್ರಹಿಸುತ್ತೇನೆ’’ ಎಂದೂ ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಜನಿವಾರ ವಿವಾದ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ಗೆ ಪಿಐಎಲ್, ಮರು ಪರೀಕ್ಷೆಗೆ ಮನವಿ

ಜನಿವಾರ ವಿವಾದ ಕರ್ನಾಟಕದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದಲ್ಲದೆ, ಹಿಂದೂ ಧಾರ್ಮಿಕ ಆಚರಣೆಗಳಿಗೆ ಕಾಂಗ್ರೆಸ್ ಸರ್ಕಾರ ಧಕ್ಕೆ ತರುತ್ತಿದೆ ಎಂದು ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದವು. ಇದೀಗ ರೈಲ್ವೆ ಇಲಾಖೆ ವಿರುದ್ಧವೂ ಅಂಥದ್ದೇ ಆರೋಪ ಕೇಳಿಬಂದಿದೆ. ಇದಕ್ಕೆ ರೈಲ್ವೆ ಇಲಾಖೆ ಏನು ಉತ್ತರ ನೀಡುತ್ತದೆ ಅಥವಾ ಮುಂದೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Mon, 28 April 25

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ