AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು; ಮಳೆನೀರು ಕೊಯ್ಲಿಗೆ ಮಾದರಿಯಾಗಲಿದೆ ಸರ್ಕಾರಿ ಶಾಲೆ, ವಾರ್ಷಿಕ 5 ಲಕ್ಷ ಲೀಟರ್ ನೀರು ಉಳಿತಾಯಕ್ಕೆ ವ್ಯವಸ್ಥೆ

ಶತಮಾನದಷ್ಟು (ಸುಮಾರು 110 ವರ್ಷ) ಹಳೆಯ ಮೂಡುಶೆಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನುದಾನದ ಕೊರತೆ ಎದುರಿಸುತ್ತಿದೆ ಎನ್ನಲಾಗಿದೆ. ಈ ಶಾಲೆಯಲ್ಲಿ ಸದ್ಯ 110 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಮಂಗಳೂರು; ಮಳೆನೀರು ಕೊಯ್ಲಿಗೆ ಮಾದರಿಯಾಗಲಿದೆ ಸರ್ಕಾರಿ ಶಾಲೆ, ವಾರ್ಷಿಕ 5 ಲಕ್ಷ ಲೀಟರ್ ನೀರು ಉಳಿತಾಯಕ್ಕೆ ವ್ಯವಸ್ಥೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Feb 25, 2023 | 9:31 AM

Share

ಮಂಗಳೂರು: ಜಲ ಸಂರಕ್ಷಣೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಶೆಡ್ಡೆಯ (Moodushedde) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (Govt school) ಮಹತ್ವದ ಕೆಲಸಕ್ಕೆ ಮುಂದಾಗಿದೆ. ಮಂಗಳೂರಿನ ‘ಇನ್ನರ್ ವೀಲ್ ಕ್ಲಬ್’ ಸಹಯೋಗದೊಂದಿಗೆ ಶಾಲೆಯಲ್ಲಿ ಮಳೆನೀರು ಕೊಯ್ಲು (Rainwater harvesting) ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ವಾರ್ಷಿಕವಾಗಿ ಸುಮಾರು 5 ಲಕ್ಷ ಲೀಟರ್ ನೀರು ಸಂರಕ್ಷಿಸುವ ಗುರಿ ಹೊಂದಲಾಗಿದೆ. ಈ ವರ್ಷ ನಮ್ಮ ಕ್ಲಬ್ ಅಧ್ಯಕ್ಷರು ಮಳೆ ನೀರು ಕೊಯ್ಲಿಗೆ ಆದ್ಯತೆ ನೀಡಲು ಬಯಸಿದ್ದಾರೆ. ಸದಸ್ಯರ ಸಹಕಾರದೊಂದಿಗೆ ಶಾಲೆಯ ಆವರಣದಲ್ಲಿ ಮಳೆ ನೀರು ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗಿದೆ. 45,000 ರೂ. ವೆಚ್ಚದಲ್ಲಿ ಯೋಜನೆ ಹಮ್ಮಿಕೊಳ್ಳಲಾಗುತ್ತಿದ್ದು, ಇದನ್ನು ಕ್ಲಬ್​​ ನಿರ್ವಹಣೆ ಮಾಡಲಿದೆ ಎಂದು ‘ಇನ್ನರ್ ವೀಲ್ ಕ್ಲಬ್’ ಖಜಾಂಚಿ ಶಿವಾನಿ ಬಾಳಿಗ ತಿಳಿಸಿದ್ದಾರೆ.

ಶತಮಾನದಷ್ಟು (ಸುಮಾರು 110 ವರ್ಷ) ಹಳೆಯ ಮೂಡುಶೆಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನುದಾನದ ಕೊರತೆ ಎದುರಿಸುತ್ತಿದೆ ಎನ್ನಲಾಗಿದೆ. ಈ ಶಾಲೆಯಲ್ಲಿ ಸದ್ಯ 110 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆ ಕಟ್ಟಿಸುವವರು ಗಮನಿಸಿ: ಇನ್ಮುಂದೆ 30*40 ಸೈಟಿನಲ್ಲಿ ಮನೆ ಕಟ್ಟಲು ಮಳೆನೀರು ಕೊಯ್ಲು ಕಡ್ಡಾಯ

ನೀರಿಗಾಗಿ ಶಾಲೆಯಲ್ಲಿ ಬಾವಿಯೊಂದಿದೆ. ಆದರೆ ಅದು ಸಮರ್ಪಕ ಸ್ಥಿತಿಯಲ್ಲಿಲ್ಲ. ಬೇಸಗೆ ಬರುತ್ತಿದ್ದಂತೆ ಅದರಲ್ಲಿರುವ ನೀರು ಖಾಲಿಯಾಗುತ್ತದೆ. ಶಾಲೆಯ ಮೇಲ್ಛಾವಣಿಯಿಂದ ಸಂಗ್ರಹಿಸಿದ ಮಳೆನೀರನ್ನು ಶುದ್ಧೀಕರಿಸಿ ಬಾವಿಗೆ ಬಿಡಲು ವ್ಯವಸ್ಥೆ ಮಾಡಲಾಗುತ್ತದೆ. ಇದರಿಂದ ಸಮೀಪದ ಪ್ರದೇಶಗಳ ಜಲಮಟ್ಟ ಹೆಚ್ಚಳಕ್ಕೂ ಪ್ರಯೋಜನವಾಗಲಿದೆ ಎಂದು ಶಿವಾನಿ ಬಾಳಿಗ ಹೇಳಿದ್ದಾರೆ.

ಮಳೆನೀರು ಕೊಯ್ಲು ಇದೇ ಮೊದಲಲ್ಲ

ಅಂದಹಾಗೆ, ಶಾಲೆಯಲ್ಲಿ ಮಳೆನೀರು ಕೊಯ್ಲು ಆರಂಭಿಸುತ್ತಿರುವುದು ಇದೇ ಮೊದಲಲ್ಲ. ಕೆಲವು ವರ್ಷಗಳ ಹಿಂದೆ ಮಳೆ ನೀರು ಕೊಯ್ಲಿನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಮರ್ಪಕವಾದ ನಿರ್ವಹಣೆ ಇಲ್ಲದೆ ಅದು ಯಶಸ್ವಿಯಾಗಿರಲಿಲ್ಲ. ಇದೀಗ ಮತ್ತೆ ಪರಿಣಾಮಕಾರಿಯಾಗಿ ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಶಾಲೆಯ ಮುಖ್ಯೋಪಾಧ್ಯಯ ಸುಬ್ರಾಯ ಪೈ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:28 am, Sat, 25 February 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?