AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು; ಮಳೆನೀರು ಕೊಯ್ಲಿಗೆ ಮಾದರಿಯಾಗಲಿದೆ ಸರ್ಕಾರಿ ಶಾಲೆ, ವಾರ್ಷಿಕ 5 ಲಕ್ಷ ಲೀಟರ್ ನೀರು ಉಳಿತಾಯಕ್ಕೆ ವ್ಯವಸ್ಥೆ

ಶತಮಾನದಷ್ಟು (ಸುಮಾರು 110 ವರ್ಷ) ಹಳೆಯ ಮೂಡುಶೆಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನುದಾನದ ಕೊರತೆ ಎದುರಿಸುತ್ತಿದೆ ಎನ್ನಲಾಗಿದೆ. ಈ ಶಾಲೆಯಲ್ಲಿ ಸದ್ಯ 110 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಮಂಗಳೂರು; ಮಳೆನೀರು ಕೊಯ್ಲಿಗೆ ಮಾದರಿಯಾಗಲಿದೆ ಸರ್ಕಾರಿ ಶಾಲೆ, ವಾರ್ಷಿಕ 5 ಲಕ್ಷ ಲೀಟರ್ ನೀರು ಉಳಿತಾಯಕ್ಕೆ ವ್ಯವಸ್ಥೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Feb 25, 2023 | 9:31 AM

Share

ಮಂಗಳೂರು: ಜಲ ಸಂರಕ್ಷಣೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಶೆಡ್ಡೆಯ (Moodushedde) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (Govt school) ಮಹತ್ವದ ಕೆಲಸಕ್ಕೆ ಮುಂದಾಗಿದೆ. ಮಂಗಳೂರಿನ ‘ಇನ್ನರ್ ವೀಲ್ ಕ್ಲಬ್’ ಸಹಯೋಗದೊಂದಿಗೆ ಶಾಲೆಯಲ್ಲಿ ಮಳೆನೀರು ಕೊಯ್ಲು (Rainwater harvesting) ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ವಾರ್ಷಿಕವಾಗಿ ಸುಮಾರು 5 ಲಕ್ಷ ಲೀಟರ್ ನೀರು ಸಂರಕ್ಷಿಸುವ ಗುರಿ ಹೊಂದಲಾಗಿದೆ. ಈ ವರ್ಷ ನಮ್ಮ ಕ್ಲಬ್ ಅಧ್ಯಕ್ಷರು ಮಳೆ ನೀರು ಕೊಯ್ಲಿಗೆ ಆದ್ಯತೆ ನೀಡಲು ಬಯಸಿದ್ದಾರೆ. ಸದಸ್ಯರ ಸಹಕಾರದೊಂದಿಗೆ ಶಾಲೆಯ ಆವರಣದಲ್ಲಿ ಮಳೆ ನೀರು ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗಿದೆ. 45,000 ರೂ. ವೆಚ್ಚದಲ್ಲಿ ಯೋಜನೆ ಹಮ್ಮಿಕೊಳ್ಳಲಾಗುತ್ತಿದ್ದು, ಇದನ್ನು ಕ್ಲಬ್​​ ನಿರ್ವಹಣೆ ಮಾಡಲಿದೆ ಎಂದು ‘ಇನ್ನರ್ ವೀಲ್ ಕ್ಲಬ್’ ಖಜಾಂಚಿ ಶಿವಾನಿ ಬಾಳಿಗ ತಿಳಿಸಿದ್ದಾರೆ.

ಶತಮಾನದಷ್ಟು (ಸುಮಾರು 110 ವರ್ಷ) ಹಳೆಯ ಮೂಡುಶೆಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನುದಾನದ ಕೊರತೆ ಎದುರಿಸುತ್ತಿದೆ ಎನ್ನಲಾಗಿದೆ. ಈ ಶಾಲೆಯಲ್ಲಿ ಸದ್ಯ 110 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆ ಕಟ್ಟಿಸುವವರು ಗಮನಿಸಿ: ಇನ್ಮುಂದೆ 30*40 ಸೈಟಿನಲ್ಲಿ ಮನೆ ಕಟ್ಟಲು ಮಳೆನೀರು ಕೊಯ್ಲು ಕಡ್ಡಾಯ

ನೀರಿಗಾಗಿ ಶಾಲೆಯಲ್ಲಿ ಬಾವಿಯೊಂದಿದೆ. ಆದರೆ ಅದು ಸಮರ್ಪಕ ಸ್ಥಿತಿಯಲ್ಲಿಲ್ಲ. ಬೇಸಗೆ ಬರುತ್ತಿದ್ದಂತೆ ಅದರಲ್ಲಿರುವ ನೀರು ಖಾಲಿಯಾಗುತ್ತದೆ. ಶಾಲೆಯ ಮೇಲ್ಛಾವಣಿಯಿಂದ ಸಂಗ್ರಹಿಸಿದ ಮಳೆನೀರನ್ನು ಶುದ್ಧೀಕರಿಸಿ ಬಾವಿಗೆ ಬಿಡಲು ವ್ಯವಸ್ಥೆ ಮಾಡಲಾಗುತ್ತದೆ. ಇದರಿಂದ ಸಮೀಪದ ಪ್ರದೇಶಗಳ ಜಲಮಟ್ಟ ಹೆಚ್ಚಳಕ್ಕೂ ಪ್ರಯೋಜನವಾಗಲಿದೆ ಎಂದು ಶಿವಾನಿ ಬಾಳಿಗ ಹೇಳಿದ್ದಾರೆ.

ಮಳೆನೀರು ಕೊಯ್ಲು ಇದೇ ಮೊದಲಲ್ಲ

ಅಂದಹಾಗೆ, ಶಾಲೆಯಲ್ಲಿ ಮಳೆನೀರು ಕೊಯ್ಲು ಆರಂಭಿಸುತ್ತಿರುವುದು ಇದೇ ಮೊದಲಲ್ಲ. ಕೆಲವು ವರ್ಷಗಳ ಹಿಂದೆ ಮಳೆ ನೀರು ಕೊಯ್ಲಿನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಮರ್ಪಕವಾದ ನಿರ್ವಹಣೆ ಇಲ್ಲದೆ ಅದು ಯಶಸ್ವಿಯಾಗಿರಲಿಲ್ಲ. ಇದೀಗ ಮತ್ತೆ ಪರಿಣಾಮಕಾರಿಯಾಗಿ ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಶಾಲೆಯ ಮುಖ್ಯೋಪಾಧ್ಯಯ ಸುಬ್ರಾಯ ಪೈ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:28 am, Sat, 25 February 23

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ