ಕರಾವಳಿಯಲ್ಲಿ ಚಂದ್ರನ ದರ್ಶನ: ನಾಳೆಯಿಂದ ರಂಜಾನ್ ಉಪವಾಸ ಆರಂಭ

Ramadan 2024: ಸೌದಿ ಅರೇಬಿಯಾದಲ್ಲಿ ನಿನ್ನೆ ಚಂದ್ರನ ದರ್ಶನವಾಗಿದ್ದು, ಇಂದಿನಿಂದ ರಂಜಾನ್ ತಿಂಗಳು ಆರಂಭಗೊಂಡಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಚಂದ್ರನ ದರ್ಶನವಾಗಿದ್ದು, ನಾಳೆಯಿಂದ ಉಪವಾಸ ಆರಂಭವಾಗಲಿದೆ. ಈ ಬಗ್ಗೆ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಮಾಹಿತಿ ನೀಡಿದ್ದಾರೆ.

ಕರಾವಳಿಯಲ್ಲಿ ಚಂದ್ರನ ದರ್ಶನ: ನಾಳೆಯಿಂದ ರಂಜಾನ್ ಉಪವಾಸ ಆರಂಭ
ಕರಾವಳಿಯಲ್ಲಿ ಚಂದ್ರನ ದರ್ಶನ: ನಾಳೆಯಿಂದ ರಂಜಾನ್ ಉಪವಾಸ ಆರಂಭ (ಸಾಂದರ್ಭಿಕ ಚಿತ್ರ)
Edited By:

Updated on: Mar 11, 2024 | 10:15 PM

ಮಂಗಳೂರು, ಮಾ.11: ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಚಂದ್ರನ ದರ್ಶನವಾಗಿದ್ದು, ನಾಳೆಯಿಂದ ಇಸ್ಲಾಂ ಮತದ ಪವಿತ್ರ ರಂಜಾನ್ (Ramadan 2024) ತಿಂಗಳು ಆರಂಭವಾಗಲಿದೆ. ದಕ್ಷಿಣ ಕನ್ನಡ (Dakshina Kannada), ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಮಾಹಿತಿ ನೀಡಿದ್ದಾರೆ.

ಮಂಗಳವಾರದಿಂದ ಉಪವಾಸ ಆಚರಿಸುವಂತೆ ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್‌ಬುಖಾರಿ ಕರೆ ನೀಡಿದ್ದಾಗಿ ಪ್ರಕಟನೆ ಹೊರಡಿಸಲಾಗಿದೆ.

ಇದನ್ನೂ ಓದಿ: Ramadan 2024: ರಂಜಾನ್ ಹಬ್ಬ; ಭಾರತದಲ್ಲಿ ಚಂದ್ರನ ದರ್ಶನ ಯಾವಾಗ?

ದೇಶದ ವಿವಿಧ ಭಾಗಗಳಲ್ಲಿ ನಾಳೆಯಿಂದ ರಂಜಾನ್

ಪವಿತ್ರ ರಂಜಾನ್ ತಿಂಗಳ ಆರಂಭಿಸಲು ಚಂದ್ರನ ದರ್ಶನಕ್ಕಾಗಿ ಪ್ರಪಂಚದಾದ್ಯಂತದ ಮುಸ್ಲಿಮರು ಕಾತುರದಿಂದ ಕಾಯುತ್ತಿದ್ದರು. ಇದೀಗ ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಚಂದ್ರನ ದರ್ಶನವಾಗಿದ್ದು, ಭಾರತದ ವಿವಿಧ ಭಾಗಗಳಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಮಂಗಳವಾರದಿಂದ ಅಂದರೆ, ನಾಳೆಯಿಂದಲೇ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಚಂದ್ರನ ದರ್ಶನವಾಗಿರುವುದರಿಂದ ಮೊದಲ ರಂಜಾನ್ ಮಂಗಳವಾರ, ಮಾರ್ಚ್ 12 ರಂದು ಬರುತ್ತದೆ ಎಂದು ಘೋಷಿಸಿದ್ದಾಗಿ ರುಯಾತ್-ಎ-ಹಿಲಾಲ್ ಸಮಿತಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Mon, 11 March 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us