AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲಿ ಚಂದ್ರನ ದರ್ಶನ: ನಾಳೆಯಿಂದ ರಂಜಾನ್ ಉಪವಾಸ ಆರಂಭ

Ramadan 2024: ಸೌದಿ ಅರೇಬಿಯಾದಲ್ಲಿ ನಿನ್ನೆ ಚಂದ್ರನ ದರ್ಶನವಾಗಿದ್ದು, ಇಂದಿನಿಂದ ರಂಜಾನ್ ತಿಂಗಳು ಆರಂಭಗೊಂಡಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಚಂದ್ರನ ದರ್ಶನವಾಗಿದ್ದು, ನಾಳೆಯಿಂದ ಉಪವಾಸ ಆರಂಭವಾಗಲಿದೆ. ಈ ಬಗ್ಗೆ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಮಾಹಿತಿ ನೀಡಿದ್ದಾರೆ.

ಕರಾವಳಿಯಲ್ಲಿ ಚಂದ್ರನ ದರ್ಶನ: ನಾಳೆಯಿಂದ ರಂಜಾನ್ ಉಪವಾಸ ಆರಂಭ
ಕರಾವಳಿಯಲ್ಲಿ ಚಂದ್ರನ ದರ್ಶನ: ನಾಳೆಯಿಂದ ರಂಜಾನ್ ಉಪವಾಸ ಆರಂಭ (ಸಾಂದರ್ಭಿಕ ಚಿತ್ರ)
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on:Mar 11, 2024 | 10:15 PM

Share

ಮಂಗಳೂರು, ಮಾ.11: ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಚಂದ್ರನ ದರ್ಶನವಾಗಿದ್ದು, ನಾಳೆಯಿಂದ ಇಸ್ಲಾಂ ಮತದ ಪವಿತ್ರ ರಂಜಾನ್ (Ramadan 2024) ತಿಂಗಳು ಆರಂಭವಾಗಲಿದೆ. ದಕ್ಷಿಣ ಕನ್ನಡ (Dakshina Kannada), ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಮಾಹಿತಿ ನೀಡಿದ್ದಾರೆ.

ಮಂಗಳವಾರದಿಂದ ಉಪವಾಸ ಆಚರಿಸುವಂತೆ ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್‌ಬುಖಾರಿ ಕರೆ ನೀಡಿದ್ದಾಗಿ ಪ್ರಕಟನೆ ಹೊರಡಿಸಲಾಗಿದೆ.

ಇದನ್ನೂ ಓದಿ: Ramadan 2024: ರಂಜಾನ್ ಹಬ್ಬ; ಭಾರತದಲ್ಲಿ ಚಂದ್ರನ ದರ್ಶನ ಯಾವಾಗ?

ದೇಶದ ವಿವಿಧ ಭಾಗಗಳಲ್ಲಿ ನಾಳೆಯಿಂದ ರಂಜಾನ್

ಪವಿತ್ರ ರಂಜಾನ್ ತಿಂಗಳ ಆರಂಭಿಸಲು ಚಂದ್ರನ ದರ್ಶನಕ್ಕಾಗಿ ಪ್ರಪಂಚದಾದ್ಯಂತದ ಮುಸ್ಲಿಮರು ಕಾತುರದಿಂದ ಕಾಯುತ್ತಿದ್ದರು. ಇದೀಗ ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಚಂದ್ರನ ದರ್ಶನವಾಗಿದ್ದು, ಭಾರತದ ವಿವಿಧ ಭಾಗಗಳಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಮಂಗಳವಾರದಿಂದ ಅಂದರೆ, ನಾಳೆಯಿಂದಲೇ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಚಂದ್ರನ ದರ್ಶನವಾಗಿರುವುದರಿಂದ ಮೊದಲ ರಂಜಾನ್ ಮಂಗಳವಾರ, ಮಾರ್ಚ್ 12 ರಂದು ಬರುತ್ತದೆ ಎಂದು ಘೋಷಿಸಿದ್ದಾಗಿ ರುಯಾತ್-ಎ-ಹಿಲಾಲ್ ಸಮಿತಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Mon, 11 March 24

ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ