Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಹಲವೆಡೆ ಅಂಗನವಾಡಿಗಳಲ್ಲಿ ಮತ್ತೆ ಕೊಳೆತ ಮೊಟ್ಟೆ ಪೂರೈಕೆ; ಗರ್ಭಿಣಿ, ಮಕ್ಕಳು ಅಸ್ವಸ್ಥ

ಕಳೆದ ತಿಂಗಳು ಮಂಗಳೂರಿನ ಹಲವೆಡೆ ಕೊಳೆತ ಮೊಟ್ಟೆಗಳು ಪೂರೈಕೆಯಾಗಿತ್ತು. ಈ ಬಾರಿಯೂ ಮೊಟ್ಟೆ ಪೂರೈಸುವ ಗುತ್ತಿಗೆದಾರರು ಅಂಗನವಾಡಿಗೆ ಮತ್ತೆ ಕೊಳೆತ ಮೊಟ್ಟೆ ಕೊಟ್ಟಿದ್ದಾರೆ. ಈ ಹಿನ್ನಲೆ ಇದೀಗ ಕೊಳೆತ ಮೊಟ್ಟೆ ಸೇವಿಸಿ ಗರ್ಭಿಣಿ ಮತ್ತು ಮಗು ಅಸ್ವಸ್ಥರಾದ ಘಟನೆ ಬೆಳಕಿಗೆ ಬಂದಿದೆ.

ಮಂಗಳೂರಿನ ಹಲವೆಡೆ ಅಂಗನವಾಡಿಗಳಲ್ಲಿ ಮತ್ತೆ ಕೊಳೆತ ಮೊಟ್ಟೆ ಪೂರೈಕೆ; ಗರ್ಭಿಣಿ, ಮಕ್ಕಳು ಅಸ್ವಸ್ಥ
ಮಂಗಳೂರಿನಲ್ಲಿ ಕೊಳೆತ ಮೊಟ್ಟೆ ಸೇವಿಸಿ ಗರ್ಭೀಣಿ ಅಸ್ವಸ್ಥ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 10, 2023 | 4:35 PM

ಮಂಗಳೂರು, ಆ.10: ಇತ್ತೀಚೆಗೆ ರಾಜ್ಯದ ಹಲವೆಡೆ ಕೊಳೆತ ಮೊಟ್ಟೆಗಳು(Rotten Eggs) ನೀಡಿದ ಆರೋಪ ಕೇಳಿಬಂದಿತ್ತು. ಅದರಂತೆ ಇದೀಗ ಮಂಗಳೂರು(Mangalore) ಹೊರವಲಯದ ಕಾಟಿಪಳ್ಳ ಆಸುಪಾಸಿನಲ್ಲಿನ ಅಂಗನವಾಡಿ (Anganwadi) ಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದ್ದು, ಆಕಾಶಭವನದಲ್ಲಿ ಗರ್ಭಿಣಿ ಮತ್ತು ಆಕೆಯ ಮಗು ಮೊಟ್ಟೆ ತಿಂದು ಅಸ್ವಸ್ಥರಾದ ಘಟನೆ ನಡೆದಿದೆ. ಕಳೆದ ತಿಂಗಳು ಮಂಗಳೂರಿನ ಹಲವೆಡೆ ಕೊಳೆತ ಮೊಟ್ಟೆಗಳು ಪೂರೈಕೆಯಾಗಿತ್ತು. ಈ ಬಾರಿಯೂ ಮೊಟ್ಟೆ ಪೂರೈಸುವ ಗುತ್ತಿಗೆದಾರರು ಅಂಗನವಾಡಿಗೆ ಮತ್ತೆ ಕೊಳೆತ ಮೊಟ್ಟೆ ಕೊಟ್ಟಿದ್ದಾರೆ.

ರಾಜ್ಯದ ಹಲವೆಡೆ ಪೂರೈಕೆಯಾಗುತ್ತಿರುವ ಕೊಳೆತ ಮೊಟ್ಟೆಗಳು

ಹೌದು, ಇಂತಹ ಪ್ರಕರಣಗಳು ಇದೆ ಮೊದಲಲ್ಲ. ಹಾಸನ, ಹಾವೇರಿ, ಕೊಡಗು, ಕೋಲಾರ ಸೇರಿದಂತೆ ಅನೇಕ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಕೊಳೆತ ಮೊಟ್ಟೆಗಳು ಪೂರೈಕೆಯಾಗುತ್ತಿದೆ. ಈ ಹಿನ್ನಲೆ ಸರ್ಕಾರದ ವಿರುದ್ಧ ಜನ ಆಕ್ರೋಶ ಹೊರ ಹಾಕಿದ್ದರು. ಜುಲೈ 13 ರಂದು ಹಾಸನ‌ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ವಿತರಣೆ ಮಾಡಲಾಗಿದ್ದ ಮೊಟ್ಟೆಗಳು ಕಳಪೆಯಾಗಿದ್ದು, ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:Rotten Eggs: ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆ ಸರಬರಾಜು ಅಗಿರುವುದನ್ನು ಒಪ್ಪಿ ವಿಷಾದ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್

ಅದರಂತೆ ಜುಲೈ 6 ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಹೌಸಿಂಗ್ ಬೋರ್ಡ್ ಪ್ರದೇಶದ ಕಿಕ್ಕೀರಮ್ಮ ದೇವಾಲಯದ ಸಮೀಪವಿರುವ ಅಂಗನವಾಡಿಗೆ ವಿತರಣೆ ಮಾಡಿದ್ದ ಮೊಟ್ಟೆಗಳು ಕಳಪೆಯಾಗಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ವಿತರಣೆ ಮಾಡಿರುವ ಮೊಟ್ಟೆಗಳು ಕಳಪೆಯಾಗಿದೆ. ಇನ್ನು ಘಟನೆಯಲ್ಲಿ ಮೊಟ್ಟೆ ವಿತರಣೆ ಮಾಡಿರುವ ಗುತ್ತಿಗೆದಾರ ಹಾಗೂ ಅಧಿಕಾರಿಗಳು ಶಾಮೀಲಾಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಮಹಿಳೆಯರು ಅಗ್ರಹಿಸಿದ್ದರು.

ಕೊಡಗು ಜಿಲ್ಲೆಯಲ್ಲೂ ಕೊಳೆತ ಮೊಟ್ಟೆ ವಿತರಣೆ

ಇನ್ನು ಇಂತಹ ಎಷ್ಟೇ ಘಟನೆಗಳು ನಡೆದರೂ, ಗುತ್ತಿಗೆದಾರರು ಮಾತ್ರ ಇದರ ಬಗ್ಗೆ ತಲೆಕೆಡಸಿಕೊಂಡಿಲ್ಲ. ಅದರಂತೆ ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವನತ್ತೂರು ಗ್ರಾಮದ ಅಂಗನವಾಡಿಯಲ್ಲಿಯೂ ಕೊಳೆತ ಮೊಟ್ಟೆಗಳನ್ನು ಪೂರೈಕೆ ಮಾಡಲಾಗಿತ್ತು. ಹೀಗಾಗಿ ಸ್ಥಳೀಯರು ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಇದೀಗ ಮಂಗಳೂರಿನಲ್ಲಿ ಕೊಳೆತ ಮೊಟ್ಟೆ ತಿಂದು ಅಸ್ವಸ್ಥರಾದ ಘಟನೆ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Thu, 10 August 23

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ