AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸುರತ್ಕಲ್ ಬೀಚ್ ಬಳಿ ಕನ್ನಡಿ ಹಾವಿನಂತಿರುವ ಸ್ಪಾಟೆಡ್ ಮೊರೈ ಈಲ್ಸ್ ಮೀನು ಪತ್ತೆ

ಅಪರೂಪದ ಸ್ಪಾಟೆಡ್ ಮೊರೈ ಈಲ್ಸ್ ಮೀನು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬೀಚ್ ಬಳಿ ಪತ್ತೆಯಾಗಿದೆ. ಸ್ಥಳೀಯವಾಗಿ ಇದನ್ನು ಆರೋಳಿ ಮೀನು ಎಂದು ಕರೆಯಲಾಗುತ್ತದೆ.

ಮಂಗಳೂರು: ಸುರತ್ಕಲ್ ಬೀಚ್ ಬಳಿ ಕನ್ನಡಿ ಹಾವಿನಂತಿರುವ ಸ್ಪಾಟೆಡ್ ಮೊರೈ ಈಲ್ಸ್ ಮೀನು ಪತ್ತೆ
ಸುರತ್ಕಲ್ ಬೀಚ್ ಬಳಿ ಕನ್ನಡಿ ಹಾವಿನಂತಿರುವ ಸ್ಪಾಟೆಡ್ ಮೊರೈ ಈಲ್ಸ್ ಮೀನು ಪತ್ತೆ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 18, 2023 | 4:14 PM

Share

ಮಂಗಳೂರು, ಜುಲೈ 18: ಅಪರೂಪ ಹಾಗೂ ಆಕರ್ಷಣೀಯವಾದ ಸ್ಪಾಟೆಡ್ ಮೊರೈ ಈಲ್ಸ್ ಮೀನು (Morai Eels Fish) ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬೀಚ್ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಯಾಗಿರುವ ಬಗ್ಗೆ ವರದಿಯಾಗಿದೆ. ಇದರ ವೈಜ್ಞಾನಿಕ ಹೆಸರು ಜಿಮ್ನೋಥೊರಾಕ್ಸ್ ಮೊರಿಂಗಾ. ಇದನ್ನು ಸ್ಥಳೀಯವಾಗಿ ಆರೋಳಿ ಮೀನು ಎಂಬುದಾಗಿ ಕರೆಯಲಾಗುತ್ತದೆ. ತಕ್ಷಣ ನೋಡಲು ಕನ್ನಡಿ ಹಾವಿನಂತೆ ಕಂಡು ಬರುವ ಈ ಮೀನು ಕಪ್ಪು ಚುಕ್ಕೆಗಳಿಂದ ಬಹಳಷ್ಟು ಆಕರ್ಷಣೀಯವಾಗಿದೆ.

ಈ ಜಾತಿಯ ಮೀನು ಹೆಚ್ಚಾಗಿ ಕೆಂಪು ಬಣ್ಣದಿಂದ ಕೂಡಿರುತ್ತದೆ. ಆದರೆ ಈ ರೀತಿ ಚುಕ್ಕೆಗಳೊಂದಿಗೆ ಕಂಡುಬಂದಿರುವ ಈ ಮೀನು ಸ್ಥಳೀಯರಿಗೆ ಅಪರೂಪವಾಗಿದೆ. ಈ ಮೀನು ದ್ವೀಪದ ಬಳಿ ಇರುವ ಹವಳ ದಿಬ್ಬದಂತಹ ಸ್ಥಳಗಳಲ್ಲಿ ವಾಸ ಮಾಡುತ್ತದೆ. ಪ್ರಕ್ಷುಬ್ಧವಾದ ಕಡಲಿನ ಅಲೆಗಳ ಅಬ್ಬರದಿಂದ ತೀರಕ್ಕೆ ಬಂದಿರಬಹುದು ಎಂದು ಮಂಗಳೂರು ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯ ಮಂಗಳೂರು ಪ್ರಾದೇಶಿಕ ಕೇಂದ್ರ ವಿಜ್ಞಾನಿ ರಾಜೇಶ್ ಕೆ.ಎಂ. ತಿಳಿಸಿದ್ದಾರೆ.

ಇದನ್ನೂ ಓದಿ: Pulasa Fish: ಗೋದಾವರಿ ನದಿಯಲ್ಲಿ ಸಿಕ್ಕಿದ 2 ಕಿಲೋ ಪುಲಸ ಮೀನು; ಹರಾಜಿನಲ್ಲಿ ದಾಖಲೆ ಬೆಲೆಗೆ ಮಾರಾಟ

ಈ ಮೀನು ಸಾಮಾನ್ಯವಾಗಿ 60 ಸೆ.ಮೀ. ಉದ್ದ ಬೆಳೆಯುತ್ತದೆ. ಗರಿಷ್ಠ 2.51 ಕೆ.ಜಿ. ತೂಗುತ್ತದೆ. ಈ ಮೀನು ಒಂಟಿಯಾಗಿ ವಾಸ ಮಾಡುತ್ತದೆ. ಉಷ್ಣ ವಲಯದ ನೀರಿನಲ್ಲಿ ವಾಸಿಸುವ ಈ ಮೀನುಗಳು ಮೊಟ್ಟೆ ಇಡಲು ವಲಸೆ ಹೋಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತುಳುವಿನಲ್ಲಿ ಈ ಮೀನುನನ್ನು ಮರಂಚಾ ಮೀನು ಎಂದು ಕರೆಯುತ್ತಾರೆ. ಕಲ್ಲು ಇರುವ ಪ್ರದೇಶದಲ್ಲಿ ಈ ಮೀನು ಗಾಳಕ್ಕೆ ಅಪರೂಪಕ್ಕೆ ಸಿಗುತ್ತದೆ. ಇದರ ಹಲ್ಲು ಹರಿತವಾಗಿರುತ್ತದೆ. ಇದನ್ನು ಸ್ಥಳೀಯರು ತಿನ್ನುವುದಿಲ್ಲ ಎಂದು ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!